AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ವೈ ಮೂಲೆಗುಂಪು ಮಾಡುವ ಬಿಜೆಪಿ ಪ್ರಯತ್ನ ಸಫಲ; ವಿಜಯೇಂದ್ರ ಸ್ಪರ್ಧೆ ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ -ಕಾಂಗ್ರೆಸ್ ಟೀಕೆ

ಬಿ.ವೈ. ವಿಜಯೇಂದ್ರ ಅವರು ಸ್ಪರ್ಧಿಸುವುದು ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ. ದೇಶದುದ್ದಕ್ಕೂ ಕುಟುಂಬ ರಾಜಕಾರಣದ ಬೀಜ ಬಿತ್ತಿದ ಬಿಜೆಪಿ ಇತರ ಪಕ್ಷಗಳತ್ತ ಬೆರಳು ತೋರುವುದು ಪರಮ ಹಾಸ್ಯ! ಅಂತೂ ಇಂತೂ 'ಸಂತೋಷ ಕೂಟ'ದ ಅಭಿಯಾನ ಕೊನೆಯ ಹಂತಕ್ಕೆ ಬಂದಿದೆ.

ಬಿಎಸ್​ವೈ ಮೂಲೆಗುಂಪು ಮಾಡುವ ಬಿಜೆಪಿ ಪ್ರಯತ್ನ ಸಫಲ; ವಿಜಯೇಂದ್ರ ಸ್ಪರ್ಧೆ ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ -ಕಾಂಗ್ರೆಸ್ ಟೀಕೆ
ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ
TV9 Web
| Edited By: |

Updated on:Jul 22, 2022 | 5:48 PM

Share

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ(BS Yediyurappa) ಇಂದು ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. 8 ಬಾರಿ ಶಾಸಕರಾಗಿ ಆಯ್ಕೆಯಾದ ಶಿಕಾರಿಪುರ ಕ್ಷೇತ್ರವನ್ನು ಪುತ್ರ ಬಿ.ವೈ. ವಿಜಯೇಂದ್ರನಿಗೆ(BY Vijayendra) ಬಿಟ್ಟುಕೊಟ್ಟಿದ್ದಾರೆ. ನಾನು ಚುನಾವಣೆಯಲ್ಲಿ ನಿಲ್ಲುತ್ತಿಲ್ಲ. ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುತ್ತಾರೆಂದು ಘೋಷಣೆ ಮಾಡಿದ್ದಾರೆ. ಬಿಎಸ್ವೈ ಈ ಹೇಳಿಕೆ ಕೊಟ್ಟ ನಂತರ ಅನೇಕ ಹೇಳಿಕೆಗಳು ಚರ್ಚೆಗಳು ಜೋರಾಗಿವೆ. ಸದ್ಯ ಈ ಬಗ್ಗೆ ಕಾಂಗ್ರೆಸ್(Congress) ಕೂಡ ಟ್ವೀಟ್ ಮಾಡಿದ್ದು ವ್ಯಾಂಗ್ಯವಾಡಿದೆ.

ವರುಣಾದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆಯನ್ನು ತಡೆಯಲಾಗಿತ್ತು. ಮಸ್ಕಿ, ಹಾನಗಲ್‌ನಲ್ಲಿ ಸ್ಪರ್ಧೆಯ ಕನಸಿಗೂ ಬಿಜೆಪಿ ತಣ್ಣೀರು ಸುರಿದಿತ್ತು. ವಿಧಾನಪರಿಷತ್ ಸ್ಪರ್ಧೆಗೂ ಬ್ರೇಕ್ ಹಾಕಲಾಗಿತ್ತು. ಮಂತ್ರಿಗಿರಿಯನ್ನೂ ವಂಚಿಸಲಾಯ್ತು. ಬಿಜೆಪಿಯ ಕಸರತ್ತುಗಳಿಗೆ ಮಣಿದು ಬಿ.ಎಸ್. ಯಡಿಯೂರಪ್ಪ ಅವರೇ ಪುತ್ರನಿಗೆ ಕ್ಷೇತ್ರ ಬಿಡುವಂತಾಯಿತು! ಕಾಂಗ್ರೆಸ್‌ನತ್ತ ಕುಟುಂಬ ರಾಜಕಾರಣದ ಗೂಬೆ ಕೂರಿಸುವ ಬಿಜೆಪಿಗೆ ಶಿಕಾರಿಪುರದಲ್ಲಿ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರು ಸಿಗಲಿಲ್ಲವೇ? ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ಬಿ.ವೈ. ವಿಜಯೇಂದ್ರ ಅವರು ಸ್ಪರ್ಧಿಸುವುದು ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ. ದೇಶದುದ್ದಕ್ಕೂ ಕುಟುಂಬ ರಾಜಕಾರಣದ ಬೀಜ ಬಿತ್ತಿದ ಬಿಜೆಪಿ ಇತರ ಪಕ್ಷಗಳತ್ತ ಬೆರಳು ತೋರುವುದು ಪರಮ ಹಾಸ್ಯ! ಅಂತೂ ಇಂತೂ ‘ಸಂತೋಷ ಕೂಟ’ದ ಅಭಿಯಾನ ಕೊನೆಯ ಹಂತಕ್ಕೆ ಬಂದಿದೆ. ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರನಿಗೆ ಕ್ಷೇತ್ರ ಬಿಟ್ಟುಕೊಡುವ ಮಾತನಾಡುವ ಮೂಲಕ ಅಧಿಕಾರದಿಂದ ಇಳಿಯುವಾಗ ಅವರು ಹಾಕಿದ ಕಣ್ಣೀರಿನ ನೈಜ ಅರ್ಥ ಬಯಲಾಗಿದೆ. ಬಿಎಸ್ವೈ ಅವರನ್ನು ಮೂಲೆಗುಂಪು ಮಾಡುವ ಬಿಜೆಪಿ ಪ್ರಯತ್ನ ಎದುರಿಸಲಾರದೆ ಅಸಹಾಯಕರಾಗಿ ಹಿಂದೆ ಸರಿದಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Published On - 5:47 pm, Fri, 22 July 22

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ