AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್​ ಖರ್ಗೆ ಬಂಧಿಸುವಂತೆ ಛಲವಾದಿ ಒತ್ತಾಯ: ಗುತ್ತಿಗೆದಾರ ಆತ್ಮಹತ್ಯೆ ಕೇಸ್ ಉನ್ನತ ಮಟ್ಟದ ತನಿಖೆಗೆ ಆಗ್ರಹ

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆ ವಿಪಕ್ಷ ನಾಯಕರು ಕಿಡಿಕಾರುತ್ತಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಖರ್ಗೆ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಮತ್ತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಿಯಾಂಕ್​ ಖರ್ಗೆ ಬಂಧಿಸುವಂತೆ ಛಲವಾದಿ ಒತ್ತಾಯ: ಗುತ್ತಿಗೆದಾರ ಆತ್ಮಹತ್ಯೆ ಕೇಸ್ ಉನ್ನತ ಮಟ್ಟದ ತನಿಖೆಗೆ ಆಗ್ರಹ
ಪ್ರಿಯಾಂಕ್​ ಖರ್ಗೆ ಬಂಧಿಸುವಂತೆ ಛಲವಾದಿ ಒತ್ತಾಯ: ಗುತ್ತಿಗೆದಾರ ಆತ್ಮಹತ್ಯೆ ಕೇಸ್ ಉನ್ನತ ಮಟ್ಟದ ತನಿಖೆಗೆ ಆಗ್ರಹ
TV9 Web
| Edited By: |

Updated on: Dec 28, 2024 | 4:08 PM

Share

ಬೆಂಗಳೂರು, ಡಿಸೆಂಬರ್​ 28: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ಖರ್ಗೆಯವರ (Priyank Kharge) ಅಟ್ಟಹಾಸ ಬಹಳ ನಡೆಯುತ್ತಿದೆ. ಅವರನ್ನು ಸಚಿವ ಸ್ಥಾನದಿಂದ ಕೈ ಬೀಡಬೇಕು. ಅಲ್ಲದೆ ತಕ್ಷಣ ಬಂಧಿಸಬೇಕು. ಮತ್ತು ಗುತ್ತಿಗೆದಾರ ಸಚಿನ್​ ಆತ್ಮಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಎಲ್ಲದರಲ್ಲೂ ತಮಗೆ ಬೇಕಾದವರನ್ನು ಸಹಚರರನ್ನಾಗಿ ಜೋಡಿಸಿಕೊಂಡು ಎಲ್ಲಾ ರೀತಿಯ ದಂಧೆಗಳಲ್ಲಿ ತೊಡಗಿದ್ದಾರೆ. ಮರಳು ದಂಧೆ, ಟೈಲ್ಸ್, ಸಿಮೆಂಟ್ ಫ್ಯಾಕ್ಟರಿ ಹೀಗೆ ಎಲ್ಲಾ ರೀತಿಯ ದಂಧೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್, ಗ್ಯಾಂಗ್‌ ವಿರುದ್ಧ ಕಬುರಗಿಯಲ್ಲಿ ಕೊನೆಗೂ ಎಫ್​ಐಆರ್ ದಾಖಲು

ಗುತ್ತಿಗೆದಾರ ವಿಚಾರಕ್ಕೂ ಬೇಕಾದವರ ನೇಮಕ ಆಗಿದೆ. ಇದೇ ಕಾರಣಕ್ಕೂ ಸಚಿನ್ ಅವರ ಆತ್ಮಹತ್ಯೆ ಆಗಿದೆ. ಇದರ ಉನ್ನತ ತನಿಖೆ ಆಗಲೇಬೇಕು. ಪ್ರಿಯಾಂಕ ಖರ್ಗೆ ಅವರು ಸಂಪೂರ್ಣವಾಗಿ ತನಿಖೆಗೆ ಸಹಕರಿಸುವಂತೆ ಸರಕಾರ ಮಾಡಬೇಕು. ಇಲ್ಲವಾದರೆ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಅಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮೃತ ಸಚಿನ್ ಅವರು 7 ಪುಟಗಳ ಡೆತ್ ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲೂ ಹಾಕಿದ್ದಾರೆ. ಅದರಲ್ಲಿ ಆಂದೋಲ ಸ್ವಾಮೀಜಿ, ಚಂದು ಪಾಟೀಲ್, ಬಸವರಾಜ ಮತ್ತಿಮೂಡ ಅವರನ್ನು ಸುಪಾರಿ ಕೊಟ್ಟು ಸಾಯಿಸುವ ವಿಚಾರವೂ ಪ್ರಸ್ತಾಪವಾಗಿದೆ ಎಂದರು.

ರಿಪಬ್ಲಿಕ್ ಆಫ್ ಕಲಬುರಗಿ ವ್ಯವಸ್ಥೆ 

ಅದು ರಿಪಬ್ಲಿಕ್ ಆಫ್ ಕಲಬುರಗಿ ಆಗಿದೆ. ಕರ್ನಾಟಕದ ವ್ಯವಸ್ಥೆಯೇ ಬೇರೆ. ಕಲಬುರಗಿ ವ್ಯವಸ್ಥೆಯೇ ಬೇರೆಯಾಗಿದೆ. ಪೊಲೀಸರು ಕೂಡ ಅಲ್ಲಿ ಪ್ರಿಯಾಂಕ್​ ಖರ್ಗೆಯವರು ಹೇಳಿದ್ದೇ ಆಡಳಿತ ಎಂಬಂತೆ ನಡೆದುಕೊಳ್ಳುತ್ತಾರೆ ಎಂದು ಕಿಡಕಾರಿದರು.

ಇದನ್ನೂ ಓದಿ: ಗುತ್ತಿಗೆದಾರ ಆತ್ಮಹತ್ಯೆ: ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಬಿಜೆಪಿ ನಾಯಕರು, ಪೊಲೀಸ್ ಮಧ್ಯೆ ಹೈಡ್ರಾಮಾ

ಅಲ್ಲಿ ಖರ್ಗೆ ಮನೆತನದ ದೊಡ್ಡ ಪಾರುಪತ್ಯ ನಡೆದಿದೆ. ಬೇರೆ ಯಾರಿಗೂ ಮಾತನಾಡಲು ಅವಕಾಶ ಇಲ್ಲ. ವಿಶೇಷವಾಗಿ ದಲಿತ ಸಮುದಾಯಗಳು ಅವರ ವಿರುದ್ಧ ಮಾತನಾಡಿದರೆ, ಶಿಕ್ಷೆ ಅನುಭವಿಸಬೇಕಾಗುತ್ತದೆ. ಯಾರಾದರೂ ಅವರ ವಿರುದ್ಧ ಮಾತನಾಡಿದರೆ, ಪೊಲೀಸರು ಅಂಥವರ ಮನೆ ಮುಂದೆ ಇರುತ್ತಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ