AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ED raid case: ಇ.ಡಿ. ದೂರವಾಣಿ ಕರೆಗೆ ಓಗೊಟ್ಟು ದೆಹಲಿ ಕಚೇರಿಗೆ ಶಾಸಕ ಜಮೀರ್ ಅಹ್ಮದ್ ದೌಡು

ಜಾರಿ ನಿರ್ದೇಶನಾಲಯದ ಸೂಚನೆಯ ಮೆರೆಗೆ ಚಾಮರಾಜಪೇಟೆ ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್ ಅವರು ಇಂದು ದೆಹಲಿಯಲ್ಲಿರುವ ಇ.ಡಿ. (ED) ಕಚೇರಿಗೆ ಭೇಟಿ ನೀಡಿದ್ದಾರೆ.

ED raid case: ಇ.ಡಿ. ದೂರವಾಣಿ ಕರೆಗೆ ಓಗೊಟ್ಟು ದೆಹಲಿ ಕಚೇರಿಗೆ ಶಾಸಕ ಜಮೀರ್ ಅಹ್ಮದ್ ದೌಡು
ಜಮೀರ್ ಅಹ್ಮದ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 01, 2021 | 1:49 PM

ದೆಹಲಿ: ಜಾರಿ ನಿರ್ದೇಶನಾಲಯದ ಸೂಚನೆಯ ಮೆರೆಗೆ ಚಾಮರಾಜಪೇಟೆ ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್ ಅವರು ಇಂದು ದೆಹಲಿಯಲ್ಲಿರುವ ಇ.ಡಿ. (ED) ಕಚೇರಿಗೆ ಭೇಟಿ ನೀಡಿದ್ದಾರೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ತಮ್ಮ ಮನೆಗಳು ಮತ್ತು ಕಚೇರಿಗಳ ಮೇಲೆ ನಡೆದಿದ್ದ ED ದಾಳಿಯ ಸಂಬಂಧ ದಾಖಲೆ ಸಲ್ಲಿಸಲು ED ಕಚೇರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜಮೀರ್ ಆಹ್ಮದ್ ಖಾನ್ ನಿನ್ನೆ ಸಂಜೆ ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದಾರೆ. ದಾಳಿಯಾದ ನಂತರ ಇ.ಡಿ ಕಚೇರಿಗೆ ಕೆಲವು ದಾಖಲೆಗಳನ್ನ ಜಮೀರ್ ಆಹ್ಮದ್ ಖಾನ್ ನೀಡಿದ್ದರು. ಈ ವೇಳೆ ಮತ್ತಷ್ಟು ದಾಖಲೆಗಳನ್ನ ನೀಡುವಂತೆ ಇ.ಡಿ ಅಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆ ದಾಖಲೆಗಳನ್ನ ನೀಡಲು ತೆರಳಿರುವ ಶಾಸಕ ಜಮೀರ್ ಇಂದು ದೆಹಲಿಯ ಖಾನ್ ಮಾರ್ಕೆಟ್ ಬಳಿಯಿವ ಇ.ಡಿ. ಕಚೇರಿಗೆ ತೆರಳಿ ದಾಖಲೆಗಳನ್ನ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇ.ಡಿ. ದೂರವಾಣಿ ಕರೆ: ಇ.ಡಿ. ಅಧಿಕಾರಿಗಳು ದೂರವಾಣಿ ಕರೆ ಮಾಡಿ ಬರುವುದಕ್ಕೆ ಹೇಳಿದ್ದರು, ಬಂದಿದ್ದೇನೆ. ಈ ಹಿಂದೆ ಹೇಳಿಕೆ ದಾಖಲಿಸಿದ್ದೆ, ಅಗತ್ಯ ದಾಖಲೆ ನೀಡಿದ್ದೆ. ಕೆಲ ವಿಚಾರಗಳ ಬಗ್ಗೆ ಸ್ಪಷ್ಟನೆ ನೀಡಲು ವಿಚಾರಣೆಗೆ ಬಂದಿದ್ದೇನೆ ಎಂದು ದೆಹಲಿಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ED ವಿಚಾರಣೆ ನಂತರ ಜಮೀರ್ ಫಸ್ಟ್​ ರಿಯಾಕ್ಷನ್|ED|Tv9kannada

Also Read: ಶಾಸಕ ಜಮೀರ್ ಅಹ್ಮದ್ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳಿಂದ ಐಟಿ ದಾಳಿ

Also Read: ಹೆಚ್.ಡಿ.ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ಹೇಳಿಕೆ

Published On - 11:12 am, Fri, 1 October 21

ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್