AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಕಚೇರಿಯ ಗೋಡೆಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು

ಕರೆಂಟ್​ ಕದ್ದರೂ ಹೆಚ್​ಡಿಕೆ ಪ್ರಮಾಣಿಕತೆಯನ್ನು ಮೆಚ್ಚಲೇಬೇಕು. ಕುಮಾರಸ್ವಾಮಿಯವರೇ 200 ಯುನಿಟ್​ ಉಚಿತವಾಗಿದೆ ನೆನಪಿಟ್ಟುಕೊಳ್ಳಿ ಹೆಚ್ಚು ಕದಿಯಬೇಡಿ. ಕರೆಂಟ್​ ಕಳ್ಳ ಕುಮಾರಸ್ವಾಮಿ ಎಂದು ಪೋಸ್ಟರ್​ನಲ್ಲಿ ಉಲ್ಲೇಖಿಸಲಾಗಿದೆ.

ಜೆಡಿಎಸ್ ಕಚೇರಿಯ ಗೋಡೆಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು
ಜೆಡಿಎಸ್ ಕಚೇರಿಯ ಗೋಡೆಗೆ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು
ಶಿವಪ್ರಸಾದ್​ ಬಿ.
| Edited By: |

Updated on: Nov 14, 2023 | 11:00 PM

Share

ಬೆಂಗಳೂರು, ನವೆಂಬರ್ 14: ಬೆಂಗಳೂರಿನ ಜೆಡಿಎಸ್​​ (JDS) ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್​ಗಳು ಮಂಗಳವಾರ ರಾತ್ರಿ ಕಂಡುಬಂದಿದೆ. ಕಾಂಗ್ರೆಸ್ (Congress) ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಲು ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಕರೆಂಟ್​ ಕದ್ದರೂ ಹೆಚ್​ಡಿಕೆ ಪ್ರಮಾಣಿಕತೆಯನ್ನು ಮೆಚ್ಚಲೇಬೇಕು. ಕುಮಾರಸ್ವಾಮಿಯವರೇ 200 ಯುನಿಟ್​ ಉಚಿತವಾಗಿದೆ ನೆನಪಿಟ್ಟುಕೊಳ್ಳಿ ಹೆಚ್ಚು ಕದಿಯಬೇಡಿ. ಕರೆಂಟ್​ ಕಳ್ಳ ಕುಮಾರಸ್ವಾಮಿ ಎಂದು ಪೋಸ್ಟರ್​ನಲ್ಲಿ ಉಲ್ಲೇಖಿಸಲಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಕುಮಾರಸ್ವಾಮಿ ವಿರುದ್ಧ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್​ಐಆರ್ ದಾಖಲಾಗಿದೆ.

ಕುಮಾರಸ್ವಾಮಿ ಅವರ ನಿವಾಸಕ್ಕೆ ಅಕ್ರಮವಾಗಿ ವಿದ್ಯುತ್ ಬಳಸಿದ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಕುಮಾರಸ್ವಾಮಿ ಈಗಾಗಲೇ ಸ್ಪಷ್ಟನೆ ನೀಡಿದ್ದು, ತಮ್ಮ ಅರಿವಿಗೆ ಬಾರದೆ ಪ್ರಮಾದವಾಗಿದೆ. ಬೆಸ್ಕಾಂ ಅಧಿಕಾರಿಗಳ ತನಿಖೆಗೆ ಸಹಕರಿಸುವೆ. ದಂಡ ಪಾವತಿಸುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಪಡೆದ ಪ್ರಕರಣ: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ FIR

ಇನ್ನು ಕುಮಾರಸ್ವಾಮಿ ಪುತ್ರ ನಿಖಿಲ್ ಕೂಡ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಮ್ಮಿಂದ ಆ ರೀತಿಯ ತಪ್ಪೇನಾದರೂ ಆಗಿದ್ದರೆ ರಾಜ್ಯದ ಜನರಿಗೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ