ಕಾಂಗ್ರೆಸ್‌ ಶಾಸಕ ಹ್ಯಾರಿಸ್ ಮತ್ತು ಬೆಂಬಲಿಗರ ವಿರುದ್ಧ ಬೆದರಿಕೆ ಆರೋಪ: ಆಪ್ ಮುಖಂಡರಿಂದ ದೂರು

| Updated By: ಗಂಗಾಧರ​ ಬ. ಸಾಬೋಜಿ

Updated on: Feb 04, 2023 | 6:45 PM

ಬೆದರಿಕೆ ಆರೋಪ ಹಿನ್ನೆಲೆ ಶಾಂತಿನಗರದ ಕಾಂಗ್ರೆಸ್‌ ಶಾಸಕ ಹ್ಯಾರಿಸ್ ಮತ್ತು ಬೆಂಬಲಿಗರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಗೆ ಆಪ್ ಮುಖಂಡ ಮಥಾಯಿ ದೂರು ನೀಡಿದ್ದಾರೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್ ಮತ್ತು ಬೆಂಬಲಿಗರ ವಿರುದ್ಧ ಬೆದರಿಕೆ ಆರೋಪ: ಆಪ್ ಮುಖಂಡರಿಂದ ದೂರು
ಆಪ್ ಮುಖಂಡ ಮಥಾಯಿ, ಕಾಂಗ್ರೆಸ್‌ ಶಾಸಕ ಹ್ಯಾರಿಸ್
Follow us on

ಬೆಂಗಳೂರು: ಬೆದರಿಕೆ ಆರೋಪ ಹಿನ್ನೆಲೆ ಶಾಂತಿನಗರದ ಕಾಂಗ್ರೆಸ್‌ ಶಾಸಕ ಹ್ಯಾರಿಸ್ (NA Haris) ಮತ್ತು ಬೆಂಬಲಿಗರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಗೆ ಆಪ್ ಮುಖಂಡ ಮಥಾಯಿ ದೂರು ನೀಡಿದ್ದಾರೆ. ಕ್ಷೇತ್ರದ ಪ್ರಣಾಳಿಕೆ ಸಿದ್ಧಪಡಿಸಲು ಶಾಂತಿನಗರ ಕ್ಷೇತ್ರದಲ್ಲಿ ಮತದಾರರ ಸಮಸ್ಯೆ ಆಲಿಸುತ್ತಿದ್ದ ಮಥಾಯಿ, ಈ ವೇಳೆ ನೀಲಸಂದ್ರ ಬಳಿಯ ಸರ್ಕಾರಿ ಆಸ್ಪತ್ರೆ, ಶಾಲೆಗೆ ಭೇಟಿ ನೀಡಿದ್ದಾಗ ಸ್ಥಳಕ್ಕೆ ಆಗಮಿಸಿ ಬೆದರಿಕೆ ಹಾಕಿದ್ದಾರೆ ಎಂದು ರೋಪ ಮಾಡಲಾಗಿದೆ. ಎನ್‌.ಎ.ಹ್ಯಾರಿಸ್, ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಕೆಎಎಸ್ ಅಧಿಕಾರಿ ಹಾಗೂ ಆಪ್ ಮುಖಂಡ ಮಥಾಯಿ ಒತ್ತಾಯಿಸಿದ್ದಾರೆ.

ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪ: ಬಿಜೆಪಿ MLC ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR

ಬೆಂಗಳೂರು: ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪದಡಿ ಬಿಜೆಪಿ MLC ಆರ್.ಶಂಕರ್ ಪತ್ನಿ ಮತ್ತು ಪುತ್ರನ ವಿರುದ್ಧ ಇಂದಿರಾನಗರ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕಂಪನಿ ಪಾರ್ಟನರ್ ಆಗಿರುವ ಪ್ರಭಾವತಿ ಎಂಬುವವರಿಂದ ದೂರು ನೀಡಲಾಗಿದೆ. ಪಾರ್ಟನರ್​​ಗೆ ವಂಚಿಸಿ ಅಕ್ರಮವಾಗಿ 23 ಸೈಟ್​ ಮಾರಾಟ ಆರೋಪ ಕೇಳಿಬಂದಿದೆ.  ಆರ್.ಶಂಕರ್ ಪುತ್ರ, ಪತ್ನಿ ಸೇರಿ ಒಟ್ಟು ನಾಲ್ವರು ಕಂಪನಿ ಆರಂಭಿಸಿದ್ದು, ಕಂಪನಿ ಹೆಸರಿನಲ್ಲಿ ಬೊಮ್ಮನಹಳ್ಳಿಯಲ್ಲಿ ಲೇಔಟ್ ನಿರ್ಮಿಸಿದ್ದರು.

ಇದನ್ನೂ ಓದಿ: Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಲೇಔಟ್ ನಿರ್ಮಾಣದ ವೇಳೆ ನಾಲ್ವರೂ ಪಾರ್ಟನರ್​ಗಳು ಒಪ್ಪಂದ ಮಾಡಿಕೊಂಡಿದ್ದು, ಸೈಟ್ ಹಂಚಿಕೆ ವೇಳೆ ಎಲ್ಲರ ಸಹಿ ಕಡ್ಡಾಯವೆಂದು ಅಗ್ರಿಮೆಂಟ್ ಮಾಡಲಾಗಿದೆ. ಆದರೆ ಇದೀಗ ಪ್ರಭಾವತಿ ಕೈಬಿಟ್ಟು ಮೂವರಿಂದ ಸೈಟ್ ಮಾರಾಟ ಮಾಡಿದ್ದು, ಅಕ್ರಮವಾಗಿ ಬ್ಯಾಂಕ್​ನಲ್ಲಿ ಖಾತೆ ತೆಗೆದು ವಂಚಿಸಿರುವುದಾಗಿ ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ. ಮೂವರ ಮೇಲೆ ಕೇಸ್ ದಾಖಲಿಸದ ಇಂದಿರಾನಗರ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಗಲಾಟೆ ಪ್ರಕರಣವೊಂದರ ಮಾಹಿತಿ ಕಲೆಹಾಕಿ ಮಗಳ ಮನೆಗೆ ಹೊರಟಿದ್ದ ಎಎಸ್​ಐ ಮಾರ್ಗ ಮಧ್ಯ ದುರಂತ ಅಂತ್ಯ

ಮಗಳ ಮನೆಗೆ ಹೊರಟಿದ್ದ ಎಎಸ್​ಐ ಬೈಕ್ ಅಪಘಾತದಲ್ಲಿ ಸಾವು

ದಾವಣಗೆರೆ: ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ತೀವ್ರ ರಕ್ತಸ್ರಾವದಿಂದ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಚಿನ್ನು ಡಾಬಾ ಬಳಿ ನಡೆದಿದೆ. ಶಬ್ಬೀರ್ ಹುಸೇನ್(59) ಮೃತ ಬೈಕ್​ ಸವಾರ. ಮೃತ ಶಬ್ಬೀರ್ ಹುಸೇನ್ ಹೊಸಪೇಟೆ ಠಾಣೆಯ ಎಎಸ್​ಐ ಆಗಿದ್ದರು. ಬೆಳಗ್ಗೆ ಚಿತ್ರದುರ್ಗದ ಮಗಳ ನಿವಾಸಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಮತ್ತೊಂದು ಬೈಕ್​ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:45 pm, Sat, 4 February 23