AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಕ್ತ ತನಿಖೆ ಆದರೆ ಇನ್ನೂ ನಾಲ್ವರು ಸಚಿವರು ರಾಜೀನಾಮೆ ಕೊಡಬೇಕಾಗುತ್ತೆ: ಪ್ರಿಯಾಂಕ್ ಖರ್ಗೆ

ಸಚಿವ ಈಶ್ವರಪ್ಪ ರಾಜೀನಾಮೆಗಾಗಿ ಧರಣಿ ಮಾಡುತ್ತಿಲ್ಲ. ಈ ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಹೇಳಿದರು.

ಸೂಕ್ತ ತನಿಖೆ ಆದರೆ ಇನ್ನೂ ನಾಲ್ವರು ಸಚಿವರು ರಾಜೀನಾಮೆ ಕೊಡಬೇಕಾಗುತ್ತೆ: ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ
TV9 Web
| Edited By: |

Updated on:Apr 15, 2022 | 12:26 PM

Share

ಬೆಂಗಳೂರು: ಸಚಿವ ಈಶ್ವರಪ್ಪ ರಾಜೀನಾಮೆಗಾಗಿ ಧರಣಿ ಮಾಡುತ್ತಿಲ್ಲ. ಈ ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕು ಎನ್ನುವುದು ನಮ್ಮ. ಸೂಕ್ತ ತನಿಖೆಯಾದರೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಇನ್ನೂ ಎರಡು ವಿಕೆಟ್ ಬೀಳುತ್ತವೆ. ಇದರಲ್ಲಿ ಒಬ್ಬರು ಹಾಲಿ ಮತ್ತೊಬ್ಬರು ಮಾಜಿ ಸಚಿವರು ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 545 ಪಿಎಸ್​ಐ ಹುದ್ದೆಗೆ 70 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ ಎಂದು ಗೃಹ ಸಚಿವರು ಹೇಳಿದ್ದರು. ಬರೆದ ಅಭ್ಯರ್ಥಿಗಳು ಹಲವು ಬಾರಿ ಮನವಿ ಸಲ್ಲಿಸಿದರೂ ಗೃಹ ಇಲಾಖೆ ಕ್ರಮ ಜರುಗಿಸಿಲ್ಲ. ಗೃಹ ಸಚಿವ ಆರಗ 2 ತಿಂಗಳು ಸುಮ್ಮನೆ ಕಾಲ ಕಲೆದಿದ್ದರು. ಆದರೆ ಮೊನ್ನೆ ಇದ್ದಕ್ಕಿದ್ದಂತೆ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದಿದ್ದರು ಎಂದು ನೆನಪಿಸಿಕೊಂಡರು.

ಪಿಎಸ್​ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಹಲವು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದೆ. ಅಕ್ರಮದ ಬಗ್ಗೆ ತನಿಖೆ ಮಾಡಲು ಅಭ್ಯರ್ಥಿಗಳು ನಿರಂತರ ಒತ್ತಾಯಿಸುತ್ತಿದ್ದರು. ಈ ಅಕ್ರಮದ ಬಗ್ಗೆ ತನಿಖೆ ಮಾಡಿದರೆ ಇನ್ನೆರಡು ವಿಕೆಟ್ ಪತನವಾಗಲಿದೆ. ಗೃಹ ಮತ್ತು ಪಂಚಾಯತ್ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಮರ್ಪಕ ತನಿಖೆ ನಡೆಸಿದರೆ ನಾಲ್ಕು ವಿಕೆಟ್​ಗಳು ಪತನಗೊಳ್ಳಲಿವೆ ಎಂದು ವ್ಯಂಗ್ಯವಾಡಿದರು.

ಪಿಎಸ್​ಐ ಪರೀಕ್ಷೆಯ ಪ್ರಶ್ನೆಪತ್ರಿಕೆಯು ಬಿಜೆಪಿ ಕಾರ್ಯದರ್ಶಿ ನಡೆಸುವ ಶಾಲೆಯಲ್ಲಿಯೇ ಸೋರಿಕೆಯಾಯಿತು. ಅದೇ ವ್ಯಕ್ತಿಯ ಮನೆಗೆ ನಂತರದ ದಿನಗಳಲ್ಲಿ ಗೃಹ ಸಚಿವರು ಹೋಗಿದ್ದಾರೆ ಎಂದು ನೇರ ಆರೋಪ ಮಾಡಿದರು. ಛಾಯಾಚಿತ್ರ ಸೇರಿದಂತೆ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ನುಡಿದರು. 2019-20 ಹಾಗೂ 20-21ನೇ ಸಾಲಿನ ಕೊಳವೆಬಾವಿ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರಗಳು ನಡೆದಿವೆ. ಸಚಿವರೊಬ್ಬರು ಕಿಕ್​ಬ್ಯಾಕ್ ಪಡೆದಿದ್ದಾರೆ. ಐಟಿ ರಿಟರ್ನ್ ಸಹ ತಿರುಚಲಾಗಿದೆ. ನಾವು ಆರೋಪ ಮಾಡಿದ ನಂತರ ಸರ್ಕಾರ ತನಿಖೆಗೆ ಆದೇಶಿಸಿತ್ತು. ತನಿಖೆ ಪ್ರಗತಿಯಲ್ಲಿದ್ದರೂ ಕಾಮಗಾರಿಗಳು ನಿಂತಿಲ್ಲ ಏಕೆ ಎಂದು ಪ್ರಶ್ನಿಸಿದರು.

ಕೇವಲ ಈಶ್ವರಪ್ಪ ರಾಜೀನಾಮೆ ಪಡೆಯುವ ಉದ್ದೇಶದಿಂದ ನಮ್ಮ ಹೋರಾಟ ನಡೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ಈ 40 ಪರ್ಸೆಂಟ್ ಸರ್ಕಾರ ಹೋಗಬೇಕು. ಪ್ರತಿ ಇಲಾಖೆಯಲ್ಲಿ ಮನೆಮಾಡಿರುವ ಭ್ರಷ್ಟಾಚಾರ ಬೇರು ಸಹಿತ ಕಿತ್ತು ಹಾಕಬೇಕು ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ ಸುಳ್ಳಿನ ಫ್ಯಾಕ್ಟರಿ ಇದ್ದಂತೆ, ಅವರನ್ನ ಬಂಧಿಸಬೇಕು; ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಆಕ್ರೋಶ

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆ ನಿರ್ಧಾರಕ್ಕೆ ಹೈಕಮಾಂಡ್ ಸೂಚನೆ ಕಾರಣ: ಬಿರುಸಾಗಲಿದೆ ಕರ್ನಾಟಕ ಚುನಾವಣಾ ಕಣ

Published On - 12:26 pm, Fri, 15 April 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ