AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ರೂ. ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಜಲಾವೃತ ಪ್ರದೇಶಗಳಲ್ಲಿನ ಜನರಿಗೆ ಆಶ್ರಯ ನೀಡಲು ಸೂಚಿಸಲಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 900 ಕೋಟಿ ರೂ. ಇದೆ. ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ರೂ. ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 29, 2022 | 11:21 AM

Share

ಬೆಂಗಳೂರು: ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆರೆಕಟ್ಟೆಗಳಿರುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಮಳೆ ಹಾನಿ ಪರಿಹಾರ ನೀಡಲು ಹಿಂದೆ ಮುಂದೆ ನೋಡಬಾರದು. ಬಿದ್ದಿರುವ ವಿದ್ಯುತ್​ ಕಂಬಗಳನ್ನ 24 ಗಂಟೆಗಳಲ್ಲಿ ದುರಸ್ತಿಗೊಳಿಸುವಂತೆ ಬೆಸ್ಕಾಂಗೆ ಸೂಚನೆ ನೀಡಲಾಗಿದೆ. ಜಲಾವೃತ ಪ್ರದೇಶಗಳಲ್ಲಿನ ಜನರಿಗೆ ಆಶ್ರಯ ನೀಡಲು ಸೂಚಿಸಲಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 900 ಕೋಟಿ ರೂ. ಇದೆ. ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. 16 ಜಿಲ್ಲೆಗಳ ಡಿಸಿಗಳ ಜೊತೆ ನಿನ್ನ ಸಭೆಯನ್ನ ಮಾಡಿದ್ದೇನೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಚನೆ ನೀಡಿದ್ದೇನೆ. ಬೆಂಗಳೂರು-ಮೈಸೂರು ಸಂಪರ್ಕಕ್ಕೆ ಪರ್ಯಾಯ ಮಾರ್ಗಕ್ಕೆ ಸೂಚನೆಯನ್ನು ನೀಡಲಾಗಿದೆ. ನಮ್ಮ ಸಿಎಸ್​ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜತೆ ಸಭೆ ಮಾಡಲಾಗಿದೆ ಎಂದು ಹೇಳಿದರು.

ದೆಹಲಿ ಭೇಟಿ ಕುರಿತು ಯಡಿಯೂರಪ್ಪ ಜೊತೆ ಮಾತುಕತೆ

ದೆಹಲಿ ಭೇಟಿ ಕುರಿತು ಯಡಿಯೂರಪ್ಪ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ಮಾಡಿದ್ದು, ಪಕ್ಷದ ಸಂಘಟನೆ ಕುರಿತು, ಪಕ್ಷದ ಕಾರ್ಯಕ್ರಮಗಳ ಕುರಿತು ಬಿಎಸ್​​ವೈ ಜತೆ ಚರ್ಚೆ ಮಾಡಿದ್ದೇನೆ. ರಾಜ್ಯದ 6 ಕಡೆಗಳಲ್ಲಿ ದೊಡ್ಡ ರ್ಯಾಲಿಗಳನ್ನು ಮಾಡುತ್ತೇವೆ. ಸೆ.8ರಂದು ಜನೋತ್ಸವ ಸಮಾವೇಶದ ಕುರಿತು ಮಾತುಕತೆ ಮಾಡಲಾಗಿದೆ ಎಂದು ಹೇಳಿದರು.

Published On - 11:19 am, Mon, 29 August 22

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ