AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ರಾಹಿಂ ವಿರುದ್ಧ ಹರಿಹಾಯ್ದ ಉಗ್ರಪ್ಪ: ವಕ್ಫ್​ ಬೋರ್ಡ್​ ಆಸ್ತಿ ಕಬಳಿಕೆ ಆರೋಪ

ವಕ್ಫ್​ ಬೋರ್ಡ್​ಗೆ ಸೇರಿದ ಆಸ್ತಿ ಕಬಳಿಸಿದ್ದೀರಿ ಎಂದು ದೂರಿರುವ ಉಗ್ರಪ್ಪ ಸಾರ್ವಜನಿಕ ಚರ್ಚೆಗೆ ಬರುವಂತೆ ಇಬ್ರಾಹಿಂ ಅವರಿಗೆ ಸವಾಲು ಹಾಕಿದ್ದಾರೆ.

ಇಬ್ರಾಹಿಂ ವಿರುದ್ಧ ಹರಿಹಾಯ್ದ ಉಗ್ರಪ್ಪ: ವಕ್ಫ್​ ಬೋರ್ಡ್​ ಆಸ್ತಿ ಕಬಳಿಕೆ ಆರೋಪ
ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 14, 2022 | 11:39 PM

Share

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ವಿರೋಧ ಪಕ್ಷ ನಾಯಕನ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿರುವ ಸಿ.ಎಂ.ಇಬ್ರಾಹಿಂ ವಿರುದ್ಧ ಕಾಂಗ್ರೆಸ್​ ನಾಯಕ ವಿ.ಎಸ್.ಉಗ್ರಪ್ಪ ಹರಿಹಾಯ್ದಿದ್ದಾರೆ. ನಿಷ್ಠೆ ಮತ್ತು ಪ್ರಾಮಾಣಿಕತೆ ನಿಮಗೆ ಇಲ್ಲ. ಜನ್ಮ ಕೊಟ್ಟ ಧರ್ಮ, ಜನಾಂಗಕ್ಕೂ ನಿಮ್ಮಿಂದ ಮೋಸ ಆಗಿದೆ. ವಕ್ಫ್​ ಬೋರ್ಡ್​ಗೆ ಸೇರಿದ ಆಸ್ತಿ ಕಬಳಿಸಿದ್ದೀರಿ ಎಂದು ದೂರಿರುವ ಅವರು ಸಾರ್ವಜನಿಕ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. ಇಬ್ರಾಹಿಂಗೆ ಎರಡು ನಾಲಗೆ ಇದೆ. ಯಾವಾಗಲೂ ದ್ವಂದ್ವ ನಿಲುವು ಹೊಂದಿರುವ ಮನುಷ್ಯ. ಬೆಳಿಗ್ಗೆ ಯಡಿಯೂರಪ್ಪ, ಮಧ್ಯಾಹ್ನ ದೇವೇಗೌಡ, ರಾತ್ರಿ ಡಿ.ಕೆ.ಶಿವಕುಮಾರ್ ಎಂದು ತಿರುಗುತ್ತಾರೆ. ಇಬ್ರಾಹಿಂ ಒಬ್ಬ ದೊಡ್ಡ ಬ್ಲ್ಯಾಕ್​ಮೇಲ್ ರಾಜಕಾರಣಿ. ಸಂದರ್ಭ ಬಂದರೆ ಅವರ ವಿರುದ್ಧ ಪಕ್ಷದ ಹೈಕಮಾಂಡ್​ಗೆ ದೂರು ನೀಡುವೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಾಬ್​ ವಿವಾದ ಬಗೆಹರಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ. ಕೇಂದ್ರ, ರಾಜ್ಯ ಸರ್ಕಾರಗಳ ಗುಪ್ತಚರ ಇಲಾಖೆ ಸತ್ತುಹೋಗಿದೆಯೇ? ಸರ್ಕಾರದ ವೈಫಲ್ಯದಿಂದ ಹಿಜಾಬ್ ವಿವಾದ ಇಷ್ಟು ದೊಡ್ಡದಾಗಿದೆ. ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎನ್ನುವ ಸಚಿವ ಕೆ.ಎಸ್.ಈಶ್ವರಪ್ಪ ಧ್ವಜಾರೋಹಣ ನಿಯಮಗಳನ್ನು ಓದಿಲ್ಲ. ಅವರ ವಿರುದ್ಧ ರಾಜ್ಯಪಾಲರು ಶಿಸ್ತುಕ್ರಮ ಜರುಗಿಸಬೇಕು. ರಾಮನ ಜಪ ಮಾಡುವ ಬಿಜೆಪಿಯವರು ಆದರ್ಶ ರೂಢಿಸಿಕೊಳ್ಳಬೇಕು. ವೋಟ್ ಬ್ಯಾಂಕ್​ಗಾಗಿ ಬಿಜೆಪಿಯವರು ರಾಜಕೀಯ ಮಾಡ್ತಿದ್ದಾರೆ. ರಾಜ್ಯದ ಜನತೆ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಹಿಜಾಬ್ ಕುರಿತು ಹೈಕೋರ್ಟ್​ನ ಮಧ್ಯಂತರ ಆದೇಶ ಇದ್ದರೂ ಅದ ಪಾಲನೆ ಈ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಯಾವ ಮುಖ ಇಟ್ಟುಕೊಂಡು ನೀವು ಸರ್ಕಾರ ಮಾಡುತ್ತಿದ್ದೀರಿ. ಸರ್ಕಾರ ನಡೆಸಲು ಬಿಜೆಪಿಗೆ ಆಗುತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ರಾಜೀನಾಮೆ ನೀಡುವುದಿಲ್ಲ, ಹೈಕಮಾಂಡ್​ನಿಂದ ಬುಲಾವ್ ಬಂದಿದೆ: ಮುನಿಸಿಕೊಂಡಿದ್ದ ಸಿಎಂ ಇಬ್ರಾಹಿಂ ಯುಟರ್ನ್

ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಕಥೆ ಮುಗಿದಿದೆ; ಸಿಎಂ ಬೊಮ್ಮಾಯಿ ಸರ್ಕಾರ ಪಂಕ್ಚರ್ ಆಗಿರುವ ಬಸ್: ಸಿಎಂ ಇಬ್ರಾಹಿಂ ಟೀಕೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ