AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ; ಮಣ್ಣು, ತ್ಯಾಜ್ಯಮಿಶ್ರಿತ ನೀರಿನಿಂದ ಶಾಂತಿಲಾಲ್ ಲೇಔಟ್ ಜನರು ಹೈರಾಣು

ರಾಜಧಾನಿ ಬೆಂಗಳೂರಲ್ಲಿ ಒಂದೆಡೆ ನೀರಿನ ಸಮಸ್ಯೆ ತಾಂಡವವಾಡುತ್ತಿದ್ರೆ, ಈ ಊರಿನ ಜನರಿಗೆ ಇರುವ ಬೋರ್​ವೆಲ್ ನೀರು ಕೂಡ ವಿಷವಾಗಿ ಪರಿಣಮಿಸಿದೆ. ಬೆಂಗಳೂರಿನ ಸೀಗೆಹಳ್ಳಿಯ ಶಾಂತಿಲಾಲ್ ಲೇಔಟ್ ಜನರು ನೀರಿಲ್ಲದೇ ಪರದಾಡ್ತಿದ್ದಾರೆ. ಇರುವ ಒಂದು ಬೋರ್​ವೆಲ್​ನಲ್ಲಿ ಕಲುಷಿತ ನೀರು ಬರುತ್ತಿರುವುದು ಜನರನ್ನ ಕಂಗಾಲಾಗಿಸಿದೆ. ಇತ್ತ ಬಿಬಿಎಂಪಿ ಕಸ ಸಂಗ್ರಹ ಘಟಕದಿಂದ ಅಂತರ್ಜಲ ಮಲಿನವಾಗ್ತಿದೆ ಎನ್ನುವ ಆರೋಪ ಕೇಳಿಬರ್ತಿದ್ದು, ಜನರು ಕಂಗಾಲಾಗಿದ್ದಾರೆ.

ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ; ಮಣ್ಣು, ತ್ಯಾಜ್ಯಮಿಶ್ರಿತ ನೀರಿನಿಂದ ಶಾಂತಿಲಾಲ್ ಲೇಔಟ್ ಜನರು ಹೈರಾಣು
ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ
TV9 Web
| Edited By: |

Updated on: Mar 10, 2024 | 9:41 AM

Share

ಬೆಂಗಳೂರು, ಮಾ.10: ಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಹಲವೆಡೆ ನೀರಿನ ಅಭಾವದಿಂದ ಜನರು ಕಂಗಾಲಾಗಿದ್ದಾರೆ.ಟಿವಿ9 ಕೂಡ ನೀರಿನ ಸಮಸ್ಯೆ(Water Crisis) ಬಗ್ಗೆ ನಿರಂತರ ವರದಿ ಮಾಡ್ತಿದ್ದು, ನೀರಿಲ್ಲ ನೀರಿಲ್ಲ ಅಭಿಯಾನದಲ್ಲಿ ಸೀಗೆಹಳ್ಳಿಯ ಶಾಂತಿಲಾಲ್ ಲೇ ಔಟ್ ಜನರ ಸಂಕಷ್ಟ ಅನಾವರಣಾಗಿದೆ. ಈ ಲೇ ಔಟ್ ನಿವಾಸಿಗಳಿಗೆ ಇರೋ ಒಂದು ಬೋರ್ ವೆಲ್ ನಿಂದ ಆಗೊಮ್ಮೆ ಈಗೊಮ್ಮೆ ನೀರು ಸಫ್ಲೆ ಆಗ್ತಿದೆ, ಆದ್ರೆ ಬರೋ ನೀರಲ್ಲಿ ತ್ಯಾಜ್ಯ ಮಿಕ್ಸ್ ಆಗಿ ಬರ್ತಿದ್ದು ಇದರಿಂದ ಜನರು ಕಂಗಾಲಾಗಿದ್ದಾರೆ

ಇನ್ನು ಈ ಲೇಔಟ್ ಹಿಂಭಾಗದಲ್ಲಿ ಬಿಬಿಎಂಪಿಯ ಕಸ ಸಂಗ್ರಹ ಘಟಕ ಇದೆ. ಈ ಘಟಕದಿಂದ ಅಂತರ್ಜಲ ಕಲುಷಿತವಾಗಿದೆ ಎಂದು ಜನರು ಆರೋಪಿಸುತ್ತಿದ್ದು, ಅಕ್ಕ-ಪಕ್ಕದ ಬೋರ್​ವೆಲ್​ಗಳ ನೀರಿಗೆ ವಿಷ ಬರುತ್ತಿದೆ ಎಂದು ಜನರು ಕಿಡಿಕಾರುತ್ತಿದ್ದಾರೆ. ಜೊತೆಗೆ ಕಲುಷಿತ ನೀರಿನಿಂದ ಬಹುತೇಕರಲ್ಲಿ ಚರ್ಮ ಸೋಂಕು ಬರುತ್ತಿದೆ. ಸರ್ಕಾರ ಗ್ಯಾರಂಟಿ ಕೊಡೋದು ಬೇಡ, ನಮಗೆ ಶುದ್ಧ ನೀರು ಕೊಡಲಿ ಎಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ:Bengaluru Water Crisis: ನೀರಿನ ಬಿಕ್ಕಟ್ಟು ಎದುರಿಸಲು ಹೇಗಿದೆ ಬೆಂಗಳೂರಿನ ಐಟಿ ಕಂಪನಿಗಳ ಸಿದ್ಧತೆ

ಇತ್ತ ಲೇಔಟ್ ಜನರ ನೀರಿನ ಸಮಸ್ಯೆ ಬೆನ್ನಲ್ಲೆ ಗ್ರಾಮ ಪಂಚಾಯಿತಿಯಿಂದ ಹೊಸ ಬೋರ್​ವೆಲ್ ಕೊರೆಸೋಕೆ ಪಾಯಿಂಟ್ ಗುರುತು ಮಾಡಿದ್ದಾರೆ. ಆದ್ರೆ, ಆ ಜಾಗದಲ್ಲೂ ಕಲುಷಿತ ನೀರು ಬರಬಹುದು ಎಂದು ಜನರು ಕಂಗಾಲಾಗಿದ್ದಾರೆ. ಅತ್ತ ಟ್ಯಾಂಕರ್ ನೀರಿಗೂ ದುಬಾರಿ ಕೊಡಬೇಕಾದ ಸ್ಥಿತಿಯಿಂದ ತತ್ತರಿಸಿರುವ ಜನರಿಗೆ, ಈ ಕಲುಷಿತ ನೀರಿನಿಂದ ಅಧಿಕಾರಿಗಳು ಮುಕ್ತಿ ಕೊಡುತ್ತಾರಾ ಎನ್ನುವುದನ್ನ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್