AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟೀಕಿಸುವ ಭರದಲ್ಲಿ ಕರಗಕ್ಕೆ ಶಾಸಕ ಹ್ಯಾರಿಸ್ ಅವಹೇಳನ: ಭಾರಿ ಪ್ರತಿಭಟನೆ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ

ವಿಶ್ವವಿಖ್ಯಾತ ಬೆಂಗಳೂರು ಕರಗ ಕುರಿತು ಶಾಸಕ ಎನ್​.ಎ.ಹ್ಯಾರಿಸ್ ಅವಹೇಳನಕಾರಿಯಾಗಿ ಮಾತನಾಡಿದ್ದು, ಇದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಕ್ಷಮೆ ಕೇಳಿದ್ದಾರೆ. ಅಷ್ಟಕ್ಕೂ ಹ್ಯಾರಿಸ್​ ಹೇಳಿದ್ದೇನು? ಈ ಕೆಳಗಿನಂತಿದೆ ನೋಡಿ.

ಬಿಜೆಪಿ ಟೀಕಿಸುವ ಭರದಲ್ಲಿ ಕರಗಕ್ಕೆ ಶಾಸಕ ಹ್ಯಾರಿಸ್ ಅವಹೇಳನ: ಭಾರಿ ಪ್ರತಿಭಟನೆ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ
ಎನ್​.ಎ. ಹ್ಯಾರಿಸ್, ಕಾಂಗ್ರೆಸ್ ಶಾಸಕ
TV9 Web
| Edited By: |

Updated on:Mar 13, 2023 | 9:48 AM

Share

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ(Bengaluru karaga) ಕುರಿತು ಶಾಂತಿನಗರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎನ್​.ಎ. ಹ್ಯಾರಿಸ್( NA Haris) ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.  ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಹ್ಯಾರಿಸ್,  ಬೆಂಗಳೂರು ಕರಗ ಬಗ್ಗೆ ಹಗುರ ಭಾಷೆ ಬಳಸಿ ಎಡವಟ್ಟು ಮಾಡಿಕೊಂಡಿದ್ದಾರೆ. ಇದಕ್ಕೆ ಆಕ್ರೋಶಗಳು ವ್ಯಕ್ತವಾಗುವ ಮುನ್ಸೂಚನೆಗಳು ಸಿಗುತ್ತಿದ್ದಂತೆಯೇ ಎಚ್ಚೆತ್ತ ಹ್ಯಾರಿಸ್ ಕ್ಷಮೆಯಾಚಿಸಿದ್ದಾರೆ. ಈ ಮೂಲಕ ಚುನಾವಣೆ ಹೊತ್ತಲ್ಲಿ ಡ್ಯಾಮೇಜ್​ ಕಂಟ್ರೋಲ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ರೌಡಿ ಶೀಟರ್​ ಎದುರು ಕೈ ಮುಗಿದು ನಿಂತ ಮೋದಿ: ಫೋಟೋ ವೈರಲ್, ಕಾಂಗ್ರೆಸ್ ವಾಗ್ದಾಳಿ

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಹ್ಯಾರಿಸ್​, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಹೀಗೆ ಮಾತನಾಡುತ್ತಿದ್ದ ವೇಳೆ ಆಡಳಿತ ಪಕ್ಷದವನ್ನು ಟೀಕಿಸುವ ಭರದಲ್ಲಿ ‘ಅವರು ನಾಟಕ ಮಾಡುತ್ತಿದ್ದಾರೆ, ಇದೊಂದು ಎರಡು ತಿಂಗಳು ನಾಟಕದ ಟೈಮ್, ಹಬ್ಬಕ್ಕೆ ಕರಗ ಟೈಮ್​ನಲ್ಲೆಲ್ಲ ಹಾಕೊಂಡು ಬರ್ತಾರಲ್ಲ, ಅದೇ ಥರ ಇವರೆಲ್ಲ ಈಗ ಓಡಾಡುತ್ತಿರೋದು ಎಂದು ಹೇಳಿದ್ದರು. ಹೀಗಾಗಿ ಹ್ಯಾರಿಸ್ ಹೇಳಿಕೆಯನ್ನು ಖಂಡಿಸಿ ಇಂದು ಭಾರಿ ಪ್ರತಿಭಟನೆ ನಡೆಸಲು ಕರಗ ಉತ್ಸವ ಮಂಡಳಿ ಸಿದ್ಧತೆ ಮಾಡಿಕೊಂಡಿತ್ತು.

ಇದರ ಸುಳಿವು ಸಿಗುತ್ತಿದ್ದಂತೆ ಹ್ಯಾರಿಸ್​ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿ ಕ್ಷಮೆ ಕೇಳಿದ್ದಾರೆ. ನಾನು ಆ ರೀತಿ ಏನೂ ಹೇಳಿಲ್ಲ. ನನ್ನ ಮಾತನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಅದಾಗ್ಯೂ ನಿಮಗೆ ಯಾರಿಗೂ ನೋವಾಗಬಾರದು, ತಪ್ಪು ಭಾವಿಸಬಾರದು. ನಾನು ಆ ರೀತಿ ಯಾವತ್ತೂ ಹೇಳಲ್ಲ. ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹ್ಯಾರಿಸ್​ ಹೇಳಿಕೆ ಖಂಡಿಸಿ ಪ್ರತಿಭಟನೆ ಸಲುವಾಗಿ ಕರೆದಿದ್ದ ಸುದ್ದಿಗೋಷ್ಠಿ ರದ್ದಾಗಿದೆ ಎಂದು ತಿಳಿದುಬಂದಿದೆ.

Published On - 9:43 am, Mon, 13 March 23

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ