AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 24ರಿಂದ ಮೇಕೆದಾಟು ಪಾದಯಾತ್ರೆ ಆರಂಭಿಸಲು ತಯಾರಿ? ಸದನದಲ್ಲೂ ಹೋರಾಟ ನಡೆಸುವ ಬಗ್ಗೆ ಚರ್ಚೆ

ಹೋರಾಟದ ರೂಪರೇಷೆ ಸಿದ್ಧಪಡಿಸಲು ‘ಕೈ’ ನಾಯಕರ ಸಭೆ ಕರೆಯಲಾಗಿದೆ. ಮೇಕೆದಾಟು ಪಾದಯಾತ್ರೆ ಪುನಾರಂಭ ಬಗ್ಗೆಯೂ ಈ ವೇಳೆ ಚರ್ಚೆ ನಡೆಸಲಾಗಿದೆ. ದಿನಾಂಕ ನಿಗದಿ ಪಡಿಸುವ ಬಗ್ಗೆಯೂ ಸಭೆಯಲ್ಲಿ‌ ಚರ್ಚೆ ಮಾಡಲಾಗಿದೆ.

ಮಾರ್ಚ್ 24ರಿಂದ ಮೇಕೆದಾಟು ಪಾದಯಾತ್ರೆ ಆರಂಭಿಸಲು ತಯಾರಿ? ಸದನದಲ್ಲೂ ಹೋರಾಟ ನಡೆಸುವ ಬಗ್ಗೆ ಚರ್ಚೆ
ಕಾಂಗ್ರೆಸ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Feb 15, 2022 | 9:43 PM

Share

ಬೆಂಗಳೂರು: ಕೊರೊನಾ ಕಾರಣದಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ಮತ್ತೆ ಆರಂಭಿಸಲು ಕಾಂಗ್ರೆಸ್‌ನಲ್ಲಿ ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಮಾರ್ಚ್ 24 ರಿಂದ ಪಾದಯಾತ್ರೆ ನಡೆಸಲು ತಯಾರಿ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಜೆಟ್ ಅಧಿವೇಶನಕ್ಕೂ ಮೊದಲೆ ಪಾದಯಾತ್ರೆಗೆ ಪ್ಲ್ಯಾನ್ ಮಾಡಲಾಗಿದೆ. ಆದರೆ ಬಜೆಟ್‌ ಬಳಿಕ ಪಾದಯಾತ್ರೆ ನಡೆಸಲು ಸಲಹೆ ಕೇಳಿಬಂದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಿರುವ ಬಗ್ಗೆ ಹೇಳಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ ನಡೆಸಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಸದನದಲ್ಲಿ ಹೋರಾಟ ನಡೆಸುವ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಸದನ ನಡೆಯುವ ಅಷ್ಟು ದಿನ ವಿಭಿನ್ನವಾದ ಪ್ರತಿಭಟನೆ ನಡೆಸಬೇಕು. ವಿಧಾನಸೌಧಕ್ಕೆ ಪಾದಯಾತ್ರೆ, ಧರಣಿ ಕುರಿತು ಮಾತುಕತೆ ನಡೆಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಅಹೋರಾತ್ರಿ ಧರಣಿ ಬಗ್ಗೆ ಸಭೆಯಲ್ಲಿ ತೀರ್ಮಾನ ಸಾಧ್ಯತೆ ಇದೆ. ಹಿಜಾಬ್ ವಿವಾದ, 40 ಪರ್ಸೆಂಟ್​​ ಕಮಿಷನ್ ಆರೋಪ, ಬಿಟ್​ಕಾಯಿನ್ ಹಗರಣ ಸೇರಿ ಕೆಲ ವಿಚಾರ ಮುಂದಿಟ್ಟು ಸದನದ ಹೊರಗೂ, ಒಳಗೂ ಹೋರಾಟ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಹೋರಾಟದ ರೂಪರೇಷೆ ಸಿದ್ಧಪಡಿಸಲು ‘ಕೈ’ ನಾಯಕರ ಸಭೆ ಕರೆಯಲಾಗಿದೆ. ಮೇಕೆದಾಟು ಪಾದಯಾತ್ರೆ ಪುನಾರಂಭ ಬಗ್ಗೆಯೂ ಈ ವೇಳೆ ಚರ್ಚೆ ನಡೆಸಲಾಗಿದೆ. ದಿನಾಂಕ ನಿಗದಿ ಪಡಿಸುವ ಬಗ್ಗೆಯೂ ಸಭೆಯಲ್ಲಿ‌ ಚರ್ಚೆ ಮಾಡಲಾಗಿದೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಮೇಕೆದಾಟು: ಪರಸ್ಪರರ ಕಾಲೆಳೆದ ಬಿಜೆಪಿ ಕಾಂಗ್ರೆಸ್ ಶಾಸಕರು

ಇದನ್ನೂ ಓದಿ: ಗೋವಾ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಸಿಡಿದೆದ್ದ ಕರವೇ! ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮನೆಗಳಿಗೆ ಮುತ್ತಿಗೆ

Published On - 9:42 pm, Tue, 15 February 22

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು