AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೆಷ್ಟೇ ಚೀರಾಡಲಿ, ಬೇಕಿದ್ರೆ ಬಟ್ಟೆ ಹರಿದುಕೊಳ್ಳಲಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಪ್ರಿಯಾಂಕ್ ಖರ್ಗೆ

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆ ನೀಡುವಂತೆ ಒತ್ತಾಯ ಕೇಳಿಬರುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್, ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ರಾಜು ಕಪನೂರು ಕಾಂಗ್ರೆಸ್ ಸೇರುವ​ ಮೊದಲು ಬಿಜೆಪಿಯಲ್ಲಿದ್ದರು, ಬಿಜೆಪಿ ಎಸ್​ಸಿ ಮೋರ್ಚಾ ಅಧ್ಯಕ್ಷರಾಗಿದ್ದರು ಎಂದರು.

ಪ್ರಸನ್ನ ಗಾಂವ್ಕರ್​
| Edited By: |

Updated on:Dec 30, 2024 | 12:29 PM

Share

ಬೆಂಗಳೂರು, ಡಿಸೆಂಬರ್ 30: ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಬೀದರ್​ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿಯು ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆಗೆ ಪಟ್ಟು ಹಿಡಿದಿದೆ. ಈ ಕುರಿತು ಮಾತನಾಡಿರುವ ಪ್ರಿಯಾಂಕಾ ಯಾರೆಷ್ಟೇ ಚೀರಾಡಿದರೂ, ಬಟ್ಟೆ ಹರಿದುಕೊಂಡರೂ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಯಾವುದಾದರೂ ದಾಖಲೆ ಇದ್ದರೆ ತೋರಿಸಲಿ ಎಂದಿದ್ದಾರೆ.

ನನ್ನ ರಾಜೀನಾಮೆ ಕೇಳಲು ವಿಜಯೇಂದ್ರಾ ಸುಪ್ರೀಂಕೋರ್ಟಾ? ರಾಜು ಕಪನೂರ್ ನನ್ನ ಆಪ್ತ ಅಲ್ಲ ಎಂದು ನಾನು ಹೇಳಿಯೇ ಇಲ್ಲ. ರಾಜು ಕಪನೂರು ಕಾಂಗ್ರೆಸ್ ಸೇರುವ​ ಮೊದಲು ಬಿಜೆಪಿಯಲ್ಲಿದ್ದರು, ಬಿಜೆಪಿ ಎಸ್​ಸಿ ಮೋರ್ಚಾ ಅಧ್ಯಕ್ಷರಾಗಿದ್ದರು ಎಂದರು.

ವಿಜಯೇಂದ್ರ ವಿರುದ್ಧ ಮನಿ ಲ್ಯಾಂಡರಿಂಗ್​ ಕೇಸ್ ದಾಖಲಾಗಿದೆ, ವಿಜಯೇಂದ್ರ ಯಾಕೆ ರಾಜೀನಾಮೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು. ಕಲಬುರಗಿ ಮುತ್ತಿಗೆಗೆ ಎಷ್ಟು ಜನ ಬರ್ತೀರಿ ಅಂತಾ ಮೊದಲೇ ಹೇಳಿ, ಅಷ್ಟು ಜನರಿಗೆ ಟೀ ವ್ಯವಸ್ಥೆ ಮಾಡ್ತೇವೆ, ಇಲ್ಲದಿದ್ದರೆ ನೀರನ್ನೂ ಕೊಟ್ಟಿಲ್ಲ ಅಂತಾ ಪ್ರತಿಭಟನೆ ಮಾಡ್ತೀರಾ ಎಂದು ಹೇಳಿದರು.

ಮತ್ತಷ್ಟು ಓದಿ: ಗುತ್ತಿಗೆದಾರ ಸಚಿನ್ ಪಾಂಚಾಳ್​ರದ್ದು ಸರ್ಕಾರಿ ಯೋಜಿತ ಆತ್ಮಹತ್ಯೆ: ಬಿವೈ ವಿಜಯೇಂದ್ರ ಆರೋಪ

ಬಿಜೆಪಿಯಲ್ಲೇ ಬಿ.ವೈ.ವಿಜಯೇಂದ್ರ ಅವರ ಮಾತಿಗೆ ಕಿಮ್ಮತ್ತಿಲ್ಲ, ಉಳಿದವರು ಯಾಕೆ ಅವರ ಮಾತಿಗೆ ಕಿಮ್ಮತ್ತು ಕೊಡಬೇಕು ಎಂದು ಪ್ರಶ್ನೆ ಂಆಡಿದರು. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಬೀದರ್‌ನ 26 ವರ್ಷದ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.27ರಂದೇ ಸಚಿವ ಪ್ರಿಯಾಂಕ್ ಖರ್ಗೆ ಗೃಹ ಸಚಿವ ಡಾ. ಪರಮೇಶ್ವರ್​ಗೆ ಪತ್ರ ಬರೆದಿದ್ದಾರೆ.

ಪ್ರಕರಣದಲ್ಲಿ ಸಂಶಯ ಮೂಡಿಸುವಂಥ ಹಲವು ವಿಷಯ ನಡೆಯುತ್ತಿವೆ, ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸತ್ಯಾಂಶ ತಿಳಿಯಲು ಸ್ವತಂತ್ರ ತನಿಖಾ ಸಂಸ್ಥೆಯ ಸಿಐಡಿಗೆ ವಹಿಸಬೇಕೆಂದು ಮನವಿ ಮಾಡಲಾಗಿದೆ.

ಕಾಂಗ್ರೆಸ್​ ಸರ್ಕಾರ ಬಂದಾಗಿನಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ, ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಹಿಂದೆಂದೂ ನೋಡಿರಲಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. ಸಹೋದರಿಯರು ದೂರು ಕೊಡಲು ಹೋದಾಗ 12 ಗಂಟೆಗಳ ಕಾಲ ಪೊಲೀಸರು ಏನೂ ತಲೆಕೆಡಿಸಿಕೊಂಡಿಲ್ಲ, ಹೆಣ್ಣುಮಕ್ಕಳಿಗೆ ಹೀಯಾಳಿಸಿ ಅಪಮಾನ ಮಾಡಿ ಪೊಲೀಸರು ನಿಂದಿಸಿರುವುದು ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದರು.

ಕಲಬುರಗಿ ಜಿಲ್ಲೆಯ ಪೊಲೀಸ್ ಠಾಣೆಗಳು ಕಾಂಗ್ರೆಸ್​ ಕಚೇರಿಗಳಾಗಿವೆ, ಕಲಬುರಗಿ ಜಿಲ್ಲೆ ಯಾರ ಕಪಿಮುಷ್ಠಿಯಲ್ಲಿದೆ ಎಂದು ಬಸ್​ ನಿಲ್ದಾಣದಲ್ಲಿ ನಿಂತು ಕೇಳಿದರೂ ಹೇಳುತ್ತಾರೆ ಎಂದರು. ಕಾಂಗ್ರೆಸ್​ನವರು ಬೆಳಗಿನ ಜಾವ 2-3 ಗಂಟೆಗೆ ಸಚಿನ್ ಕುಟುಂಬದವರನ್ನು ಭೇಟಿ ಮಾಡುತ್ತಾರೆ, ಕಾಂಗ್ರೆಸ್​ನವರು ಹಗಲು ಕಾರ್ಯಾಚರಣೆ ಮಾಡುವುದಿಲ್ಲ ಎಂದು ದೂರಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:20 pm, Mon, 30 December 24

Follow Us
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ
ದೇಶದ ಮಹಿಳೆಯರು ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ