AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ರಾಹಿಂ ವಿರುದ್ಧ ಹರಿಹಾಯ್ದ ಉಗ್ರಪ್ಪ: ವಕ್ಫ್​ ಬೋರ್ಡ್​ ಆಸ್ತಿ ಕಬಳಿಕೆ ಆರೋಪ

ವಕ್ಫ್​ ಬೋರ್ಡ್​ಗೆ ಸೇರಿದ ಆಸ್ತಿ ಕಬಳಿಸಿದ್ದೀರಿ ಎಂದು ದೂರಿರುವ ಉಗ್ರಪ್ಪ ಸಾರ್ವಜನಿಕ ಚರ್ಚೆಗೆ ಬರುವಂತೆ ಇಬ್ರಾಹಿಂ ಅವರಿಗೆ ಸವಾಲು ಹಾಕಿದ್ದಾರೆ.

ಇಬ್ರಾಹಿಂ ವಿರುದ್ಧ ಹರಿಹಾಯ್ದ ಉಗ್ರಪ್ಪ: ವಕ್ಫ್​ ಬೋರ್ಡ್​ ಆಸ್ತಿ ಕಬಳಿಕೆ ಆರೋಪ
ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ
TV9 Web
| Edited By: |

Updated on: Feb 14, 2022 | 11:39 PM

Share

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ವಿರೋಧ ಪಕ್ಷ ನಾಯಕನ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿರುವ ಸಿ.ಎಂ.ಇಬ್ರಾಹಿಂ ವಿರುದ್ಧ ಕಾಂಗ್ರೆಸ್​ ನಾಯಕ ವಿ.ಎಸ್.ಉಗ್ರಪ್ಪ ಹರಿಹಾಯ್ದಿದ್ದಾರೆ. ನಿಷ್ಠೆ ಮತ್ತು ಪ್ರಾಮಾಣಿಕತೆ ನಿಮಗೆ ಇಲ್ಲ. ಜನ್ಮ ಕೊಟ್ಟ ಧರ್ಮ, ಜನಾಂಗಕ್ಕೂ ನಿಮ್ಮಿಂದ ಮೋಸ ಆಗಿದೆ. ವಕ್ಫ್​ ಬೋರ್ಡ್​ಗೆ ಸೇರಿದ ಆಸ್ತಿ ಕಬಳಿಸಿದ್ದೀರಿ ಎಂದು ದೂರಿರುವ ಅವರು ಸಾರ್ವಜನಿಕ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. ಇಬ್ರಾಹಿಂಗೆ ಎರಡು ನಾಲಗೆ ಇದೆ. ಯಾವಾಗಲೂ ದ್ವಂದ್ವ ನಿಲುವು ಹೊಂದಿರುವ ಮನುಷ್ಯ. ಬೆಳಿಗ್ಗೆ ಯಡಿಯೂರಪ್ಪ, ಮಧ್ಯಾಹ್ನ ದೇವೇಗೌಡ, ರಾತ್ರಿ ಡಿ.ಕೆ.ಶಿವಕುಮಾರ್ ಎಂದು ತಿರುಗುತ್ತಾರೆ. ಇಬ್ರಾಹಿಂ ಒಬ್ಬ ದೊಡ್ಡ ಬ್ಲ್ಯಾಕ್​ಮೇಲ್ ರಾಜಕಾರಣಿ. ಸಂದರ್ಭ ಬಂದರೆ ಅವರ ವಿರುದ್ಧ ಪಕ್ಷದ ಹೈಕಮಾಂಡ್​ಗೆ ದೂರು ನೀಡುವೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಾಬ್​ ವಿವಾದ ಬಗೆಹರಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ. ಕೇಂದ್ರ, ರಾಜ್ಯ ಸರ್ಕಾರಗಳ ಗುಪ್ತಚರ ಇಲಾಖೆ ಸತ್ತುಹೋಗಿದೆಯೇ? ಸರ್ಕಾರದ ವೈಫಲ್ಯದಿಂದ ಹಿಜಾಬ್ ವಿವಾದ ಇಷ್ಟು ದೊಡ್ಡದಾಗಿದೆ. ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎನ್ನುವ ಸಚಿವ ಕೆ.ಎಸ್.ಈಶ್ವರಪ್ಪ ಧ್ವಜಾರೋಹಣ ನಿಯಮಗಳನ್ನು ಓದಿಲ್ಲ. ಅವರ ವಿರುದ್ಧ ರಾಜ್ಯಪಾಲರು ಶಿಸ್ತುಕ್ರಮ ಜರುಗಿಸಬೇಕು. ರಾಮನ ಜಪ ಮಾಡುವ ಬಿಜೆಪಿಯವರು ಆದರ್ಶ ರೂಢಿಸಿಕೊಳ್ಳಬೇಕು. ವೋಟ್ ಬ್ಯಾಂಕ್​ಗಾಗಿ ಬಿಜೆಪಿಯವರು ರಾಜಕೀಯ ಮಾಡ್ತಿದ್ದಾರೆ. ರಾಜ್ಯದ ಜನತೆ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಹಿಜಾಬ್ ಕುರಿತು ಹೈಕೋರ್ಟ್​ನ ಮಧ್ಯಂತರ ಆದೇಶ ಇದ್ದರೂ ಅದ ಪಾಲನೆ ಈ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಯಾವ ಮುಖ ಇಟ್ಟುಕೊಂಡು ನೀವು ಸರ್ಕಾರ ಮಾಡುತ್ತಿದ್ದೀರಿ. ಸರ್ಕಾರ ನಡೆಸಲು ಬಿಜೆಪಿಗೆ ಆಗುತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ರಾಜೀನಾಮೆ ನೀಡುವುದಿಲ್ಲ, ಹೈಕಮಾಂಡ್​ನಿಂದ ಬುಲಾವ್ ಬಂದಿದೆ: ಮುನಿಸಿಕೊಂಡಿದ್ದ ಸಿಎಂ ಇಬ್ರಾಹಿಂ ಯುಟರ್ನ್

ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಕಥೆ ಮುಗಿದಿದೆ; ಸಿಎಂ ಬೊಮ್ಮಾಯಿ ಸರ್ಕಾರ ಪಂಕ್ಚರ್ ಆಗಿರುವ ಬಸ್: ಸಿಎಂ ಇಬ್ರಾಹಿಂ ಟೀಕೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ