AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗತ್ಯವಸ್ತುಗಳ ಬೆಲೆ ಏರಿಕೆಗೆ ಕಾಂಗ್ರೆಸ್ ಖಂಡನೆ: ರೇಸ್​ಕೋರ್ಸ್​ ರಸ್ತೆ ಬಳಿ ಕಾಂಗ್ರೆಸ್ ಪ್ರತಿಭಟನೆ

ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಬೃಹತ್ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು 100 ಅಡಿಯಷ್ಟು ದೊಡ್ಡದಾಗಿದ್ದ ಸಿಲಿಂಡರ್ ಬ್ಯಾನರ್ ತಲೆಯ ಮೇಲೆ ಹೊತ್ತು ನಡೆದರು.

ಅಗತ್ಯವಸ್ತುಗಳ ಬೆಲೆ ಏರಿಕೆಗೆ ಕಾಂಗ್ರೆಸ್ ಖಂಡನೆ: ರೇಸ್​ಕೋರ್ಸ್​ ರಸ್ತೆ ಬಳಿ ಕಾಂಗ್ರೆಸ್ ಪ್ರತಿಭಟನೆ
ಎಲ್​ಪಿಜಿ ಸಿಲಿಂಡರ್​ಗಳ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 02, 2021 | 7:06 PM

Share

ಬೆಂಗಳೂರು: ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷವು ರೇಸ್​ಕೋರ್ಸ್​ ರಸ್ತೆಯ ಕಾಂಗ್ರೆಸ್ ಭವನದ ಬಳಿ ಪ್ರತಿಭಟನಾ ಧರಣಿ ನಡೆಸಿತು. ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಬೃಹತ್ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು 100 ಅಡಿಯಷ್ಟು ದೊಡ್ಡದಾಗಿದ್ದ ಸಿಲಿಂಡರ್ ಬ್ಯಾನರ್ ತಲೆಯ ಮೇಲೆ ಹೊತ್ತು ನಡೆದರು.

ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಜನಸಾಮಾನ್ಯರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ. ನಿತ್ಯವೂ ಇಂಧನ, ದಿನಬಳಕೆ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಶೀಘ್ರ ಬೆಲೆ ಇಳಿಸದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ. ಸಂಸದರು, ಶಾಸಕರ ಮನೆ ಬಳಿ ಪ್ರತಿಭಟನೆ ನಡೆಸಿ ಘೇರಾವ್ ಮಾಡಲಾಗುವುದು ಎಂದರು. ರಾಜ್ಯ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ರಕ್ಷ ರಾಮಯ್ಯ ಉಪಸ್ಥಿತರಿದ್ದರು.

ಜನಾಂದೋಲನ ಸಮಿತಿಗೆ ಕಾಂಗ್ರೆಸ್ ನಿರ್ಧಾರ ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ದೇಶಾದ್ಯಂತ ಜನಾಂದೋಲನ ನಡೆಸಲು ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ. ಈ ಸಂಬಂಧ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷ ಸೋನಿಯಾ ಗಾಂಧಿ ಸಮಿತಿ ರಚಿಸಿದ್ದಾರೆ. ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ, ಉತ್ತಮ್ ಕುಮಾರ್ ರೆಡ್ಡಿ, ಉದಿತ್ ರಾಜ್, ಬಿ‌.ಕೆ.ಹರಿಪ್ರಸಾದ್, ಮನೀಶ್ ಚತ್ರತ್​​ ಸೇರಿದಂತೆ ಒಂಬತ್ತು ಹಿರಿಯ ನಾಯಕರು ಇದ್ದಾರೆ. ಕೊವಿಡ್ ನಿರ್ವಹಣೆಯ ಸಮಸ್ಯೆಗಳು, ಬೆಲೆ ಏರಿಕೆ, ನಿರುದ್ಯೋಗ ವಿರುದ್ಧದ ಹೋರಾಟಕ್ಕೆ ಎಐಸಿಸಿ ಸಮಿತಿ ರೂಪುರೇಷೆ ರೂಪಿಸಲಿದೆ.

(Congress Party Workers Protest Against LPG Price Hike)

ಇದನ್ನೂ ಓದಿ: ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ ಆಗ್ರಹ

ಇದನ್ನೂ ಓದಿ: ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಣೆ ಮಾಡಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ: ಡಿಕೆ ಶಿವಕುಮಾರ್

Published On - 7:05 pm, Thu, 2 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ