AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ; ಮಣ್ಣು, ತ್ಯಾಜ್ಯಮಿಶ್ರಿತ ನೀರಿನಿಂದ ಶಾಂತಿಲಾಲ್ ಲೇಔಟ್ ಜನರು ಹೈರಾಣು

ರಾಜಧಾನಿ ಬೆಂಗಳೂರಲ್ಲಿ ಒಂದೆಡೆ ನೀರಿನ ಸಮಸ್ಯೆ ತಾಂಡವವಾಡುತ್ತಿದ್ರೆ, ಈ ಊರಿನ ಜನರಿಗೆ ಇರುವ ಬೋರ್​ವೆಲ್ ನೀರು ಕೂಡ ವಿಷವಾಗಿ ಪರಿಣಮಿಸಿದೆ. ಬೆಂಗಳೂರಿನ ಸೀಗೆಹಳ್ಳಿಯ ಶಾಂತಿಲಾಲ್ ಲೇಔಟ್ ಜನರು ನೀರಿಲ್ಲದೇ ಪರದಾಡ್ತಿದ್ದಾರೆ. ಇರುವ ಒಂದು ಬೋರ್​ವೆಲ್​ನಲ್ಲಿ ಕಲುಷಿತ ನೀರು ಬರುತ್ತಿರುವುದು ಜನರನ್ನ ಕಂಗಾಲಾಗಿಸಿದೆ. ಇತ್ತ ಬಿಬಿಎಂಪಿ ಕಸ ಸಂಗ್ರಹ ಘಟಕದಿಂದ ಅಂತರ್ಜಲ ಮಲಿನವಾಗ್ತಿದೆ ಎನ್ನುವ ಆರೋಪ ಕೇಳಿಬರ್ತಿದ್ದು, ಜನರು ಕಂಗಾಲಾಗಿದ್ದಾರೆ.

ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ; ಮಣ್ಣು, ತ್ಯಾಜ್ಯಮಿಶ್ರಿತ ನೀರಿನಿಂದ ಶಾಂತಿಲಾಲ್ ಲೇಔಟ್ ಜನರು ಹೈರಾಣು
ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ
TV9 Web
| Edited By: |

Updated on: Mar 10, 2024 | 9:41 AM

Share

ಬೆಂಗಳೂರು, ಮಾ.10: ಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಹಲವೆಡೆ ನೀರಿನ ಅಭಾವದಿಂದ ಜನರು ಕಂಗಾಲಾಗಿದ್ದಾರೆ.ಟಿವಿ9 ಕೂಡ ನೀರಿನ ಸಮಸ್ಯೆ(Water Crisis) ಬಗ್ಗೆ ನಿರಂತರ ವರದಿ ಮಾಡ್ತಿದ್ದು, ನೀರಿಲ್ಲ ನೀರಿಲ್ಲ ಅಭಿಯಾನದಲ್ಲಿ ಸೀಗೆಹಳ್ಳಿಯ ಶಾಂತಿಲಾಲ್ ಲೇ ಔಟ್ ಜನರ ಸಂಕಷ್ಟ ಅನಾವರಣಾಗಿದೆ. ಈ ಲೇ ಔಟ್ ನಿವಾಸಿಗಳಿಗೆ ಇರೋ ಒಂದು ಬೋರ್ ವೆಲ್ ನಿಂದ ಆಗೊಮ್ಮೆ ಈಗೊಮ್ಮೆ ನೀರು ಸಫ್ಲೆ ಆಗ್ತಿದೆ, ಆದ್ರೆ ಬರೋ ನೀರಲ್ಲಿ ತ್ಯಾಜ್ಯ ಮಿಕ್ಸ್ ಆಗಿ ಬರ್ತಿದ್ದು ಇದರಿಂದ ಜನರು ಕಂಗಾಲಾಗಿದ್ದಾರೆ

ಇನ್ನು ಈ ಲೇಔಟ್ ಹಿಂಭಾಗದಲ್ಲಿ ಬಿಬಿಎಂಪಿಯ ಕಸ ಸಂಗ್ರಹ ಘಟಕ ಇದೆ. ಈ ಘಟಕದಿಂದ ಅಂತರ್ಜಲ ಕಲುಷಿತವಾಗಿದೆ ಎಂದು ಜನರು ಆರೋಪಿಸುತ್ತಿದ್ದು, ಅಕ್ಕ-ಪಕ್ಕದ ಬೋರ್​ವೆಲ್​ಗಳ ನೀರಿಗೆ ವಿಷ ಬರುತ್ತಿದೆ ಎಂದು ಜನರು ಕಿಡಿಕಾರುತ್ತಿದ್ದಾರೆ. ಜೊತೆಗೆ ಕಲುಷಿತ ನೀರಿನಿಂದ ಬಹುತೇಕರಲ್ಲಿ ಚರ್ಮ ಸೋಂಕು ಬರುತ್ತಿದೆ. ಸರ್ಕಾರ ಗ್ಯಾರಂಟಿ ಕೊಡೋದು ಬೇಡ, ನಮಗೆ ಶುದ್ಧ ನೀರು ಕೊಡಲಿ ಎಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ:Bengaluru Water Crisis: ನೀರಿನ ಬಿಕ್ಕಟ್ಟು ಎದುರಿಸಲು ಹೇಗಿದೆ ಬೆಂಗಳೂರಿನ ಐಟಿ ಕಂಪನಿಗಳ ಸಿದ್ಧತೆ

ಇತ್ತ ಲೇಔಟ್ ಜನರ ನೀರಿನ ಸಮಸ್ಯೆ ಬೆನ್ನಲ್ಲೆ ಗ್ರಾಮ ಪಂಚಾಯಿತಿಯಿಂದ ಹೊಸ ಬೋರ್​ವೆಲ್ ಕೊರೆಸೋಕೆ ಪಾಯಿಂಟ್ ಗುರುತು ಮಾಡಿದ್ದಾರೆ. ಆದ್ರೆ, ಆ ಜಾಗದಲ್ಲೂ ಕಲುಷಿತ ನೀರು ಬರಬಹುದು ಎಂದು ಜನರು ಕಂಗಾಲಾಗಿದ್ದಾರೆ. ಅತ್ತ ಟ್ಯಾಂಕರ್ ನೀರಿಗೂ ದುಬಾರಿ ಕೊಡಬೇಕಾದ ಸ್ಥಿತಿಯಿಂದ ತತ್ತರಿಸಿರುವ ಜನರಿಗೆ, ಈ ಕಲುಷಿತ ನೀರಿನಿಂದ ಅಧಿಕಾರಿಗಳು ಮುಕ್ತಿ ಕೊಡುತ್ತಾರಾ ಎನ್ನುವುದನ್ನ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?