AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ; ಮಣ್ಣು, ತ್ಯಾಜ್ಯಮಿಶ್ರಿತ ನೀರಿನಿಂದ ಶಾಂತಿಲಾಲ್ ಲೇಔಟ್ ಜನರು ಹೈರಾಣು

ರಾಜಧಾನಿ ಬೆಂಗಳೂರಲ್ಲಿ ಒಂದೆಡೆ ನೀರಿನ ಸಮಸ್ಯೆ ತಾಂಡವವಾಡುತ್ತಿದ್ರೆ, ಈ ಊರಿನ ಜನರಿಗೆ ಇರುವ ಬೋರ್​ವೆಲ್ ನೀರು ಕೂಡ ವಿಷವಾಗಿ ಪರಿಣಮಿಸಿದೆ. ಬೆಂಗಳೂರಿನ ಸೀಗೆಹಳ್ಳಿಯ ಶಾಂತಿಲಾಲ್ ಲೇಔಟ್ ಜನರು ನೀರಿಲ್ಲದೇ ಪರದಾಡ್ತಿದ್ದಾರೆ. ಇರುವ ಒಂದು ಬೋರ್​ವೆಲ್​ನಲ್ಲಿ ಕಲುಷಿತ ನೀರು ಬರುತ್ತಿರುವುದು ಜನರನ್ನ ಕಂಗಾಲಾಗಿಸಿದೆ. ಇತ್ತ ಬಿಬಿಎಂಪಿ ಕಸ ಸಂಗ್ರಹ ಘಟಕದಿಂದ ಅಂತರ್ಜಲ ಮಲಿನವಾಗ್ತಿದೆ ಎನ್ನುವ ಆರೋಪ ಕೇಳಿಬರ್ತಿದ್ದು, ಜನರು ಕಂಗಾಲಾಗಿದ್ದಾರೆ.

ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ; ಮಣ್ಣು, ತ್ಯಾಜ್ಯಮಿಶ್ರಿತ ನೀರಿನಿಂದ ಶಾಂತಿಲಾಲ್ ಲೇಔಟ್ ಜನರು ಹೈರಾಣು
ಬೆಂಗಳೂರಿಗೆ ಜಲಕ್ಷಾಮದ ಮಧ್ಯೆ ಕಲುಷಿತ ನೀರಿನ ಸಂಕಷ್ಟ
TV9 Web
| Edited By: |

Updated on: Mar 10, 2024 | 9:41 AM

Share

ಬೆಂಗಳೂರು, ಮಾ.10: ಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಹಲವೆಡೆ ನೀರಿನ ಅಭಾವದಿಂದ ಜನರು ಕಂಗಾಲಾಗಿದ್ದಾರೆ.ಟಿವಿ9 ಕೂಡ ನೀರಿನ ಸಮಸ್ಯೆ(Water Crisis) ಬಗ್ಗೆ ನಿರಂತರ ವರದಿ ಮಾಡ್ತಿದ್ದು, ನೀರಿಲ್ಲ ನೀರಿಲ್ಲ ಅಭಿಯಾನದಲ್ಲಿ ಸೀಗೆಹಳ್ಳಿಯ ಶಾಂತಿಲಾಲ್ ಲೇ ಔಟ್ ಜನರ ಸಂಕಷ್ಟ ಅನಾವರಣಾಗಿದೆ. ಈ ಲೇ ಔಟ್ ನಿವಾಸಿಗಳಿಗೆ ಇರೋ ಒಂದು ಬೋರ್ ವೆಲ್ ನಿಂದ ಆಗೊಮ್ಮೆ ಈಗೊಮ್ಮೆ ನೀರು ಸಫ್ಲೆ ಆಗ್ತಿದೆ, ಆದ್ರೆ ಬರೋ ನೀರಲ್ಲಿ ತ್ಯಾಜ್ಯ ಮಿಕ್ಸ್ ಆಗಿ ಬರ್ತಿದ್ದು ಇದರಿಂದ ಜನರು ಕಂಗಾಲಾಗಿದ್ದಾರೆ

ಇನ್ನು ಈ ಲೇಔಟ್ ಹಿಂಭಾಗದಲ್ಲಿ ಬಿಬಿಎಂಪಿಯ ಕಸ ಸಂಗ್ರಹ ಘಟಕ ಇದೆ. ಈ ಘಟಕದಿಂದ ಅಂತರ್ಜಲ ಕಲುಷಿತವಾಗಿದೆ ಎಂದು ಜನರು ಆರೋಪಿಸುತ್ತಿದ್ದು, ಅಕ್ಕ-ಪಕ್ಕದ ಬೋರ್​ವೆಲ್​ಗಳ ನೀರಿಗೆ ವಿಷ ಬರುತ್ತಿದೆ ಎಂದು ಜನರು ಕಿಡಿಕಾರುತ್ತಿದ್ದಾರೆ. ಜೊತೆಗೆ ಕಲುಷಿತ ನೀರಿನಿಂದ ಬಹುತೇಕರಲ್ಲಿ ಚರ್ಮ ಸೋಂಕು ಬರುತ್ತಿದೆ. ಸರ್ಕಾರ ಗ್ಯಾರಂಟಿ ಕೊಡೋದು ಬೇಡ, ನಮಗೆ ಶುದ್ಧ ನೀರು ಕೊಡಲಿ ಎಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ:Bengaluru Water Crisis: ನೀರಿನ ಬಿಕ್ಕಟ್ಟು ಎದುರಿಸಲು ಹೇಗಿದೆ ಬೆಂಗಳೂರಿನ ಐಟಿ ಕಂಪನಿಗಳ ಸಿದ್ಧತೆ

ಇತ್ತ ಲೇಔಟ್ ಜನರ ನೀರಿನ ಸಮಸ್ಯೆ ಬೆನ್ನಲ್ಲೆ ಗ್ರಾಮ ಪಂಚಾಯಿತಿಯಿಂದ ಹೊಸ ಬೋರ್​ವೆಲ್ ಕೊರೆಸೋಕೆ ಪಾಯಿಂಟ್ ಗುರುತು ಮಾಡಿದ್ದಾರೆ. ಆದ್ರೆ, ಆ ಜಾಗದಲ್ಲೂ ಕಲುಷಿತ ನೀರು ಬರಬಹುದು ಎಂದು ಜನರು ಕಂಗಾಲಾಗಿದ್ದಾರೆ. ಅತ್ತ ಟ್ಯಾಂಕರ್ ನೀರಿಗೂ ದುಬಾರಿ ಕೊಡಬೇಕಾದ ಸ್ಥಿತಿಯಿಂದ ತತ್ತರಿಸಿರುವ ಜನರಿಗೆ, ಈ ಕಲುಷಿತ ನೀರಿನಿಂದ ಅಧಿಕಾರಿಗಳು ಮುಕ್ತಿ ಕೊಡುತ್ತಾರಾ ಎನ್ನುವುದನ್ನ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ