Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್‌. ನಿಜಲಿಂಗಪ್ಪ ಮನೆ ಸ್ವಾಧೀನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಂಗ್ರೆಸ್‌ ಮುಖಂಡ ಮೋಹನ್‌ ಕುಮಾರ್‌ ಕೊಂಡಜ್ಜಿ

ಚಿತ್ರದುರ್ಗದಲ್ಲಿರುವ ನಿಜಲಿಂಗಪ್ಪ ಅವರ ಮನೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದುಕೊಂಡು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೋಹನ್‌ ಕುಮಾರ್‌ ಕೊಂಡಜ್ಜಿ ಮನವಿ ಪತ್ರ ಸಲ್ಲಿಸಿದರು.

ಎಸ್‌. ನಿಜಲಿಂಗಪ್ಪ ಮನೆ ಸ್ವಾಧೀನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಂಗ್ರೆಸ್‌ ಮುಖಂಡ ಮೋಹನ್‌ ಕುಮಾರ್‌ ಕೊಂಡಜ್ಜಿ
ಎಸ್‌. ನಿಜಲಿಂಗಪ್ಪ ಮನೆ
Follow us
TV9 Web
| Updated By: ಆಯೇಷಾ ಬಾನು

Updated on: Aug 09, 2023 | 9:46 AM

ಬೆಂಗಳೂರು, ಆ.09: ಮಾಜಿ ಮುಖ್ಯಮಂತ್ರಿ ಎಸ್‌. ನಿಜಲಿಂಗಪ್ಪ(S Nijalingappa) ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದುಕೊಂಡು ಅದನ್ನು ಸಂರಕ್ಷಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕಾಂಗ್ರೆಸ್‌ ಮುಖಂಡ ಮೋಹನ್‌ ಕುಮಾರ್‌ ಕೊಂಡಜ್ಜಿ(Congress MLC Mohan Kondajji) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ 22ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನಿಜಲಿಂಗಪ್ಪ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮಾಲಾರ್ಪಣೆ ಮಾಡಿದರು. ಈ ವೇಳೆ ಚಿತ್ರದುರ್ಗದಲ್ಲಿರುವ ನಿಜಲಿಂಗಪ್ಪ ಅವರ ಮನೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದುಕೊಂಡು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೋಹನ್‌ ಕುಮಾರ್‌ ಕೊಂಡಜ್ಜಿ ಮನವಿ ಪತ್ರ ಸಲ್ಲಿಸಿದರು. ಹಾಗೂ ಮಾಜಿ ಮುಖ್ಯಮಂತ್ರಿಯ ಮನೆಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ವಿಳಂಬ ಆಗಿರುವುದನ್ನು ಗಮನಕ್ಕೆ ತಂದರು.

ಇದನ್ನೂ ಓದಿ: ದಾವಣಗೆರೆ: ಪಾಳುಕೊಂಪೆಯಂತಾದ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಓದಿದ ಶಾಲೆ

‘ನಿಜಲಿಂಗಪ್ಪ ಅವರ ಮನೆಯನ್ನು ಸಂರಕ್ಷಿಸಲು ಹಾಗೂ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ನಾಲ್ಕು ವರ್ಷಗಳಾದರೂ ಈ ಆದೇಶ ಕಾರ್ಯರೂಪಕ್ಕೆ ಬಂದಿಲ್ಲ. ಮನೆಯನ್ನು ಸರ್ಕಾರದ ವಶಕ್ಕೆ ಪಡೆಯುವುದಕ್ಕಾಗಿ ನಿಜಲಿಂಗಪ್ಪ ಅವರ ವಾರಸುದಾರರಾದ ಮೊಮ್ಮಗ ವಿನಯ್‌ ಮತ್ತು ಕಿರಣ್‌ ಶಂಕರ್‌ ಅವರನ್ನು ಚಿತ್ರದುರ್ಗದ ಹಿಂದಿನ ಜಿಲ್ಲಾಧಿಕಾರಿ ಅಮೆರಿಕದಿಂದ ಕರೆಸಿಕೊಂಡಿದ್ದರು. ಆದರೆ, ಕೊನೆ ಗಳಿಗೆಯಲ್ಲಿ ಆಸ್ತಿಯನ್ನು ಸರ್ಕಾರದ ಸ್ವಾಧೀನಕ್ಕೆ ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಮನವಿ ಪತ್ರದಲ್ಲಿ ಮೋಹನ್‌ ಕುಮಾರ್‌ ಕೊಂಡಜ್ಜಿ ದೂರಿದ್ದಾರೆ.

ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ನಿಜಲಿಂಗಪ್ಪ ಅವರ ನಿವಾಸವನ್ನು ಶೀಘ್ರವೇ ಖರೀದಿಸಿ ಕಾಮಗಾರಿ ಆರಂಭಿಸುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ನಿಜಲಿಂಗಪ್ಪ ಅವರ ಮನೆ ದುರ್ಬಲವಾಗಿದೆ ಮತ್ತು ಪುನಶ್ಚೇತನ ಕಾರ್ಯಗಳನ್ನು ಶೀಘ್ರವಾಗಿ ಪ್ರಾರಂಭಿಸದಿದ್ದರೆ ಅದು ಕುಸಿಯುವ ಆತಂಕವಿದೆ. ಈ ಎಲ್ಲ ಲೋಪಗಳನ್ನು ಸರಿಪಡಿಸಿ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಸಂರಕ್ಷಿಸಲು ಮುಖ್ಯ ಕಾರ್ಯದರ್ಶಿ ಮತ್ತು ಚಿತ್ರದುರ್ಗ ಜಿಲ್ಲಾಧಿಕಾರಿ ಜತೆ ಸಭೆ ನಡೆಸಿ ಪ್ರಕರಣವನ್ನು ಇತ್ಯರ್ಥಪಡಿಸಬೇಕು ಎಂದು ಮೋಹನ್‌ ಕುಮಾರ್‌ ಕೊಂಡಜ್ಜಿ ಆಗ್ರಹಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ