AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ 40%, ಬಿಬಿಎಂಪಿಯಲ್ಲಿ 50% ಕಮಿಷನ್ ನೀಡಬೇಕು; 6 ಗುತ್ತಿಗೆದಾರರ ಆತ್ಮಹತ್ಯೆಯಾಗಿದೆ -ಅಂಬಿಕಾಪತಿ

ಬೆಂಗಳೂರು ನಗರ ವ್ಯಾಪ್ತಿಯ ಪ್ರತಿಯೊಬ್ಬ ಶಾಸಕ, ಸಚಿವರು, ಅಧಿಕಾರಿಗಳಿಗೆ ಕಡ್ಡಾಯವಾಗಿ ಪರ್ಸೆಂಟೇಜ್ ನೀಡಲೇಬೇಕು. ಶೇಕಡಾ 50ರಷ್ಟು ಕಮಿಷನ್ ನೀಡಿದರಷ್ಟೇ ಬಿಲ್‌ಗಳು ಆಗುತ್ತೆ. ಕಮಿಷನ್ ನೀಡದಿದ್ರೆ ಬಿಲ್ ಆಗಲ್ಲವೆಂದು BBMP ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಅಂಬಿಕಾಪತಿ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ 40%, ಬಿಬಿಎಂಪಿಯಲ್ಲಿ 50% ಕಮಿಷನ್ ನೀಡಬೇಕು; 6 ಗುತ್ತಿಗೆದಾರರ ಆತ್ಮಹತ್ಯೆಯಾಗಿದೆ -ಅಂಬಿಕಾಪತಿ
ಬಿಬಿಎಂಪಿ
TV9 Web
| Edited By: |

Updated on: Apr 13, 2022 | 7:30 AM

Share

ಬೆಂಗಳೂರು: ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬಳಿಕ ಸರ್ಕಾರದಲ್ಲಿನ 40% ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಅಂಬಿಕಾಪತಿ ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ 40% ಕಮಿಷನ್ ನೀಡಬೇಕು. ಹಾಗೂ ಬಿಬಿಎಂಪಿಯಲ್ಲಿ ನಡೆಯುವ ಕಾಮಗಾರಿಗೆ 50% ಕಮಿಷನ್ ನೀಡಬೇಕು ಎಂದು ಅಂಬಿಕಾಪತಿ ಆರೋಪಿಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯ ಪ್ರತಿಯೊಬ್ಬ ಶಾಸಕ, ಸಚಿವರು, ಅಧಿಕಾರಿಗಳಿಗೆ ಕಡ್ಡಾಯವಾಗಿ ಪರ್ಸೆಂಟೇಜ್ ನೀಡಲೇಬೇಕು. ಶೇಕಡಾ 50ರಷ್ಟು ಕಮಿಷನ್ ನೀಡಿದರಷ್ಟೇ ಬಿಲ್‌ಗಳು ಆಗುತ್ತೆ. ಕಮಿಷನ್ ನೀಡದಿದ್ರೆ ಬಿಲ್ ಆಗಲ್ಲವೆಂದು BBMP ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಅಂಬಿಕಾಪತಿ ಪರ್ಸೆಂಟೇಜ್ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ತನಿಖೆ ಮಾಡಿದರೆ ಸೂಕ್ತ ದಾಖಲೆ ನೀಡಲು ನಾನು ಸಿದ್ಧ. ಪೊಲೀಸ್ ಆಯುಕ್ತರಿಗೆ ಎಲ್ಲಾ ದಾಖಲೆಗಳನ್ನು ನೀಡುತ್ತೇನೆ. KS ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆಗೂ ಮುನ್ನ 6 ಗುತ್ತಿಗೆದಾರರ ಆತ್ಮಹತ್ಯೆಯಾಗಿದೆ. BBMP ಸಿವಿಲ್ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟಿವಿ9ಗೆ ಅಂಬಿಕಾಪತಿ ತಿಳಿಸಿದ್ದಾರೆ.

ಬಿಬಿಎಂಪಿಯಲ್ಲಿ 50 ಪರ್ಸೆಂಟೇಜ್ ಕಮಿಷನ್ ದಂಧೆ ಇದೆ ಬಿಬಿಎಂಪಿಯಲ್ಲಿ 50 ಪರ್ಸೆಂಟೇಜ್ ಕಮಿಷನ್ ದಂಧೆ ಇದೆ. 50 ಪರ್ಸೆಂಟೇಜ್ ಕಮಿಷನ್ ಕೊಟ್ಟು, ಕ್ವಾಲಿಟಿ ವರ್ಕ್ ಮಾಡಲು ಆಗಲ್ಲ. ಬೆಂಗಳೂರಿನಲ್ಲಿ ಕಳಪೆ ಕಾಮಗಾರಿಗೆ 50 ಪರ್ಸೆಂಟೇಜ್ ಕಾರಣ. ಸಾರ್ವಜನಿಕರು ಕಳಪೆ ಕಾಮಗಾರಿಗೆ ಬಗ್ಗೆ ಟೀಕೆ ಮಾಡುತ್ತಾರೆ. ಆದರೆ ಕಮಿಷನ್ ದಂಧೆಯ ಬಗ್ಗೆ ಯಾರೂ ಕೇಳೋದಿಲ್ಲ. ಪೊಲೀಸರು ತನಿಖೆ ನಡೆಸೋದಾದರೆ 50 ಪರ್ಸೆಂಟೇಜ್ ಬಗ್ಗೆ ಮಾಹಿತಿ ನೀಡುವುದಕ್ಕೆ ನಾನು ಸಿದ್ಧ ಎಂದರು.

ಇದನ್ನೂ ಓದಿ: ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಸಾವು ಪ್ರಕರಣ: ಈಶ್ವರಪ್ಪ ಆರೋಪಿ ನಂ 1, ಎಫ್​ಐಆರ್ ದಾಖಲು

ಗೌತಮ ಬುದ್ಧ ಧ್ಯಾನಕ್ಕೆ ಹೋಗುವ ಮೊದಲು ಕುಡಿದಿದ್ದು ಪಾಯಸ, ಅದನ್ನು ಕೊಟ್ಟಿದ್ದು ಒಬ್ಬ ಹೆಣ್ಣು ಮಗಳು! ಏನು ಅದರ ವೃತ್ತಾಂತ?

ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ