AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಧಾನ ಸಭೆ ವಿಫಲ: ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ವಿಪಕ್ಷ ಕಾಂಗ್ರೆಸ್ ನಿರ್ಧಾರ

ವಿಧಾನಸಭೆ ಪುನರಾರಂಭವಾದ ನಂತರ ಕಾಂಗ್ರೆಸ್ ಶಾಸಕರು ರಾಷ್ಟ್ರಧ್ವಜ ಹಿಡಿದು ಕಲಾಪಕ್ಕೆ ಹಾಜರಾದರು. ಈಶ್ವರಪ್ಪ ವಿರುದ್ಧ ಬಿಗಿ ನಿಲುವು ತಾಳಲು ನಿರ್ಧರಿಸಿರುವ ಒಕ್ಕೊರಲಿನಿಂದ ಪ್ರತಿಭಟನೆಗೆ ಮುಂದಾದರು.

ಸಂಧಾನ ಸಭೆ ವಿಫಲ: ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ವಿಪಕ್ಷ ಕಾಂಗ್ರೆಸ್ ನಿರ್ಧಾರ
ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಪ್ರದರ್ಶಿಸಿದ ಕಾಂಗ್ರೆಸ್ ಸದಸ್ಯರು
TV9 Web
| Edited By: |

Updated on:Feb 16, 2022 | 5:36 PM

Share

ಬೆಂಗಳೂರು: ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು ಸದನದಲ್ಲಿ ಧರಣಿ ಮುಂದುವರಿಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸಭೆ ಪುನರಾರಂಭವಾದ ನಂತರ ಕಾಂಗ್ರೆಸ್ ಶಾಸಕರು ರಾಷ್ಟ್ರಧ್ವಜ ಹಿಡಿದು ಕಲಾಪಕ್ಕೆ ಹಾಜರಾದರು. ಈಶ್ವರಪ್ಪ ವಿರುದ್ಧ ಬಿಗಿ ನಿಲುವು ತಾಳಲು ನಿರ್ಧರಿಸಿರುವ ಕಾಂಗ್ರೆಸ್ ಸದಸ್ಯರು ಒಕ್ಕೊರಲಿನಿಂದ ಪ್ರತಿಭಟನೆಗೆ ಮುಂದಾದರು. ಇದಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿಲುವಳಿ ಸೂಚನೆ ಸಂಬಂಧ ಎರಡೂ ಪಕ್ಷದ ಶಾಸಕರ ಸಂಧಾನ ಸಭೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಬಿ.ಸಿ.ನಾಗೇಶ್, ಜೆ.ಸಿ.ಮಾಧುಸ್ವಾಮಿ ಮತ್ತು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಯು.ಟಿ.ಖಾದರ್, ಬಿ.ಎಂ.ಬಿ.ಎಂ.ಪಾಟೀಲ್​ ಹಾಜರುಪಡಿಸಿದರು.

ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಹಿಡಿದು ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ದೇಶದ್ರೋಹಿ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಹಿಸಿದರು. ಕಾಂಗ್ರೆಸ್ ಪಕ್ಷದಿಂದ ಧ್ವಜ ಸಂಹಿತೆ ಉಲ್ಲಂಘನೆ ಆಗಿದೆ. ಅವರು ರಾಷ್ಟ್ರಧ್ವಜವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಧ್ವಜಕ್ಕೆ ಈ ರೀತಿ ಅವಮಾನ ಮಾಡುವುದು ದೇಶದ್ರೋಹ ಎಂದರು. ಸದನದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬೇಸರ ವ್ಯಕ್ತಪಡಿಸಿದರು.

ಸದನದಲ್ಲಿ ಧ್ವಜ ಹಿಡಿದು ವಿಪಕ್ಷ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗಿದರು. ವಿಪಕ್ಷ ಕಾಂಗ್ರೆಸ್ ನಿಯಮ 60ರ ಅಡಿ ನೀಡಿದ್ದ ನಿಲುವಳಿ ಸೂಚನೆಯನ್ನು ಸ್ಪೀಕರ್ ತಿರಸ್ಕರಿಸಿದರು. ರಾಷ್ಟ್ರಧ್ವಜಕ್ಕೆ ಎಂದೂ ಇವರು (ಕಾಂಗ್ರೆಸ್) ಗೌರವ ಕೊಟ್ಟಿಲ್ಲ. ಹುಬ್ಬಳ್ಳಿಯಲ್ಲಿ ಆರು ಜನರನ್ನು ಗೋಲಿಬಾರ್ ಮಾಡಿ ಕಗ್ಗೊಲೆ ಮಾಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷಕ್ಕೆ ನಿಲುವಳಿ ಪ್ರಸ್ತಾಪ ಮಂಡಿಸಲು ಸ್ಪೀಕರ್ ಅವಕಾಶ ನೀಡಿದರು. ತಾವು ಮಂಡಿಸಲು ಉದ್ದೇಶಿಸಿದ್ದ ಪ್ರಸ್ತಾವ ತಿರಸ್ಕರಿಸಿದ್ದಕ್ಕೆ ಕಾಂಗ್ರೆಸ್ ನಾಯಕರು ಧಿಕ್ಕಾರ ಕೂಗಿದರು.

ಕಾಂಗ್ರೆಸ್​ನವರು ಸದನದಲ್ಲಿ ಇಲ್ಲಸಲ್ಲದ ವಿಚಾರಗಳನ್ನು ಮಾತನಾಡುತ್ತಿದ್ದಾರೆ. ರಾಜಕಾರಣಕ್ಕಾಗಿ ರಾಷ್ಟ್ರಧ್ವಜ ಬಳಸಿಕೊಳ್ಳುತ್ತಿದ್ದಾರೆ. ವಿರೋಧ ಪಕ್ಷವಾಗಿ ತನ್ನ ಜವಾಬ್ದಾರಿ ನಿರ್ವಹಿಸಲು ಕಾಂಗ್ರೆಸ್​ ವಿಫಲವಾಗಿದೆ. ಇಂತಹ ವರ್ತನೆಗಳಿಂದ ಕಾಂಗ್ರೆಸ್​ ದೇಶದಲ್ಲಿ ನೆಲಕಚ್ಚುತ್ತಿದೆ. ರಾಜಕಾರಣಕ್ಕೆ ರಾಷ್ಟ್ರಧ್ವಜ ಬಳಸಿಕೊಂಡಿದ್ದು ಖಂಡನೀಯ ಎಂದು ಕಾಂಗ್ರೆಸ್​ ನಾಯಕರ ವಿರುದ್ಧ ಮುಖ್ಯಮಂತ್ರಿ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು. ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಪ್ರತಿಭಟನೆಯಲ್ಲಿ ಮನಸ್ಸಿಗೆ ಬಂದಂತೆ ಧ್ವಜ ಬಳಸಿಕೊಂಡಿದ್ದಾರೆ. ಕಾಂಗ್ರೆಸ್​​ನವರಿಗೆ ಯಾವಾಗಿಂದ ಧ್ವಜದ ಬಗ್ಗೆ ಗೌರವ ಬಂತು? ನಾನು ಈಶ್ವರಪ್ಪನವರಿಗೆ ಧನ್ಯವಾದವನ್ನು ಹೇಳುತ್ತೇನೆ. ನಿಮ್ಮಿಂದಾಗಿ ಕಾಂಗ್ರೆಸ್​ನವರು ಧ್ವಜ ಹಿಡಿಯುವಂತಾಯಿತು. ಅವರೂ ಭಾರತ್​ ಮಾತಾಕೀ ಜೈ ಅಂದ್ರು ಎಂದರು.

ವಿಧಾನ ಪರಿಷತ್​ ಕಲಾಪ ಮುಂದೂಡಿಕೆ

ವಿಧಾನ ಪರಿಷತ್​ನಲ್ಲಿ ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ಕಲಾಪವನ್ನು ನಾಳೆ (ಫೆ 17) ಬೆಳಿಗ್ಗೆ 10.30ಕ್ಕೆ ಮುಂದೂಡಲಾಯಿತು. ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯರು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಈಶ್ವರಪ್ಪ ನೀಡಿದ ಕೇಸರಿ ಧ್ವಜದ ಹೇಳಿಕೆ: ಬಿಜೆಪಿ ಕಾಂಗ್ರೆಸ್ ಶಾಸಕರ ವಾಗ್ವಾದ

ಇದನ್ನೂ ಓದಿ: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಸರ್ಕಾರಿ ಆಸ್ಪತ್ರೆಗಳ ಸಮಸ್ಯೆ, ಆಂಬುಲೆನ್ಸ್​ ವ್ಯವಸ್ಥೆ ಸುಧಾರಣೆಗೆ ಬೇಡಿಕೆ

Published On - 5:21 pm, Wed, 16 February 22

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ