AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಧ್ವನಿ ಯಾತ್ರೆಗೆ ಚಾಲನೆ; ದೇವನಹಳ್ಳಿಯಲ್ಲಿ ಸಕಲ ಸಿದ್ಧತೆ

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳ ವಿರುದ್ಧದ 100 ಕ್ಷೇತ್ರಗಳ ಕಾಂಗ್ರೆಸ್‌ ಪಕ್ಷದ ಜನಧ್ವನಿ ಯಾತ್ರೆಗೆ ಚಾಲನೆ ನೀಡಲಾಗಿದೆ.

ಜನಧ್ವನಿ ಯಾತ್ರೆಗೆ ಚಾಲನೆ; ದೇವನಹಳ್ಳಿಯಲ್ಲಿ ಸಕಲ ಸಿದ್ಧತೆ
ಜನಧ್ವನಿ
ಆಯೇಷಾ ಬಾನು
| Edited By: |

Updated on: Mar 03, 2021 | 1:17 PM

Share

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳ ವಿರುದ್ಧದ 100 ಕ್ಷೇತ್ರಗಳ ಕಾಂಗ್ರೆಸ್‌ ಪಕ್ಷದ ಜನಧ್ವನಿ ಯಾತ್ರೆಗೆ ಚಾಲನೆ ನೀಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಡಾ.ಪರಮೇಶ್ವರ್, ರಾಮಲಿಂಗಾರೆಡ್ಡಿಯಿಂದ ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಜನಧ್ವನಿ ಯಾತ್ರೆಗೆ ಚಾಲನೆ ಸಿಕ್ಕಿದೆ. ಜನಧ್ವನಿ ಯಾತ್ರೆ ಬಸ್‌ಗೆ, ನೇಗಿಲಿಗೆ ನಾಯಕರು ಪೂಜೆ ಸಲ್ಲಿಸಿದ್ದಾರೆ.

ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರ ನಡುವೆ ಹುಟ್ಟಿದ್ದ ಮುನಿಸನ್ನು ದೂರು ಮಾಡಿ ಸಿದ್ದರಾಮಯ್ಯ ಜನಧ್ವನಿ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಈ ಹಿಂದೆ ಈ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು. ಆದ್ರೆ ಡಿಕೆಶಿ ನಿನ್ನೆ ಭೇಟಿ ಮಾಡಿ ಸಮಾಧಾನಪಡಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ. ಮೊದಲ‌ ಹಂತದಲ್ಲಿ 100 ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ಮೊದಲಿಗೆ ಜನಧ್ವನಿ ಯಾತ್ರೆಗೆ ಚಾಲನೆ ಬಳಿಕ ದೇವನಹಳ್ಳಿಯಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಮಧ್ಯಾಹ್ನ 3ಕ್ಕೆ ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ.

ಇನ್ನು ಇಂದಿನಿಂದ ಕಾಂಗ್ರೆಸ್ ಜನಧ್ವನಿ ಯಾತ್ರೆ ಹಿನ್ನೆಲೆಯಲ್ಲಿ ದೇವನಹಳ್ಳಿಯಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಡೊಳ್ಳು ಕುಣಿತ ವೀರಗಾಸೆಯೊಂದಿಗೆ ಯಾತ್ರೆಗೆ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವನಹಳ್ಳಿ ಹೊರವಲಯದ ದೊಡ್ಡಬಳ್ಳಾಪುರ ಕ್ರಾಸ್​ನಿಂದ ಯಾತ್ರೆ ಆರಂಭವಾಗಲಿದೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಛೇರಿ ತಲುಪಲಿದ್ದಾರೆ. ಯಾತ್ರೆಯಲ್ಲಿ ಪಾಲ್ಗೊಳ್ಳಲು ದೇವನಹಳ್ಳಿ ದೊಡ್ಡಬಳ್ಳಾಪುರ ನೆಲಮಂಗಲ ಮತ್ತು ಹೊಸಕೋಟೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದಾರೆ.

ಇದನ್ನೂ ಓದಿ: ನಾನು ಕನಕಪುರ ಬಂಡೆ ಅಲ್ಲ.. ಅದು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ -ಡಿಕೆಶಿ ಜಬರ್​ದಸ್ತ್​ ಡೈಲಾಗ್!​

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?