ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ; ಮಣ್ಣು, ತ್ಯಾಜ್ಯಮಿಶ್ರಿತ ನೀರಿನಿಂದ ಶಾಂತಿಲಾಲ್ ಲೇಔಟ್ ಜನರು ಹೈರಾಣು

ರಾಜಧಾನಿ ಬೆಂಗಳೂರಲ್ಲಿ ಒಂದೆಡೆ ನೀರಿನ ಸಮಸ್ಯೆ ತಾಂಡವವಾಡುತ್ತಿದ್ರೆ, ಈ ಊರಿನ ಜನರಿಗೆ ಇರುವ ಬೋರ್​ವೆಲ್ ನೀರು ಕೂಡ ವಿಷವಾಗಿ ಪರಿಣಮಿಸಿದೆ. ಬೆಂಗಳೂರಿನ ಸೀಗೆಹಳ್ಳಿಯ ಶಾಂತಿಲಾಲ್ ಲೇಔಟ್ ಜನರು ನೀರಿಲ್ಲದೇ ಪರದಾಡ್ತಿದ್ದಾರೆ. ಇರುವ ಒಂದು ಬೋರ್​ವೆಲ್​ನಲ್ಲಿ ಕಲುಷಿತ ನೀರು ಬರುತ್ತಿರುವುದು ಜನರನ್ನ ಕಂಗಾಲಾಗಿಸಿದೆ. ಇತ್ತ ಬಿಬಿಎಂಪಿ ಕಸ ಸಂಗ್ರಹ ಘಟಕದಿಂದ ಅಂತರ್ಜಲ ಮಲಿನವಾಗ್ತಿದೆ ಎನ್ನುವ ಆರೋಪ ಕೇಳಿಬರ್ತಿದ್ದು, ಜನರು ಕಂಗಾಲಾಗಿದ್ದಾರೆ.

ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ; ಮಣ್ಣು, ತ್ಯಾಜ್ಯಮಿಶ್ರಿತ ನೀರಿನಿಂದ ಶಾಂತಿಲಾಲ್ ಲೇಔಟ್ ಜನರು ಹೈರಾಣು
ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 10, 2024 | 9:41 AM

ಬೆಂಗಳೂರು, ಮಾ.10: ಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಹಲವೆಡೆ ನೀರಿನ ಅಭಾವದಿಂದ ಜನರು ಕಂಗಾಲಾಗಿದ್ದಾರೆ.ಟಿವಿ9 ಕೂಡ ನೀರಿನ ಸಮಸ್ಯೆ(Water Crisis) ಬಗ್ಗೆ ನಿರಂತರ ವರದಿ ಮಾಡ್ತಿದ್ದು, ನೀರಿಲ್ಲ ನೀರಿಲ್ಲ ಅಭಿಯಾನದಲ್ಲಿ ಸೀಗೆಹಳ್ಳಿಯ ಶಾಂತಿಲಾಲ್ ಲೇ ಔಟ್ ಜನರ ಸಂಕಷ್ಟ ಅನಾವರಣಾಗಿದೆ. ಈ ಲೇ ಔಟ್ ನಿವಾಸಿಗಳಿಗೆ ಇರೋ ಒಂದು ಬೋರ್ ವೆಲ್ ನಿಂದ ಆಗೊಮ್ಮೆ ಈಗೊಮ್ಮೆ ನೀರು ಸಫ್ಲೆ ಆಗ್ತಿದೆ, ಆದ್ರೆ ಬರೋ ನೀರಲ್ಲಿ ತ್ಯಾಜ್ಯ ಮಿಕ್ಸ್ ಆಗಿ ಬರ್ತಿದ್ದು ಇದರಿಂದ ಜನರು ಕಂಗಾಲಾಗಿದ್ದಾರೆ

ಇನ್ನು ಈ ಲೇಔಟ್ ಹಿಂಭಾಗದಲ್ಲಿ ಬಿಬಿಎಂಪಿಯ ಕಸ ಸಂಗ್ರಹ ಘಟಕ ಇದೆ. ಈ ಘಟಕದಿಂದ ಅಂತರ್ಜಲ ಕಲುಷಿತವಾಗಿದೆ ಎಂದು ಜನರು ಆರೋಪಿಸುತ್ತಿದ್ದು, ಅಕ್ಕ-ಪಕ್ಕದ ಬೋರ್​ವೆಲ್​ಗಳ ನೀರಿಗೆ ವಿಷ ಬರುತ್ತಿದೆ ಎಂದು ಜನರು ಕಿಡಿಕಾರುತ್ತಿದ್ದಾರೆ. ಜೊತೆಗೆ ಕಲುಷಿತ ನೀರಿನಿಂದ ಬಹುತೇಕರಲ್ಲಿ ಚರ್ಮ ಸೋಂಕು ಬರುತ್ತಿದೆ. ಸರ್ಕಾರ ಗ್ಯಾರಂಟಿ ಕೊಡೋದು ಬೇಡ, ನಮಗೆ ಶುದ್ಧ ನೀರು ಕೊಡಲಿ ಎಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ:Bengaluru Water Crisis: ನೀರಿನ ಬಿಕ್ಕಟ್ಟು ಎದುರಿಸಲು ಹೇಗಿದೆ ಬೆಂಗಳೂರಿನ ಐಟಿ ಕಂಪನಿಗಳ ಸಿದ್ಧತೆ

ಇತ್ತ ಲೇಔಟ್ ಜನರ ನೀರಿನ ಸಮಸ್ಯೆ ಬೆನ್ನಲ್ಲೆ ಗ್ರಾಮ ಪಂಚಾಯಿತಿಯಿಂದ ಹೊಸ ಬೋರ್​ವೆಲ್ ಕೊರೆಸೋಕೆ ಪಾಯಿಂಟ್ ಗುರುತು ಮಾಡಿದ್ದಾರೆ. ಆದ್ರೆ, ಆ ಜಾಗದಲ್ಲೂ ಕಲುಷಿತ ನೀರು ಬರಬಹುದು ಎಂದು ಜನರು ಕಂಗಾಲಾಗಿದ್ದಾರೆ. ಅತ್ತ ಟ್ಯಾಂಕರ್ ನೀರಿಗೂ ದುಬಾರಿ ಕೊಡಬೇಕಾದ ಸ್ಥಿತಿಯಿಂದ ತತ್ತರಿಸಿರುವ ಜನರಿಗೆ, ಈ ಕಲುಷಿತ ನೀರಿನಿಂದ ಅಧಿಕಾರಿಗಳು ಮುಕ್ತಿ ಕೊಡುತ್ತಾರಾ ಎನ್ನುವುದನ್ನ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು