AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Padayatra: 2ನೇ ಹಂತದ ಪಾದಯಾತ್ರೆಯಲ್ಲಿ ಬದಲಾವಣೆ; ಫೆಬ್ರವರಿ 27 ರಿಂದ ಶುರು, ಮಾರ್ಚ್ 3ಕ್ಕೆ ಅಂತ್ಯ

ಫೆಬ್ರವರಿ 27 ರಿಂದ ಶುರುವಾಗುವ ಪಾದಯಾತ್ರೆ ಮಾರ್ಚ್ 3ಕ್ಕೆ ಅಂತ್ಯವಾಗಲಿದೆ. ಮಾರ್ಚ್​​ 5ರ ಬದಲಾಗಿ ಮಾರ್ಚ್ 3ಕ್ಕೆ ಪಾದಯಾತ್ರೆ ಅಂತ್ಯಗೊಳಿಸುವ ಬಗ್ಗೆ ಹೇಳಲಾಗಿದೆ. ಮಾರ್ಚ್ 3ಕ್ಕೆ ಸಂಜೆ ಬಸವನಗುಡಿಯಲ್ಲಿ ಪಾದಯಾತ್ರೆ ಅಂತ್ಯಗೊಳ್ಳಲಿದೆ.

Mekedatu Padayatra: 2ನೇ ಹಂತದ ಪಾದಯಾತ್ರೆಯಲ್ಲಿ ಬದಲಾವಣೆ; ಫೆಬ್ರವರಿ 27 ರಿಂದ ಶುರು, ಮಾರ್ಚ್ 3ಕ್ಕೆ ಅಂತ್ಯ
ಕಾಂಗ್ರೆಸ್ (ಪ್ರಾತಿನಿಧಿಕ ಚಿತ್ರ)
TV9 Web
| Updated By: ganapathi bhat|

Updated on:Feb 17, 2022 | 7:45 PM

Share

ಬೆಂಗಳೂರು: ಮೇಕೆದಾಟು ಯೋಜನೆ (Mekedatu Project) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್​ನ (Congress) 2ನೇ ಹಂತದ ಪಾದಯಾತ್ರೆಯಲ್ಲಿ ಬದಲಾವಣೆ ಮಾಡಲಾಗಿದೆ. ಫೆಬ್ರವರಿ 27 ರಿಂದ ಶುರುವಾಗುವ ಪಾದಯಾತ್ರೆ (Mekedatu Padayatra) ಮಾರ್ಚ್ 3ಕ್ಕೆ ಅಂತ್ಯವಾಗಲಿದೆ. ಮಾರ್ಚ್​​ 5ರ ಬದಲಾಗಿ ಮಾರ್ಚ್ 3ಕ್ಕೆ ಪಾದಯಾತ್ರೆ ಅಂತ್ಯಗೊಳಿಸುವ ಬಗ್ಗೆ ಹೇಳಲಾಗಿದೆ. ಮಾರ್ಚ್ 3ಕ್ಕೆ ಸಂಜೆ ಬಸವನಗುಡಿಯಲ್ಲಿ ಪಾದಯಾತ್ರೆ ಅಂತ್ಯಗೊಳ್ಳಲಿದೆ.

ವಿಧಾನಸಭೆಯಲ್ಲಿ ಮಂಗಳವಾರ ರಾಜ್ಯಪಾಲರ (Governor Speech) ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ಸಮಯದಲ್ಲಿ ಮೇಕೆದಾಟು ಯೋಜನೆಯ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಆರೋಪ ಪ್ರತ್ಯಾರೋಪ ನಡೆಯಿತು. ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ಸದಸ್ಯ ಪಿ.ರಾಜೀವ್, ಇದೀಗ ಪಾದಯಾತ್ರೆ ಮಾಡಿರುವ ಕಾಂಗ್ರೆಸ್ ಕೈಲೇ 5 ವರ್ಷಗಳ ಅಧಿಕಾರ ಇತ್ತು. ಇವರ ಔಟ್ ಕಂ ಏನು? ಆಗ ಮೇಕೆದಾಟು ನೆನಪಾಗಲಿಲ್ಲವೆ ಎಂದು ಪ್ರಶ್ನಿಸಿದ್ದರು.

ಅಂತಾರಾಜ್ಯ ಯೋಜನೆ ಆರಂಭಿಸಲು 4 ಹಂತ ಇರುತ್ತದೆ. ಡಿಪಿಅರ್, ಅರಣ್ಯ ನಾಶದ ಅಂದಾಜು ಮತ್ತು ಬೇರೆಡೆ ಸಸ್ಯಗಳನ್ನು ಬೆಳೆಸಲು ಭೂಮಿ ಗುರುತಿಸುವುದು, ಪರಿಸರ ಇಲಾಖೆಯ ಅನುಮೋದನೆ ಮತ್ತು ಕೇಂದ್ರ ಜಲ ಪ್ರಾಧಿಕಾರದ ಅನುಮೋದನೆ ಎಂಬ ಹಲವು ಹಂತಗಳನ್ನು ದಾಟಬೇಕು. ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿ ಇದ್ದಾಗ ಏನೆಲ್ಲಾ ಕೆಲಸಗಳ ಆಗಿದ್ದವು ಎಂದು ಪ್ರಶ್ನಿಸಿದರು. ಸಮ್ಮಿಶ್ರ ಸರ್ಕಾರ ಬರುವವರೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಲ್ಲಿಕೆಯಾಗಿರಲಿಲ್ಲ ಎಂದು ಹೇಳಿದ್ದರು.

ರಾಜೀವ್ ಅವರ ಮಾತಿಗೆ ವಿಪಕ್ಷ ಉಪನಾಯಕ ಖಾದರ್ ವಿರೋಧ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಡಿಪಿಆರ್ ಆಗಿತ್ತು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿಪಿಆರ್ ಪರಿಷ್ಕರಿಸಲಾಯಿತು. ಕೇಂದ್ರ ಸರ್ಕಾರ ಈಗ ಅನುಮತಿ ಕೊಡಬೇಕು. ಮೇಕೆದಾಟು ಯೋಜನೆಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಮಧ್ಯಪ್ರವೇಶ ಮಾಡಿ ಮಾತನಾಡಿದ ಕುಣಿಗಲ್ ಶಾಸಕ ರಂಗನಾಥ್ ಎರಡೂ ಕಡೆ ನಿಮ್ಮದೇ ಬಿಜೆಪಿ ಸರ್ಕಾರ ಇದೆ. ಪರಿಸರ ಇಲಾಖೆಯ ಕ್ಲಿಯರೆನ್ಸ್ ತೆಗೆದುಕೊಳ್ಳಲು ಆಗಿಲ್ಲ. ಅನುಮೋದನೆ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದರು.

ಇದನ್ನೂ ಓದಿ: ಮೇಕೆದಾಟು ಕುರಿತ ಸಂಸದ ಪ್ರಜ್ವಲ್​ ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಲೋಕಸಭೆ

ಇದನ್ನೂ ಓದಿ: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಮೇಕೆದಾಟು: ಪರಸ್ಪರರ ಕಾಲೆಳೆದ ಬಿಜೆಪಿ ಕಾಂಗ್ರೆಸ್ ಶಾಸಕರು

Published On - 7:43 pm, Thu, 17 February 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!