AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tipu Jayanti: ಬೆಂಗಳೂರಿನಲ್ಲಿ ಟಿಪ್ಪು ಜಯಂತಿ ವೇಳೆ ಖಡ್ಗ ಝಳಪಿಸಿದ ಕಾಂಗ್ರೆಸ್ ನಾಯಕರು

ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಟಿಪ್ಪು ಜಯಂತಿ ವೇಳೆ ಖಡ್ಗ ಹಿಡಿದು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Tipu Jayanti: ಬೆಂಗಳೂರಿನಲ್ಲಿ ಟಿಪ್ಪು ಜಯಂತಿ ವೇಳೆ ಖಡ್ಗ ಝಳಪಿಸಿದ ಕಾಂಗ್ರೆಸ್ ನಾಯಕರು
ಟಿಪ್ಪು ಜಯಂತಿಯಂದು ಖಡ್ಗ ಝಳಪಿಸಿದ ಜಮೀರ್ ಅಹಮದ್
TV9 Web
| Edited By: |

Updated on: Nov 11, 2022 | 12:52 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಟಿಪ್ಪು ಜಯಂತಿ (Tipu Jayanti) ಆಚರಣೆ ವೇಳೆ ಹಲವು ಸ್ಥಳೀಯ ಕಾಂಗ್ರೆಸ್ ಮುಖಂಡರು (Congress Leaders) ಖಡ್ಗ ಝಳಪಿಸುತ್ತಿರುವುದು ಕಂಡುಬಂದಿತು. ಕರ್ನಾಟಕದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳ ಬಳಕೆಯನ್ನು ನಿಷೇಧಿಸಿದ್ದರೂ ಕಾಂಗ್ರೆಸ್ ನಾಯಕರು ಖಡ್ಗ ಪ್ರದರ್ಶಿಸಿರುವುದು ಟೀಕೆಗೆ ಕಾರಣವಾಗಿದೆ. ಗುರುವಾರ ಬೆಂಗಳೂರಿನ ಗುಡ್ಡದಹಳ್ಳಿಯಲ್ಲಿ ಟಿಪ್ಪು ಜಯಂತಿ ಆಚರಣೆಯ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಖಡ್ಗ ಝಳಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಟಿಪ್ಪು ಜಯಂತಿ ವೇಳೆ ಖಡ್ಗ ಹಿಡಿದು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವರದಿಯನ್ನು ಸಲ್ಲಿಸುವವರೆಗೂ ಆಡಳಿತಾರೂಢ ಬಿಜೆಪಿ ಟಿಪ್ಪು ಜಯಂತಿಯ ಆಚರಣೆಯಲ್ಲಿ ಕಾಂಗ್ರೆಸ್ ನಾಯಕರು ಖಡ್ಗ ಮಸೆಯುತ್ತಿರುವ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಮೈಸೂರಿನ ಹುಲಿ ಎಂದೇ ಜನಪ್ರಿಯವಾಗಿರುವ ಟಿಪ್ಪು ಸುಲ್ತಾನ್ ಕರ್ನಾಟಕದಲ್ಲಿ ವಿವಾದಕ್ಕೆ ಕಾರಣವಾಗಿದ್ದು, ಅದರಲ್ಲೂ 2015ರಲ್ಲಿ 18ನೇ ಶತಮಾನದ ದೊರೆ ಟಿಪ್ಪು ಸುಲ್ತಾನ್ ಜನ್ಮದಿನವನ್ನು ಆಚರಿಸುವ ಅಗತ್ಯತೆ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಜಗಳ ನಡೆದಿತ್ತು.

ಇದನ್ನೂ ಓದಿ: ಶತ್ರುಗಳ ಮುಂದೆ ಮಂಡಿಯೂರದ ಏಕೈಕ ವ್ಯಕ್ತಿ ಟಿಪ್ಪು ಸುಲ್ತಾನ್, ಅವರ ಜಯಂತಿ ಮಾಡುತ್ತಿರುವುದು ನನಗೆ ಖುಷಿ ತಂದಿದೆ -ಹೆಚ್.ವಿಶ್ವನಾಥ್

2017ರಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಿಸುವುದಾಗಿ ಘೋಷಿಸಿದ್ದರು. ಆದರೆ, 2018ರಲ್ಲಿ ಉತ್ತರ ಕನ್ನಡ ಸಂಸದ ಹಾಗೂ ಅಂದಿನ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದರು.

ಇತಿಹಾಸದ ಪ್ರಕಾರ, ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ್ದರು. 1799ರಲ್ಲಿ ತನ್ನ ರಾಜಧಾನಿ ಶ್ರೀರಂಗಪಟ್ಟಣವನ್ನು ರಕ್ಷಿಸುವ ಸಂದರ್ಭದಲ್ಲಿ ನಿಧನರಾಗಿದ್ದರು. 18ನೇ ಶತಮಾನದ ಆಡಳಿತಗಾರ ಟಿಪ್ಪುವಿನ ಜನ್ಮ ವಾರ್ಷಿಕೋತ್ಸವದ ಆಚರಣೆಯು ಬಿಜೆಪಿಯನ್ನು ಕಾಂಗ್ರೆಸ್ ವಿರುದ್ಧ ಎತ್ತಿಕಟ್ಟಿತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಹಲವಾರು ಬಿಜೆಪಿಯ ನಾಯಕರು ಕಾಂಗ್ರೆಸ್​ ಪಕ್ಷವನ್ನು ಖಂಡಿಸಿದ್ದರು.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ