AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊರಕದ ಸಾಗುವಳಿ ಹಕ್ಕು ಪತ್ರ: ಸಂಸದ ಡಿ.ಕೆ.ಸುರೇಶ್ ಕಾರಿಗೆ ಮುತ್ತಿಗೆ ಹಾಕಿದ 36 ಕುಟುಂಬಗಳು

ಸಾಗುವಳಿ ಹಕ್ಕು ಪತ್ರ ದೊರಕದ ಹಿನ್ನೆಲೆ ಆಕ್ರೋಶಗೊಂಡ ಕುಟುಂಗಳು ಇಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿವೆ. ಬೆಂಗಳೂರು ಹೊರವಲಯ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ದೊರಕದ ಸಾಗುವಳಿ ಹಕ್ಕು ಪತ್ರ: ಸಂಸದ ಡಿ.ಕೆ.ಸುರೇಶ್ ಕಾರಿಗೆ ಮುತ್ತಿಗೆ ಹಾಕಿದ 36 ಕುಟುಂಬಗಳು
ಸಂಸದ ಡಿಕೆ ಸುರೇಶ್ ಅವರಿಗೆ ಮುತ್ತಿಗೆ ಹಾಕಿದ ಜನರು
ರಾಮು, ಆನೇಕಲ್​
| Edited By: Rakesh Nayak Manchi|

Updated on: Aug 12, 2023 | 5:54 PM

Share

ಆನೇಕಲ್, ಆಗಸ್ಟ್ 12: ಸಾಗುವಳಿ ಹಕ್ಕು ಪತ್ರ ದೊರಕದ ಹಿನ್ನೆಲೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (D. K. Suresh) ಅವರ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ ಘಟನೆ ಬೆಂಗಳೂರು (Bengaluru) ಹೊರವಲಯ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ಸಾಗುವಳಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದ ನಂತರ ಈ ಘಟನೆ ನಡೆದಿದೆ.

ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಆಯೋಜಿಸಿದ್ದ ಸಾಗುವಳಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರು ಪಾಲ್ಗೊಂಡಿದ್ದರು. ಅಲ್ಲದೆ, ಹಲವಾರು ವರ್ಷಗಳಿಂದ ಜಮೀನು ಉಳುಮೆ ಮಾಡಿಕೊಂಡು ಬಂದಿದ್ದ ಕುಟುಂಬಗಳಿಗೆ ಸಾಗುವಳಿ ಹಕ್ಕು ಪತ್ರಗಳನ್ನು ವಿತರಿಸಿದರು.

ಇದನ್ನೂ ಓದಿ: ಬೆಂಗಳೂರು: ಆಟೋ ಹಿಂದೆ ಮಾರಕಾಸ್ತ್ರ! ಚಾಲಕನ ವಿರುದ್ಧ ಕ್ರಮಕ್ಕೆ ನೆಟ್ಟಿಗರ ಒತ್ತಾಯ

ಹಕ್ಕಿಪಿಕ್ಕಿ ಕಾಲೋನಿಯಲ್ಲಿ 150 ಕುಟುಂಬಗಳು ಹಲವಾರು ವರ್ಷಗಳಿಂದ ಜಮೀನು ಉಳುಮೆ ಮಾಡಿಕೊಂಡು ಬಂದಿವೆ. ಅಂತಹ ಕುಟುಂಬಗಳಲ್ಲಿ 114 ಕುಟುಂಬಗಳನ್ನು ಗುರುತಿಸಿ ಸಾಗುವಳಿ ಹಕ್ಕು ಪತ್ರ ವಿತರಣೆ ಮಾಡಲಾಯಿತು. ಕಾರ್ಯಕ್ರಮ ಮುಕ್ತಾಯವಾಗುತ್ತಿದ್ದಂತೆ ಸಂಸದರು ಕಾರು ಹತ್ತಲು ಮುಂದಾದಾಗ ಹಕ್ಕು ಪತ್ರ ಸಿಗದ 36 ಕುಟುಂಬಗಳು ಮುತ್ತಿಗೆ ಹಾಕಿವೆ.

ಡಿಕೆ ಸುರೇಶ್ ಅವರು ಕಾರು ಹತ್ತಲು ಬಿಡದೇ ಮುತ್ತಿಗೆ ಹಾಕಿದ ಜನರು ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು, ಗ್ರಾಮಸ್ಥರನ್ನ ತಡೆ ಹಿಡಿದು ಸಂಸದರನ್ನ ತೆರಳಲು ಅವಕಾಶ ಮಾಡಿಕೊಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?