AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕನಿಗೆ 1 ರೂ. ಚಿಲ್ಲರೆ ನೀಡಲು ನಿರಾಕರಿಸಿದ ಕಂಡಕ್ಟರ್, 3000 ರೂ. ತೆತ್ತ BMTC

ಬೆಂಗಳೂರು ಮಹಾನಗರ ಸಾರಿಗೆ (ಬಿಎಂಟಿಸಿ) ಬಸ್​ ಕಂಡಕ್ಟರ್​ ಟಿಕೆಟ್​ನ ಉಳಿದ ಮೊತ್ತ 1ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ.

ಪ್ರಯಾಣಿಕನಿಗೆ 1 ರೂ. ಚಿಲ್ಲರೆ ನೀಡಲು ನಿರಾಕರಿಸಿದ ಕಂಡಕ್ಟರ್, 3000 ರೂ. ತೆತ್ತ BMTC
ಬಿಎಂಟಿಸಿ ಬಸ್​
ವಿವೇಕ ಬಿರಾದಾರ
|

Updated on: Feb 26, 2023 | 10:06 AM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್​ ಕಂಡಕ್ಟರ್​ ಟಿಕೆಟ್​ನ ಉಳಿದ ಮೊತ್ತ 1ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ (Consumer court) ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ. ಕಂಡಕ್ಟರ್​​ ಬಾಕಿ 1ರೂ. ನೀಡದ ಹಿನ್ನೆಲೆ ರಮೇಶ್​ ನಾಯಕ್​ ಎಂಬುವರು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯ, ಪ್ರಯಾಣಿಕನಿಗೆ ಉಳಿದ 1 ರೂ. ಜೊತೆಗೆ ಪರಿಹಾರ 3000 ರೂ ಮತ್ತು ವ್ಯಾಜ್ಯದ ವೆಚ್ಚವಾಗಿ 1000 ರೂ. ಅನ್ನು 45 ದಿನಗಳ ಒಳಗಾಗಿ ನೀಡಬೇಕೆಂದು ಆದೇಶ ಹೊರಡಿಸಿದೆ.

3000 ರೂ ಪರಿಹಾರ ನೀಡಿದ ಬಿಎಂಟಿಸಿ

2019 ರಲ್ಲಿ ರಮೇಶ್​ ನಾಯಕ್ ಶಾಂತಿನಗರದಿಂದ ಮೆಜೆಸ್ಟಿಕ್ ಬಸ್ ಡಿಪೋಗೆ ಪ್ರಯಾಣಿಸುತ್ತಿದ್ದರು. ಟಿಕೆಟ್ ದರ 29 ರೂ. ಇದ್ದು, ನಾಯಕ್ ಕಂಡಕ್ಟರ್‌ಗೆ 30 ರೂ.ಗಳನ್ನು ನೀಡಿದ್ದರು. ಆದರೆ ಬಾಕಿ 1 ರೂ. ಅನ್ನು ಕಂಡಕ್ಟರ್​ ಹಿಂತಿರುಗಿಸಿರಲಿಲ್ಲ. ಇದನ್ನು ಕೇಳಿದಾಗ ಬಿಎಂಟಿಸಿ ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಹೇಳಲಾಗುತ್ತದೆ.

ಇದರಿಂದ ನೊಂದ ರಮೇಶ್​ ನಾಯಕ್ 2019 ರಲ್ಲಿ 15,000 ರೂಪಾಯಿ ಪರಿಹಾರವನ್ನು ಕೋರಿ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಹೂಡಿದರು. 3 ವರ್ಷಗಳ ನಂತರ, ನ್ಯಾಯಾಲಯವು ರಮೇಶ್​​ ನಾಯಕ್ ಪರವಾಗಿ ಆದೇಶ ನೀಡಿದೆ. ಅಲ್ಲದೇ ನಾಯಕ್ ಅವರನ್ನು ಶ್ಲಾಘಿಸಿದ ನ್ಯಾಯಾಲಯ, ಇದು ಗ್ರಾಹಕರ ಹಕ್ಕಿನ ವಿಷಯವಾಗಿ ಮೆಚ್ಚುಗೆ ಮತ್ತು ಮಾನ್ಯತೆ ಪಡೆಯಬೇಕು. ಅಂತಹ ಸಂದರ್ಭದಲ್ಲಿ ದೂರುದಾರರು ಪರಿಹಾರದ ಮರುಪಾವತಿಗೆ ಅರ್ಹರಾಗಿರುತ್ತಾರೆ ಎಂದು ಹೇಳಿದೆ.

ಆದೇಶವನ್ನು ಪಾಲಿಸದಿದ್ದರೆ, ಗ್ರಾಹಕ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 72 ರ ಅಡಿಯಲ್ಲಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ದೂರುದಾರರಿಗೆ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್