AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 24ರಿಂದ ಮೇಕೆದಾಟು ಪಾದಯಾತ್ರೆ ಆರಂಭಿಸಲು ತಯಾರಿ? ಸದನದಲ್ಲೂ ಹೋರಾಟ ನಡೆಸುವ ಬಗ್ಗೆ ಚರ್ಚೆ

ಹೋರಾಟದ ರೂಪರೇಷೆ ಸಿದ್ಧಪಡಿಸಲು ‘ಕೈ’ ನಾಯಕರ ಸಭೆ ಕರೆಯಲಾಗಿದೆ. ಮೇಕೆದಾಟು ಪಾದಯಾತ್ರೆ ಪುನಾರಂಭ ಬಗ್ಗೆಯೂ ಈ ವೇಳೆ ಚರ್ಚೆ ನಡೆಸಲಾಗಿದೆ. ದಿನಾಂಕ ನಿಗದಿ ಪಡಿಸುವ ಬಗ್ಗೆಯೂ ಸಭೆಯಲ್ಲಿ‌ ಚರ್ಚೆ ಮಾಡಲಾಗಿದೆ.

ಮಾರ್ಚ್ 24ರಿಂದ ಮೇಕೆದಾಟು ಪಾದಯಾತ್ರೆ ಆರಂಭಿಸಲು ತಯಾರಿ? ಸದನದಲ್ಲೂ ಹೋರಾಟ ನಡೆಸುವ ಬಗ್ಗೆ ಚರ್ಚೆ
ಕಾಂಗ್ರೆಸ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Feb 15, 2022 | 9:43 PM

Share

ಬೆಂಗಳೂರು: ಕೊರೊನಾ ಕಾರಣದಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ಮತ್ತೆ ಆರಂಭಿಸಲು ಕಾಂಗ್ರೆಸ್‌ನಲ್ಲಿ ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಮಾರ್ಚ್ 24 ರಿಂದ ಪಾದಯಾತ್ರೆ ನಡೆಸಲು ತಯಾರಿ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಜೆಟ್ ಅಧಿವೇಶನಕ್ಕೂ ಮೊದಲೆ ಪಾದಯಾತ್ರೆಗೆ ಪ್ಲ್ಯಾನ್ ಮಾಡಲಾಗಿದೆ. ಆದರೆ ಬಜೆಟ್‌ ಬಳಿಕ ಪಾದಯಾತ್ರೆ ನಡೆಸಲು ಸಲಹೆ ಕೇಳಿಬಂದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಿರುವ ಬಗ್ಗೆ ಹೇಳಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ ನಡೆಸಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಸದನದಲ್ಲಿ ಹೋರಾಟ ನಡೆಸುವ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಸದನ ನಡೆಯುವ ಅಷ್ಟು ದಿನ ವಿಭಿನ್ನವಾದ ಪ್ರತಿಭಟನೆ ನಡೆಸಬೇಕು. ವಿಧಾನಸೌಧಕ್ಕೆ ಪಾದಯಾತ್ರೆ, ಧರಣಿ ಕುರಿತು ಮಾತುಕತೆ ನಡೆಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಅಹೋರಾತ್ರಿ ಧರಣಿ ಬಗ್ಗೆ ಸಭೆಯಲ್ಲಿ ತೀರ್ಮಾನ ಸಾಧ್ಯತೆ ಇದೆ. ಹಿಜಾಬ್ ವಿವಾದ, 40 ಪರ್ಸೆಂಟ್​​ ಕಮಿಷನ್ ಆರೋಪ, ಬಿಟ್​ಕಾಯಿನ್ ಹಗರಣ ಸೇರಿ ಕೆಲ ವಿಚಾರ ಮುಂದಿಟ್ಟು ಸದನದ ಹೊರಗೂ, ಒಳಗೂ ಹೋರಾಟ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಹೋರಾಟದ ರೂಪರೇಷೆ ಸಿದ್ಧಪಡಿಸಲು ‘ಕೈ’ ನಾಯಕರ ಸಭೆ ಕರೆಯಲಾಗಿದೆ. ಮೇಕೆದಾಟು ಪಾದಯಾತ್ರೆ ಪುನಾರಂಭ ಬಗ್ಗೆಯೂ ಈ ವೇಳೆ ಚರ್ಚೆ ನಡೆಸಲಾಗಿದೆ. ದಿನಾಂಕ ನಿಗದಿ ಪಡಿಸುವ ಬಗ್ಗೆಯೂ ಸಭೆಯಲ್ಲಿ‌ ಚರ್ಚೆ ಮಾಡಲಾಗಿದೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಮೇಕೆದಾಟು: ಪರಸ್ಪರರ ಕಾಲೆಳೆದ ಬಿಜೆಪಿ ಕಾಂಗ್ರೆಸ್ ಶಾಸಕರು

ಇದನ್ನೂ ಓದಿ: ಗೋವಾ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಸಿಡಿದೆದ್ದ ಕರವೇ! ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮನೆಗಳಿಗೆ ಮುತ್ತಿಗೆ

Published On - 9:42 pm, Tue, 15 February 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!