AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟೀಕಿಸುವ ಭರದಲ್ಲಿ ಕರಗಕ್ಕೆ ಶಾಸಕ ಹ್ಯಾರಿಸ್ ಅವಹೇಳನ: ಭಾರಿ ಪ್ರತಿಭಟನೆ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ

ವಿಶ್ವವಿಖ್ಯಾತ ಬೆಂಗಳೂರು ಕರಗ ಕುರಿತು ಶಾಸಕ ಎನ್​.ಎ.ಹ್ಯಾರಿಸ್ ಅವಹೇಳನಕಾರಿಯಾಗಿ ಮಾತನಾಡಿದ್ದು, ಇದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಕ್ಷಮೆ ಕೇಳಿದ್ದಾರೆ. ಅಷ್ಟಕ್ಕೂ ಹ್ಯಾರಿಸ್​ ಹೇಳಿದ್ದೇನು? ಈ ಕೆಳಗಿನಂತಿದೆ ನೋಡಿ.

ಬಿಜೆಪಿ ಟೀಕಿಸುವ ಭರದಲ್ಲಿ ಕರಗಕ್ಕೆ ಶಾಸಕ ಹ್ಯಾರಿಸ್ ಅವಹೇಳನ: ಭಾರಿ ಪ್ರತಿಭಟನೆ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ
ಎನ್​.ಎ. ಹ್ಯಾರಿಸ್, ಕಾಂಗ್ರೆಸ್ ಶಾಸಕ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 13, 2023 | 9:48 AM

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ(Bengaluru karaga) ಕುರಿತು ಶಾಂತಿನಗರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎನ್​.ಎ. ಹ್ಯಾರಿಸ್( NA Haris) ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.  ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಹ್ಯಾರಿಸ್,  ಬೆಂಗಳೂರು ಕರಗ ಬಗ್ಗೆ ಹಗುರ ಭಾಷೆ ಬಳಸಿ ಎಡವಟ್ಟು ಮಾಡಿಕೊಂಡಿದ್ದಾರೆ. ಇದಕ್ಕೆ ಆಕ್ರೋಶಗಳು ವ್ಯಕ್ತವಾಗುವ ಮುನ್ಸೂಚನೆಗಳು ಸಿಗುತ್ತಿದ್ದಂತೆಯೇ ಎಚ್ಚೆತ್ತ ಹ್ಯಾರಿಸ್ ಕ್ಷಮೆಯಾಚಿಸಿದ್ದಾರೆ. ಈ ಮೂಲಕ ಚುನಾವಣೆ ಹೊತ್ತಲ್ಲಿ ಡ್ಯಾಮೇಜ್​ ಕಂಟ್ರೋಲ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ರೌಡಿ ಶೀಟರ್​ ಎದುರು ಕೈ ಮುಗಿದು ನಿಂತ ಮೋದಿ: ಫೋಟೋ ವೈರಲ್, ಕಾಂಗ್ರೆಸ್ ವಾಗ್ದಾಳಿ

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಹ್ಯಾರಿಸ್​, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಹೀಗೆ ಮಾತನಾಡುತ್ತಿದ್ದ ವೇಳೆ ಆಡಳಿತ ಪಕ್ಷದವನ್ನು ಟೀಕಿಸುವ ಭರದಲ್ಲಿ ‘ಅವರು ನಾಟಕ ಮಾಡುತ್ತಿದ್ದಾರೆ, ಇದೊಂದು ಎರಡು ತಿಂಗಳು ನಾಟಕದ ಟೈಮ್, ಹಬ್ಬಕ್ಕೆ ಕರಗ ಟೈಮ್​ನಲ್ಲೆಲ್ಲ ಹಾಕೊಂಡು ಬರ್ತಾರಲ್ಲ, ಅದೇ ಥರ ಇವರೆಲ್ಲ ಈಗ ಓಡಾಡುತ್ತಿರೋದು ಎಂದು ಹೇಳಿದ್ದರು. ಹೀಗಾಗಿ ಹ್ಯಾರಿಸ್ ಹೇಳಿಕೆಯನ್ನು ಖಂಡಿಸಿ ಇಂದು ಭಾರಿ ಪ್ರತಿಭಟನೆ ನಡೆಸಲು ಕರಗ ಉತ್ಸವ ಮಂಡಳಿ ಸಿದ್ಧತೆ ಮಾಡಿಕೊಂಡಿತ್ತು.

ಇದರ ಸುಳಿವು ಸಿಗುತ್ತಿದ್ದಂತೆ ಹ್ಯಾರಿಸ್​ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿ ಕ್ಷಮೆ ಕೇಳಿದ್ದಾರೆ. ನಾನು ಆ ರೀತಿ ಏನೂ ಹೇಳಿಲ್ಲ. ನನ್ನ ಮಾತನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಅದಾಗ್ಯೂ ನಿಮಗೆ ಯಾರಿಗೂ ನೋವಾಗಬಾರದು, ತಪ್ಪು ಭಾವಿಸಬಾರದು. ನಾನು ಆ ರೀತಿ ಯಾವತ್ತೂ ಹೇಳಲ್ಲ. ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹ್ಯಾರಿಸ್​ ಹೇಳಿಕೆ ಖಂಡಿಸಿ ಪ್ರತಿಭಟನೆ ಸಲುವಾಗಿ ಕರೆದಿದ್ದ ಸುದ್ದಿಗೋಷ್ಠಿ ರದ್ದಾಗಿದೆ ಎಂದು ತಿಳಿದುಬಂದಿದೆ.

Published On - 9:43 am, Mon, 13 March 23

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ