AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zameer Ahmed Khan: ಶಾಸಕ ಜಮೀರ್‌ ಮನೆ ಮೇಲೆ ಇ.ಡಿ. ರೇಡ್‌ ಆಗಿದ್ದೇಕೆ? ಹೆಚ್‌ಡಿ ಕುಮಾರಸ್ವಾಮಿ ಮೇಲೆ ಜಮೀರ್‌ ಅನುಮಾನ?

ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿ ಮಾಡಿಸಿದ್ದಾರೆ ಎಂದು ಟಿವಿ9ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ. ಈ ಮಟ್ಟಕ್ಕೆ ಬೆಳೆಯುತ್ತೇನೆಂದು ಅವರು ನಿರೀಕ್ಷಿಸಿರಲಿಲ್ಲ. ಅವಱರು ಎಂದು ನಾನು ಹೆಸರು ಹೇಳಲು ಹೋಗಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಪರೋಕ್ಷವಾಗಿ ಆರೋಪ ಮಾಡಿದ್ದಾರೆ.

Zameer Ahmed Khan: ಶಾಸಕ ಜಮೀರ್‌ ಮನೆ ಮೇಲೆ ಇ.ಡಿ. ರೇಡ್‌ ಆಗಿದ್ದೇಕೆ? ಹೆಚ್‌ಡಿ ಕುಮಾರಸ್ವಾಮಿ ಮೇಲೆ ಜಮೀರ್‌ ಅನುಮಾನ?
TV9 Web
| Updated By: ಆಯೇಷಾ ಬಾನು|

Updated on:Aug 09, 2021 | 1:14 PM

Share

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್(Zameer Ahmed Khan) ನಿವಾಸ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿ ವಿಚಾರಣೆ ನಡೆಸಿತ್ತು. ಸತತ 23 ಗಂಟೆಗಳ ಕಾಲ ಮನೆ, ಆಫಿಸ್ ಎನ್ನದೆ ಹಲವು ಕಡೆ ಜಾಲಾಡಿತ್ತು. ಸದ್ಯ ಈಗ ಈ ವಿಚಾರದ ಬಗ್ಗೆ ಶಾಸಕ ಜಮೀರ್ ಮಾತನಾಡಿದ್ದು ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವೇಳೆ ಮಾತನಾಡಿದ ಜಮೀರ್, ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿ ಮಾಡಿಸಿದ್ದಾರೆ ಎಂದು ಟಿವಿ9ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ. ಈ ಮಟ್ಟಕ್ಕೆ ಬೆಳೆಯುತ್ತೇನೆಂದು ಅವರು ನಿರೀಕ್ಷಿಸಿರಲಿಲ್ಲ. ಅವಱರು ಎಂದು ನಾನು ಹೆಸರು ಹೇಳಲು ಹೋಗಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ(HD Kumaraswamy) ವಿರುದ್ಧ ಶಾಸಕ ಜಮೀರ್ ಪರೋಕ್ಷವಾಗಿ ಆರೋಪ ಮಾಡಿದ್ದಾರೆ.

ನಾನು ರಾಜಕೀಯವಾಗಿ ಬೆಳೆಯಬಾರದೆಂದು ದಾಳಿ ನಡೆಸಿದ್ದಾರೆ. ಅವರೊಬ್ಬರೇ ಬೆಳೆಯಬೇಕು, ಅವರೊಬ್ಬರೇ ಮನೆ ಕಟ್ಟಬೇಕು. ನನ್ನನ್ನು ವೀಕ್ ಮಾಡಬೇಕೆಂದು ED ದಾಳಿ ಮಾಡಿಸಿದ್ದಾರೆ. ಆದರೆ ಈ ದಾಳಿಯಿಂದ ನಾನು ಇನ್ನಷ್ಟು ಬಲಿಷ್ಠನಾಗಿದ್ದೇನೆ. ED ದಾಳಿ ಎದುರಿಸುವ ಶಕ್ತಿ ನನಗಿದೆ. ನನ್ನ ಜೀವನದಲ್ಲಿ ಯಾರಿಗೂ ಹೆದರಲ್ಲ, ಭಯ ಇಲ್ಲವೇ ಇಲ್ಲ. ರಾಜಕೀಯವಾಗಿಯೂ ಮುಂದಿನ ದಿನಗಳಲ್ಲಿ ಎದುರಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ರು.

ಜಮೀರ್‌ಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಇನ್ನು ಜಮೀರ್ ಮಾಡಿರುವ ಆರೋಪಕ್ಕೆ ರಾಮನಗರದಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. 4-5 ವರ್ಷದ ಹಿಂದೆಯೇ ರಾಜಕೀಯ ಸಂಬಂಧ ಮುಗಿದಿದೆ. ಯಾರು ದೂರು ಕೊಟ್ಟು ದಾಳಿ ಮಾಡಿಸಿದ್ದಾರೆ, ಅವರನ್ನೇ ಕೇಳಲಿ. ನಾನು ತೋಟದ ಮನೆಯಲ್ಲಿ ಕೆಲಸದಲ್ಲಿ ಬ್ಯುಸಿಯಾಗಿದ್ದೇನೆ. ನಾನು ರೈತನಾಗಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದೇನೆ. ಜಮೀರ್ ವಿಷಯ ಕಟ್ಟಿಕೊಂಡು ನನಗೆ ಏನಾಗಬೇಕಾಗಿದೆ. ನನಗೆ ED ದಾಳಿಯ ವಿಷಯವೇ ಗೊತ್ತಿಲ್ಲ. ನನ್ನ ಮೇಲೆ ಏಕೆ ಜಮೀರ್ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಜಮೀರ್‌ಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಟಿವಿ9ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಇ.ಡಿ ದಾಳಿಯ ಬೆನ್ನಲ್ಲೇ ದೇವರ ಮೊರೆ ಹೋದ ಶಾಸಕ ಜಮೀರ್ ಅಹ್ಮದ್, ಅಜ್ಮೇರ್ ಯಾತ್ರೆ ಮುಗಿಸಿ ವಾಪಾಸ್

Published On - 12:40 pm, Mon, 9 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ