AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 24ರಿಂದ ಮೇಕೆದಾಟು ಪಾದಯಾತ್ರೆ ಆರಂಭಿಸಲು ತಯಾರಿ? ಸದನದಲ್ಲೂ ಹೋರಾಟ ನಡೆಸುವ ಬಗ್ಗೆ ಚರ್ಚೆ

ಹೋರಾಟದ ರೂಪರೇಷೆ ಸಿದ್ಧಪಡಿಸಲು ‘ಕೈ’ ನಾಯಕರ ಸಭೆ ಕರೆಯಲಾಗಿದೆ. ಮೇಕೆದಾಟು ಪಾದಯಾತ್ರೆ ಪುನಾರಂಭ ಬಗ್ಗೆಯೂ ಈ ವೇಳೆ ಚರ್ಚೆ ನಡೆಸಲಾಗಿದೆ. ದಿನಾಂಕ ನಿಗದಿ ಪಡಿಸುವ ಬಗ್ಗೆಯೂ ಸಭೆಯಲ್ಲಿ‌ ಚರ್ಚೆ ಮಾಡಲಾಗಿದೆ.

ಮಾರ್ಚ್ 24ರಿಂದ ಮೇಕೆದಾಟು ಪಾದಯಾತ್ರೆ ಆರಂಭಿಸಲು ತಯಾರಿ? ಸದನದಲ್ಲೂ ಹೋರಾಟ ನಡೆಸುವ ಬಗ್ಗೆ ಚರ್ಚೆ
ಕಾಂಗ್ರೆಸ್ (ಪ್ರಾತಿನಿಧಿಕ ಚಿತ್ರ)
TV9 Web
| Updated By: ganapathi bhat|

Updated on:Feb 15, 2022 | 9:43 PM

Share

ಬೆಂಗಳೂರು: ಕೊರೊನಾ ಕಾರಣದಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ಮತ್ತೆ ಆರಂಭಿಸಲು ಕಾಂಗ್ರೆಸ್‌ನಲ್ಲಿ ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಮಾರ್ಚ್ 24 ರಿಂದ ಪಾದಯಾತ್ರೆ ನಡೆಸಲು ತಯಾರಿ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಜೆಟ್ ಅಧಿವೇಶನಕ್ಕೂ ಮೊದಲೆ ಪಾದಯಾತ್ರೆಗೆ ಪ್ಲ್ಯಾನ್ ಮಾಡಲಾಗಿದೆ. ಆದರೆ ಬಜೆಟ್‌ ಬಳಿಕ ಪಾದಯಾತ್ರೆ ನಡೆಸಲು ಸಲಹೆ ಕೇಳಿಬಂದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಿರುವ ಬಗ್ಗೆ ಹೇಳಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ ನಡೆಸಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಸದನದಲ್ಲಿ ಹೋರಾಟ ನಡೆಸುವ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಸದನ ನಡೆಯುವ ಅಷ್ಟು ದಿನ ವಿಭಿನ್ನವಾದ ಪ್ರತಿಭಟನೆ ನಡೆಸಬೇಕು. ವಿಧಾನಸೌಧಕ್ಕೆ ಪಾದಯಾತ್ರೆ, ಧರಣಿ ಕುರಿತು ಮಾತುಕತೆ ನಡೆಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಅಹೋರಾತ್ರಿ ಧರಣಿ ಬಗ್ಗೆ ಸಭೆಯಲ್ಲಿ ತೀರ್ಮಾನ ಸಾಧ್ಯತೆ ಇದೆ. ಹಿಜಾಬ್ ವಿವಾದ, 40 ಪರ್ಸೆಂಟ್​​ ಕಮಿಷನ್ ಆರೋಪ, ಬಿಟ್​ಕಾಯಿನ್ ಹಗರಣ ಸೇರಿ ಕೆಲ ವಿಚಾರ ಮುಂದಿಟ್ಟು ಸದನದ ಹೊರಗೂ, ಒಳಗೂ ಹೋರಾಟ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಹೋರಾಟದ ರೂಪರೇಷೆ ಸಿದ್ಧಪಡಿಸಲು ‘ಕೈ’ ನಾಯಕರ ಸಭೆ ಕರೆಯಲಾಗಿದೆ. ಮೇಕೆದಾಟು ಪಾದಯಾತ್ರೆ ಪುನಾರಂಭ ಬಗ್ಗೆಯೂ ಈ ವೇಳೆ ಚರ್ಚೆ ನಡೆಸಲಾಗಿದೆ. ದಿನಾಂಕ ನಿಗದಿ ಪಡಿಸುವ ಬಗ್ಗೆಯೂ ಸಭೆಯಲ್ಲಿ‌ ಚರ್ಚೆ ಮಾಡಲಾಗಿದೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಮೇಕೆದಾಟು: ಪರಸ್ಪರರ ಕಾಲೆಳೆದ ಬಿಜೆಪಿ ಕಾಂಗ್ರೆಸ್ ಶಾಸಕರು

ಇದನ್ನೂ ಓದಿ: ಗೋವಾ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಸಿಡಿದೆದ್ದ ಕರವೇ! ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮನೆಗಳಿಗೆ ಮುತ್ತಿಗೆ

Published On - 9:42 pm, Tue, 15 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ