AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಕಚೇರಿಯ ಗೋಡೆಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು

ಕರೆಂಟ್​ ಕದ್ದರೂ ಹೆಚ್​ಡಿಕೆ ಪ್ರಮಾಣಿಕತೆಯನ್ನು ಮೆಚ್ಚಲೇಬೇಕು. ಕುಮಾರಸ್ವಾಮಿಯವರೇ 200 ಯುನಿಟ್​ ಉಚಿತವಾಗಿದೆ ನೆನಪಿಟ್ಟುಕೊಳ್ಳಿ ಹೆಚ್ಚು ಕದಿಯಬೇಡಿ. ಕರೆಂಟ್​ ಕಳ್ಳ ಕುಮಾರಸ್ವಾಮಿ ಎಂದು ಪೋಸ್ಟರ್​ನಲ್ಲಿ ಉಲ್ಲೇಖಿಸಲಾಗಿದೆ.

ಜೆಡಿಎಸ್ ಕಚೇರಿಯ ಗೋಡೆಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು
ಜೆಡಿಎಸ್ ಕಚೇರಿಯ ಗೋಡೆಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು
Shivaprasad B
| Edited By: |

Updated on: Nov 14, 2023 | 11:00 PM

Share

ಬೆಂಗಳೂರು, ನವೆಂಬರ್ 14: ಬೆಂಗಳೂರಿನ ಜೆಡಿಎಸ್​​ (JDS) ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್​ಗಳು ಮಂಗಳವಾರ ರಾತ್ರಿ ಕಂಡುಬಂದಿದೆ. ಕಾಂಗ್ರೆಸ್ (Congress) ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಲು ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಕರೆಂಟ್​ ಕದ್ದರೂ ಹೆಚ್​ಡಿಕೆ ಪ್ರಮಾಣಿಕತೆಯನ್ನು ಮೆಚ್ಚಲೇಬೇಕು. ಕುಮಾರಸ್ವಾಮಿಯವರೇ 200 ಯುನಿಟ್​ ಉಚಿತವಾಗಿದೆ ನೆನಪಿಟ್ಟುಕೊಳ್ಳಿ ಹೆಚ್ಚು ಕದಿಯಬೇಡಿ. ಕರೆಂಟ್​ ಕಳ್ಳ ಕುಮಾರಸ್ವಾಮಿ ಎಂದು ಪೋಸ್ಟರ್​ನಲ್ಲಿ ಉಲ್ಲೇಖಿಸಲಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಕುಮಾರಸ್ವಾಮಿ ವಿರುದ್ಧ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್​ಐಆರ್ ದಾಖಲಾಗಿದೆ.

ಕುಮಾರಸ್ವಾಮಿ ಅವರ ನಿವಾಸಕ್ಕೆ ಅಕ್ರಮವಾಗಿ ವಿದ್ಯುತ್ ಬಳಸಿದ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಕುಮಾರಸ್ವಾಮಿ ಈಗಾಗಲೇ ಸ್ಪಷ್ಟನೆ ನೀಡಿದ್ದು, ತಮ್ಮ ಅರಿವಿಗೆ ಬಾರದೆ ಪ್ರಮಾದವಾಗಿದೆ. ಬೆಸ್ಕಾಂ ಅಧಿಕಾರಿಗಳ ತನಿಖೆಗೆ ಸಹಕರಿಸುವೆ. ದಂಡ ಪಾವತಿಸುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಪಡೆದ ಪ್ರಕರಣ: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ FIR

ಇನ್ನು ಕುಮಾರಸ್ವಾಮಿ ಪುತ್ರ ನಿಖಿಲ್ ಕೂಡ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಮ್ಮಿಂದ ಆ ರೀತಿಯ ತಪ್ಪೇನಾದರೂ ಆಗಿದ್ದರೆ ರಾಜ್ಯದ ಜನರಿಗೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು