AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಲ್​ಪಿ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೇ ಚರ್ಚೆ: ‘ಸಿಎಂ ಯಡಿಯೂರಪ್ಪ ಬದಲಾದರೆ ಅದನ್ನು ನಾವು ಪೂರಕವಾಗಿ ಬಳಸಿಕೊಳ್ಳಬೇಕು’

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಬಿಜೆಪಿಯಲ್ಲಿನ ಈ ಬೆಳವಣಿಗೆ ಕಾಂಗ್ರೆಸ್​ಗೆ ಪೂರಕವಾಗಲಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಈ ಬೆಳವಣಿಗೆ ನಮಗೆ ಪೂರಕವಾಗಲಿದೆ.

ಸಿಎಲ್​ಪಿ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೇ ಚರ್ಚೆ: ‘ಸಿಎಂ ಯಡಿಯೂರಪ್ಪ ಬದಲಾದರೆ ಅದನ್ನು ನಾವು ಪೂರಕವಾಗಿ ಬಳಸಿಕೊಳ್ಳಬೇಕು’
ಸಿದ್ದರಾಮಯ್ಯ
TV9 Web
| Edited By: |

Updated on:Jul 22, 2021 | 12:28 PM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಇಂದು (ಜುಲೈ 22) ಸುಳಿವು ನೀಡಿದ್ದಾರೆ. ಈ ವಿಷಯದ ಬಗ್ಗೆಯೇ ಸಿಎಲ್​ಪಿ (Congress Legislature Party meeting) ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಬದಲಾವಣೆಗೆ ಬಿಜೆಪಿ ಮುಂದಾಗಿದೆ. ಇದನ್ನು ನಾವು ಸಂಘಟನೆಗೆ ಪೂರಕವಾಗಿ ಬಳಸಿಕೊಳ್ಳಬೇಕು. ಬಿಎಸ್​ವೈ ಇಲ್ಲದಿದ್ದರೆ ಬಿಜೆಪಿ ಇಲ್ಲ ಅನ್ನೋದು ಸಾಬೀತಾಗಿದೆ ಎಂದು ಶಾಸಕರಿಗೆ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಬಿಜೆಪಿಯಲ್ಲಿನ ಈ ಬೆಳವಣಿಗೆ ಕಾಂಗ್ರೆಸ್​ಗೆ ಪೂರಕವಾಗಲಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಈ ಬೆಳವಣಿಗೆ ನಮಗೆ ಪೂರಕವಾಗಲಿದೆ. ಇದನ್ನ ಕಾಂಗ್ರೆಸ್ ಶಾಸಕರು ಅನುಕೂಲವಾಗಿ ಬಳಸಿಕೊಳ್ಳಬೇಕು ಅಂತ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಏನು ಅಲ್ಲ ಅನ್ನೋದು ಹಲವು ಬಾರಿ ಸಾಬೀತಾಗಿದೆ. ನಾವಾಗಿ ಅವರ ವಿರುದ್ಧ ಹೋರಾಟ ಮಾಡಿ ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತಿಲ್ಲ. ಬಿಜೆಪಿ ಕೇಂದ್ರ ನಾಯಕರೇ ಅವರನ್ನ ಕೆಳಗಿಳಿಸುವ ಕೆಲಸ ಮಾಡುತ್ತಿದ್ದಾರೆ. ನಮಗೆ ಮುಂದಿನ ಚುನಾವಣೆಯಲ್ಲಿ ಸರ್ಕಾರದ ವೈಫಲ್ಯಗಳ ಜತೆಗೆ ಯಡಿಯೂರಪ್ಪ ಅವರನ್ನ ತೆಗೆಯಲು ಮುಂದಾಗಿದ್ದು ವರದಾನವಾಗುತ್ತೆ. ಇದನ್ನ ಕ್ಷೇತ್ರದಲ್ಲಿ ಇರೋ ಶಾಸಕರು ಅನುಕೂಲವಾಗಿ ಬಳಸಿಕೊಳ್ಳಬೇಕು. ಜನರ ಸಂಕಷ್ಟಗಳಿಗೆ ಜೊತೆಯಾಗುವುದರ ಜೊತೆಗೆ ಯಡಿಯೂರಪ್ಪ ವಿಚಾರ ಪ್ರಸ್ತಾಪ ಮಾಡಬೇಕು ಅಂತ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ

CM BS Yediyurappa: ಇವತ್ತಿನ ಕ್ಯಾಬಿನೆಟ್ ಸಭೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊನೆಯ ಸಭೆ?

BS Yediyurappa: ಸಿಎಂ ಹುದ್ದೆಗೆ ರಾಜೀನಾಮೆ? ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ

(Congress Legislative Party Meeting decides to utilize situation after CM BS Yediyurappa resignation)

Published On - 12:19 pm, Thu, 22 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?