AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ವೈ ಮೂಲೆಗುಂಪು ಮಾಡುವ ಬಿಜೆಪಿ ಪ್ರಯತ್ನ ಸಫಲ; ವಿಜಯೇಂದ್ರ ಸ್ಪರ್ಧೆ ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ -ಕಾಂಗ್ರೆಸ್ ಟೀಕೆ

ಬಿ.ವೈ. ವಿಜಯೇಂದ್ರ ಅವರು ಸ್ಪರ್ಧಿಸುವುದು ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ. ದೇಶದುದ್ದಕ್ಕೂ ಕುಟುಂಬ ರಾಜಕಾರಣದ ಬೀಜ ಬಿತ್ತಿದ ಬಿಜೆಪಿ ಇತರ ಪಕ್ಷಗಳತ್ತ ಬೆರಳು ತೋರುವುದು ಪರಮ ಹಾಸ್ಯ! ಅಂತೂ ಇಂತೂ 'ಸಂತೋಷ ಕೂಟ'ದ ಅಭಿಯಾನ ಕೊನೆಯ ಹಂತಕ್ಕೆ ಬಂದಿದೆ.

ಬಿಎಸ್​ವೈ ಮೂಲೆಗುಂಪು ಮಾಡುವ ಬಿಜೆಪಿ ಪ್ರಯತ್ನ ಸಫಲ; ವಿಜಯೇಂದ್ರ ಸ್ಪರ್ಧೆ ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ -ಕಾಂಗ್ರೆಸ್ ಟೀಕೆ
ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ
TV9 Web
| Edited By: |

Updated on:Jul 22, 2022 | 5:48 PM

Share

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ(BS Yediyurappa) ಇಂದು ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. 8 ಬಾರಿ ಶಾಸಕರಾಗಿ ಆಯ್ಕೆಯಾದ ಶಿಕಾರಿಪುರ ಕ್ಷೇತ್ರವನ್ನು ಪುತ್ರ ಬಿ.ವೈ. ವಿಜಯೇಂದ್ರನಿಗೆ(BY Vijayendra) ಬಿಟ್ಟುಕೊಟ್ಟಿದ್ದಾರೆ. ನಾನು ಚುನಾವಣೆಯಲ್ಲಿ ನಿಲ್ಲುತ್ತಿಲ್ಲ. ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುತ್ತಾರೆಂದು ಘೋಷಣೆ ಮಾಡಿದ್ದಾರೆ. ಬಿಎಸ್ವೈ ಈ ಹೇಳಿಕೆ ಕೊಟ್ಟ ನಂತರ ಅನೇಕ ಹೇಳಿಕೆಗಳು ಚರ್ಚೆಗಳು ಜೋರಾಗಿವೆ. ಸದ್ಯ ಈ ಬಗ್ಗೆ ಕಾಂಗ್ರೆಸ್(Congress) ಕೂಡ ಟ್ವೀಟ್ ಮಾಡಿದ್ದು ವ್ಯಾಂಗ್ಯವಾಡಿದೆ.

ವರುಣಾದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆಯನ್ನು ತಡೆಯಲಾಗಿತ್ತು. ಮಸ್ಕಿ, ಹಾನಗಲ್‌ನಲ್ಲಿ ಸ್ಪರ್ಧೆಯ ಕನಸಿಗೂ ಬಿಜೆಪಿ ತಣ್ಣೀರು ಸುರಿದಿತ್ತು. ವಿಧಾನಪರಿಷತ್ ಸ್ಪರ್ಧೆಗೂ ಬ್ರೇಕ್ ಹಾಕಲಾಗಿತ್ತು. ಮಂತ್ರಿಗಿರಿಯನ್ನೂ ವಂಚಿಸಲಾಯ್ತು. ಬಿಜೆಪಿಯ ಕಸರತ್ತುಗಳಿಗೆ ಮಣಿದು ಬಿ.ಎಸ್. ಯಡಿಯೂರಪ್ಪ ಅವರೇ ಪುತ್ರನಿಗೆ ಕ್ಷೇತ್ರ ಬಿಡುವಂತಾಯಿತು! ಕಾಂಗ್ರೆಸ್‌ನತ್ತ ಕುಟುಂಬ ರಾಜಕಾರಣದ ಗೂಬೆ ಕೂರಿಸುವ ಬಿಜೆಪಿಗೆ ಶಿಕಾರಿಪುರದಲ್ಲಿ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರು ಸಿಗಲಿಲ್ಲವೇ? ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ಬಿ.ವೈ. ವಿಜಯೇಂದ್ರ ಅವರು ಸ್ಪರ್ಧಿಸುವುದು ಬಿಜೆಪಿ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ. ದೇಶದುದ್ದಕ್ಕೂ ಕುಟುಂಬ ರಾಜಕಾರಣದ ಬೀಜ ಬಿತ್ತಿದ ಬಿಜೆಪಿ ಇತರ ಪಕ್ಷಗಳತ್ತ ಬೆರಳು ತೋರುವುದು ಪರಮ ಹಾಸ್ಯ! ಅಂತೂ ಇಂತೂ ‘ಸಂತೋಷ ಕೂಟ’ದ ಅಭಿಯಾನ ಕೊನೆಯ ಹಂತಕ್ಕೆ ಬಂದಿದೆ. ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರನಿಗೆ ಕ್ಷೇತ್ರ ಬಿಟ್ಟುಕೊಡುವ ಮಾತನಾಡುವ ಮೂಲಕ ಅಧಿಕಾರದಿಂದ ಇಳಿಯುವಾಗ ಅವರು ಹಾಕಿದ ಕಣ್ಣೀರಿನ ನೈಜ ಅರ್ಥ ಬಯಲಾಗಿದೆ. ಬಿಎಸ್ವೈ ಅವರನ್ನು ಮೂಲೆಗುಂಪು ಮಾಡುವ ಬಿಜೆಪಿ ಪ್ರಯತ್ನ ಎದುರಿಸಲಾರದೆ ಅಸಹಾಯಕರಾಗಿ ಹಿಂದೆ ಸರಿದಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Published On - 5:47 pm, Fri, 22 July 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್