AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಲೆಕ್ಕಾಚಾರ, ಒಳಾಂಗಣ ವಿನ್ಯಾಸದ ಬಗ್ಗೆ ವಿವರ ನೀಡುವುದಕ್ಕೆ 10 ದಿನ ಕಾಲಾವಕಾಶ ಕೇಳಿದ್ದೇನೆ: ಕಾಂಗ್ರೆಸ್ ಶಾಸಕ ಜಮೀರ್

ನಮ್ಮ ಮನೆಯ ಮೇಲೆ ಇ.ಡಿ(ED) ದಾಳಿ ಮಾಡಿದೆ, ಐಟಿ(IT) ಅಲ್ಲ ಎಂದು ಸ್ಪಷ್ಟಪಡಿಸಿದ ಜಮೀರ್, ದೂರು ಆಧರಿಸಿ ನಮ್ಮ ಮನೆ ಮೇಲೆ ED ದಾಳಿಯಾಗಿದೆ. ED ಅಧಿಕಾರಿಗಳ ದಾಳಿಯಿಂದ ನನಗೂ ಅಚ್ಚರಿಯಾಗಿದೆ ಎಂದರು.

ಮನೆ ಲೆಕ್ಕಾಚಾರ, ಒಳಾಂಗಣ ವಿನ್ಯಾಸದ ಬಗ್ಗೆ ವಿವರ ನೀಡುವುದಕ್ಕೆ 10 ದಿನ ಕಾಲಾವಕಾಶ ಕೇಳಿದ್ದೇನೆ: ಕಾಂಗ್ರೆಸ್ ಶಾಸಕ ಜಮೀರ್
ಶಾಸಕ ಜಮೀರ್ ಅಹ್ಮದ್ ಖಾನ್‌
TV9 Web
| Edited By: |

Updated on:Aug 09, 2021 | 1:10 PM

Share

ಬೆಂಗಳೂರು: ಜಮೀರ್ ಅಹ್ಮದ್(Zameer Ahmed Khan) ಆಸ್ತಿಪಾಸ್ತಿ ಸಂಬಂಧಿಸಿ ಇ.ಡಿ ಅಧಿಕಾರಿಗಳು ಜಮೀರ್ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಮತ್ತಷ್ಟು ದಾಖಲೆ ಕೇಳಿದ್ದಾರೆ. ಆದಷ್ಟು ಬೇಗ ಮತ್ತಷ್ಟು ಸೂಕ್ತ ದಾಖಲೆಗಳನ್ನು ಒದಗಿಸುವಂತೆ ತಿಳಿಸಿದ್ದಾರೆ. ಇದರಂತೆ ವಿವರ ನೀಡುವುದಕ್ಕೆ ಅಧಿಕಾರಿಗಳ ಬಳಿ 10 ದಿನ ಕಾಲಾವಕಾಶ ಕೇಳಿದ್ದೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ತಿಳಿಸಿದ್ದಾರೆ.

ನಮ್ಮ ಮನೆಯ ಮೇಲೆ ಇ.ಡಿ(ED) ದಾಳಿ ಮಾಡಿದೆ, ಐಟಿ(IT) ಅಲ್ಲ ಎಂದು ಸ್ಪಷ್ಟಪಡಿಸಿದ ಜಮೀರ್, ದೂರು ಆಧರಿಸಿ ನಮ್ಮ ಮನೆ ಮೇಲೆ ED ದಾಳಿಯಾಗಿದೆ. ED ಅಧಿಕಾರಿಗಳ ದಾಳಿಯಿಂದ ನನಗೂ ಅಚ್ಚರಿಯಾಗಿದೆ. ED ಅಧಿಕಾರಿಗಳ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮನೆ ಲೆಕ್ಕಾಚಾರ, ಒಳಾಂಗಣ ವಿನ್ಯಾಸದ ಬಗ್ಗೆ ವಿವರ ನೀಡುವುದಕ್ಕೆ 10 ದಿನ ಕಾಲಾವಕಾಶ ಕೇಳಿದ್ದೇನೆ. ED ಅಧಿಕಾರಿಗಳಿಗೆ ಮತ್ತಷ್ಟು ವಿವರಗಳನ್ನು ನೀಡುತ್ತೇನೆ ಎಂದು ಹೇಳಿದರು.

ED ದಾಳಿಗೂ ಐಎಂಎ ಪ್ರಕರಣಕ್ಕೂ ಸಂಬಂಧವಿಲ್ಲ ED ದಾಳಿಗೂ ಐಎಂಎ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಶಾಸಕ ಜಮೀರ್ ಸ್ಪಷ್ಟನೆ ನೀಡಿದ್ದಾರೆ. ಮನೆ ವಿಚಾರವಾಗಿ ದಾಳಿ ಆಗಲ್ಲ ಎಂದು ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶೀವಕುಮಾರ್ ಹೇಳಿಕೆ ನೀಡಿದ್ದರು. ಇದಕ್ಕೆ ಟಾಂಗ್ ನೀಡಿರುವ ಜಮೀರ್ ಡಿ.ಕೆ.ಶಿವಕುಮಾರ್ ಹೇಳಿಕೆಗೂ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೂ ED ದಾಳಿ ಆಗಿತ್ತು. ಹಾಗಾದರೆ ಡಿಕೆಶಿಗೂ ಐಎಂಎಗೂ ಸಂಬಂಧ ಇತ್ತಾ? ಎಂದು ಡಿ.ಕೆ.ಶಿವಕುಮಾರ್‌ಗೆ ಜಮೀರ್ ಪ್ರಶ್ನೆ ಮಾಡಿದ್ದಾರೆ.

ಹೆಚ್‌ಡಿ ಕುಮಾರಸ್ವಾಮಿ ಮೇಲೆ ಜಮೀರ್ ಆರೋಪ ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿ ಮಾಡಿಸಿದ್ದಾರೆ ಎಂದು ಟಿವಿ9ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ. ಈ ಮಟ್ಟಕ್ಕೆ ಬೆಳೆಯುತ್ತೇನೆಂದು ಅವರು ನಿರೀಕ್ಷಿಸಿರಲಿಲ್ಲ. ಅವಱರು ಎಂದು ನಾನು ಹೆಸರು ಹೇಳಲು ಹೋಗಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಪರೋಕ್ಷವಾಗಿ ಆರೋಪ ಮಾಡಿದ್ದಾರೆ. ನಾನು ರಾಜಕೀಯವಾಗಿ ಬೆಳೆಯಬಾರದೆಂದು ದಾಳಿ ನಡೆಸಿದ್ದಾರೆ. ಅವರೊಬ್ಬರೇ ಬೆಳೆಯಬೇಕು, ಅವರೊಬ್ಬರೇ ಮನೆ ಕಟ್ಟಬೇಕು. ನನ್ನನ್ನು ವೀಕ್ ಮಾಡಬೇಕೆಂದು ED ದಾಳಿ ಮಾಡಿಸಿದ್ದಾರೆ. ಆದರೆ ಈ ದಾಳಿಯಿಂದ ನಾನು ಇನ್ನಷ್ಟು ಬಲಿಷ್ಠನಾಗಿದ್ದೇನೆ. ED ದಾಳಿ ಎದುರಿಸುವ ಶಕ್ತಿ ನನಗಿದೆ. ನನ್ನ ಜೀವನದಲ್ಲಿ ಯಾರಿಗೂ ಹೆದರಲ್ಲ, ಭಯ ಇಲ್ಲವೇ ಇಲ್ಲ. ರಾಜಕೀಯವಾಗಿಯೂ ಮುಂದಿನ ದಿನಗಳಲ್ಲಿ ಎದುರಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ರು.

ಇದನ್ನೂ ಓದಿ: Zameer Ahmed Khan: ಶಾಸಕ ಜಮೀರ್‌ ಮನೆ ಮೇಲೆ ಇ.ಡಿ. ರೇಡ್‌ ಆಗಿದ್ದೇಕೆ? ಹೆಚ್‌ಡಿ ಕುಮಾರಸ್ವಾಮಿ ಮೇಲೆ ಜಮೀರ್‌ ಅನುಮಾನ?

Published On - 1:00 pm, Mon, 9 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್