AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟೀಕಿಸುವ ಭರದಲ್ಲಿ ಕರಗಕ್ಕೆ ಶಾಸಕ ಹ್ಯಾರಿಸ್ ಅವಹೇಳನ: ಭಾರಿ ಪ್ರತಿಭಟನೆ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ

ವಿಶ್ವವಿಖ್ಯಾತ ಬೆಂಗಳೂರು ಕರಗ ಕುರಿತು ಶಾಸಕ ಎನ್​.ಎ.ಹ್ಯಾರಿಸ್ ಅವಹೇಳನಕಾರಿಯಾಗಿ ಮಾತನಾಡಿದ್ದು, ಇದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಕ್ಷಮೆ ಕೇಳಿದ್ದಾರೆ. ಅಷ್ಟಕ್ಕೂ ಹ್ಯಾರಿಸ್​ ಹೇಳಿದ್ದೇನು? ಈ ಕೆಳಗಿನಂತಿದೆ ನೋಡಿ.

ಬಿಜೆಪಿ ಟೀಕಿಸುವ ಭರದಲ್ಲಿ ಕರಗಕ್ಕೆ ಶಾಸಕ ಹ್ಯಾರಿಸ್ ಅವಹೇಳನ: ಭಾರಿ ಪ್ರತಿಭಟನೆ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ
ಎನ್​.ಎ. ಹ್ಯಾರಿಸ್, ಕಾಂಗ್ರೆಸ್ ಶಾಸಕ
TV9 Web
| Edited By: |

Updated on:Mar 13, 2023 | 9:48 AM

Share

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ(Bengaluru karaga) ಕುರಿತು ಶಾಂತಿನಗರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎನ್​.ಎ. ಹ್ಯಾರಿಸ್( NA Haris) ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.  ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಹ್ಯಾರಿಸ್,  ಬೆಂಗಳೂರು ಕರಗ ಬಗ್ಗೆ ಹಗುರ ಭಾಷೆ ಬಳಸಿ ಎಡವಟ್ಟು ಮಾಡಿಕೊಂಡಿದ್ದಾರೆ. ಇದಕ್ಕೆ ಆಕ್ರೋಶಗಳು ವ್ಯಕ್ತವಾಗುವ ಮುನ್ಸೂಚನೆಗಳು ಸಿಗುತ್ತಿದ್ದಂತೆಯೇ ಎಚ್ಚೆತ್ತ ಹ್ಯಾರಿಸ್ ಕ್ಷಮೆಯಾಚಿಸಿದ್ದಾರೆ. ಈ ಮೂಲಕ ಚುನಾವಣೆ ಹೊತ್ತಲ್ಲಿ ಡ್ಯಾಮೇಜ್​ ಕಂಟ್ರೋಲ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ರೌಡಿ ಶೀಟರ್​ ಎದುರು ಕೈ ಮುಗಿದು ನಿಂತ ಮೋದಿ: ಫೋಟೋ ವೈರಲ್, ಕಾಂಗ್ರೆಸ್ ವಾಗ್ದಾಳಿ

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಹ್ಯಾರಿಸ್​, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಹೀಗೆ ಮಾತನಾಡುತ್ತಿದ್ದ ವೇಳೆ ಆಡಳಿತ ಪಕ್ಷದವನ್ನು ಟೀಕಿಸುವ ಭರದಲ್ಲಿ ‘ಅವರು ನಾಟಕ ಮಾಡುತ್ತಿದ್ದಾರೆ, ಇದೊಂದು ಎರಡು ತಿಂಗಳು ನಾಟಕದ ಟೈಮ್, ಹಬ್ಬಕ್ಕೆ ಕರಗ ಟೈಮ್​ನಲ್ಲೆಲ್ಲ ಹಾಕೊಂಡು ಬರ್ತಾರಲ್ಲ, ಅದೇ ಥರ ಇವರೆಲ್ಲ ಈಗ ಓಡಾಡುತ್ತಿರೋದು ಎಂದು ಹೇಳಿದ್ದರು. ಹೀಗಾಗಿ ಹ್ಯಾರಿಸ್ ಹೇಳಿಕೆಯನ್ನು ಖಂಡಿಸಿ ಇಂದು ಭಾರಿ ಪ್ರತಿಭಟನೆ ನಡೆಸಲು ಕರಗ ಉತ್ಸವ ಮಂಡಳಿ ಸಿದ್ಧತೆ ಮಾಡಿಕೊಂಡಿತ್ತು.

ಇದರ ಸುಳಿವು ಸಿಗುತ್ತಿದ್ದಂತೆ ಹ್ಯಾರಿಸ್​ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿ ಕ್ಷಮೆ ಕೇಳಿದ್ದಾರೆ. ನಾನು ಆ ರೀತಿ ಏನೂ ಹೇಳಿಲ್ಲ. ನನ್ನ ಮಾತನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಅದಾಗ್ಯೂ ನಿಮಗೆ ಯಾರಿಗೂ ನೋವಾಗಬಾರದು, ತಪ್ಪು ಭಾವಿಸಬಾರದು. ನಾನು ಆ ರೀತಿ ಯಾವತ್ತೂ ಹೇಳಲ್ಲ. ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹ್ಯಾರಿಸ್​ ಹೇಳಿಕೆ ಖಂಡಿಸಿ ಪ್ರತಿಭಟನೆ ಸಲುವಾಗಿ ಕರೆದಿದ್ದ ಸುದ್ದಿಗೋಷ್ಠಿ ರದ್ದಾಗಿದೆ ಎಂದು ತಿಳಿದುಬಂದಿದೆ.

Published On - 9:43 am, Mon, 13 March 23

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!