AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರನ ಅಪಹರಣ ಪ್ರಕರಣ: BBMP ಮಾಜಿ ಕಾರ್ಪೊರೇಟರ್‌ ವೆಂಕಟೇಶ್ ಬಂಧನ

ಗುತ್ತಿಗೆದಾರನನ್ನು ಅಪಹರಿಸಿ ಮೂರು ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣ ಸಂಬಂಧ ಬೆಂಗಳೂರಿನ ಯಶವಂತಪುರ ಠಾಣಾ ಪೊಲೀಸರು ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಜಿ.ಕೆ.ವೆಂಕಟೇಶ್ ಅವರನ್ನು ಅಧಿಕೃತವಾಗಿ ಬಂಧಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಗುತ್ತಿಗೆದಾರ ಚಂದ್ರು ದೂರಿನ ಮೇರೆಗೆ ವೆಂಕಟೇಶ್​ ಬಂಧನವಾಗಿದೆ.

ಗುತ್ತಿಗೆದಾರನ ಅಪಹರಣ ಪ್ರಕರಣ: BBMP ಮಾಜಿ ಕಾರ್ಪೊರೇಟರ್‌ ವೆಂಕಟೇಶ್ ಬಂಧನ
ಗುತ್ತಿಗೆದಾರನ ಅಪಹರಣ ಪ್ರಕರಣ ಸಂಬಂಧ BBMP ಮಾಜಿ ಕಾರ್ಪೊರೇಟರ್‌ ವೆಂಕಟೇಶ್​ನನ್ನು ಬಂಧಿಸಿದ ಯಶವಂತಪುರ ಠಾಣಾ ಪೊಲೀಸರು
Shivaprasad B
| Edited By: |

Updated on: Oct 20, 2023 | 7:27 PM

Share

ಬೆಂಗಳೂರು, ಅ.20: ಗುತ್ತಿಗೆದಾರನನ್ನು ಅಪಹರಿಸಿ ಮೂರು ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣ ಸಂಬಂಧ ನಗರದ ಯಶವಂತಪುರ ಠಾಣಾ ಪೊಲೀಸರು ಬಿಬಿಎಂಪಿ (BBMP) ಮಾಜಿ ಕಾರ್ಪೊರೇಟರ್‌ ಜಿ.ಕೆ.ವೆಂಕಟೇಶ್ ಅವರನ್ನು ಅಧಿಕೃತವಾಗಿ ಬಂಧಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಗುತ್ತಿಗೆದಾರ ಚಂದ್ರು ದೂರಿನ ಮೇರೆಗೆ ವೆಂಕಟೇಶ್​ ಬಂಧನವಾಗಿದೆ.

ಯಶವಂತಪುರ ವಾರ್ಡ್‌ನಲ್ಲಿ ಕಾಮಗಾರಿವೊಂದರ ಗುತ್ತಿಗೆ ಚಂದ್ರು ಪಾಲಾಗಿತ್ತು. ಇದರಿಂದ ಕೆಂಡಾಮಂಡಲವಾಗಿದ್ದ ಯಶವಂತಪುರದ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಿ.ಕೆ.ವೆಂಕಟೇಶ್, ಎರಡು ದಿನಗಳ ಹಿಂದೆ ಅಪಹರಿಸಿ 3 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: ರಾಜಧಾನಿ ಬೆಂಗಳೂರು ಹೆಬ್ಬಾಗಿಲಲ್ಲೇ ನಡೀತು ಸಿನಿಮಾ ಶೈಲಿಯ ಕಿಡ್ನಾಪ್, ಎರಡು ದಿನಗಳ ಬಳಿಕ ಯುವಕನ ಮೃತದೇಹ ಪತ್ತೆ

ನಿನ್ನಿಂದ ನಷ್ಟ ಆಗಿದೆ, ಕಾಮಗಾರಿ ಕೈತಪ್ಪಿದೆ, ಅದನ್ನು ಭರಿಸುವಂತೆ ಬೆದರಿಕೆಯೂ ಹಾಕಿದ್ದರು. ಬಳಿಕ 3 ಕೋಟಿ ರೂಪಾಯಿ ಚೆಕ್ ಪಡೆದು ಹಲ್ಲೆ ಮಾಡಿ ಚಂದ್ರುನನ್ನು ಬಿಡುಗಡೆ ಮಾಡಿದ್ದರು. ಘಟನೆ ಸಂಬಂಧ ಚಂದ್ರು ಅವರು ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೆಂಕಟೇಶ್ ಅವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ವೆಂಕಟೇಶ್​ ಅವರನ್ನು ಯಶ್ವಂತಪುರ ಠಾಣಾ ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್