AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ 40%, ಬಿಬಿಎಂಪಿಯಲ್ಲಿ 50% ಕಮಿಷನ್ ನೀಡಬೇಕು; 6 ಗುತ್ತಿಗೆದಾರರ ಆತ್ಮಹತ್ಯೆಯಾಗಿದೆ -ಅಂಬಿಕಾಪತಿ

ಬೆಂಗಳೂರು ನಗರ ವ್ಯಾಪ್ತಿಯ ಪ್ರತಿಯೊಬ್ಬ ಶಾಸಕ, ಸಚಿವರು, ಅಧಿಕಾರಿಗಳಿಗೆ ಕಡ್ಡಾಯವಾಗಿ ಪರ್ಸೆಂಟೇಜ್ ನೀಡಲೇಬೇಕು. ಶೇಕಡಾ 50ರಷ್ಟು ಕಮಿಷನ್ ನೀಡಿದರಷ್ಟೇ ಬಿಲ್‌ಗಳು ಆಗುತ್ತೆ. ಕಮಿಷನ್ ನೀಡದಿದ್ರೆ ಬಿಲ್ ಆಗಲ್ಲವೆಂದು BBMP ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಅಂಬಿಕಾಪತಿ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ 40%, ಬಿಬಿಎಂಪಿಯಲ್ಲಿ 50% ಕಮಿಷನ್ ನೀಡಬೇಕು; 6 ಗುತ್ತಿಗೆದಾರರ ಆತ್ಮಹತ್ಯೆಯಾಗಿದೆ -ಅಂಬಿಕಾಪತಿ
ಬಿಬಿಎಂಪಿ
TV9 Web
| Updated By: ಆಯೇಷಾ ಬಾನು|

Updated on: Apr 13, 2022 | 7:30 AM

Share

ಬೆಂಗಳೂರು: ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬಳಿಕ ಸರ್ಕಾರದಲ್ಲಿನ 40% ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಅಂಬಿಕಾಪತಿ ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ 40% ಕಮಿಷನ್ ನೀಡಬೇಕು. ಹಾಗೂ ಬಿಬಿಎಂಪಿಯಲ್ಲಿ ನಡೆಯುವ ಕಾಮಗಾರಿಗೆ 50% ಕಮಿಷನ್ ನೀಡಬೇಕು ಎಂದು ಅಂಬಿಕಾಪತಿ ಆರೋಪಿಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯ ಪ್ರತಿಯೊಬ್ಬ ಶಾಸಕ, ಸಚಿವರು, ಅಧಿಕಾರಿಗಳಿಗೆ ಕಡ್ಡಾಯವಾಗಿ ಪರ್ಸೆಂಟೇಜ್ ನೀಡಲೇಬೇಕು. ಶೇಕಡಾ 50ರಷ್ಟು ಕಮಿಷನ್ ನೀಡಿದರಷ್ಟೇ ಬಿಲ್‌ಗಳು ಆಗುತ್ತೆ. ಕಮಿಷನ್ ನೀಡದಿದ್ರೆ ಬಿಲ್ ಆಗಲ್ಲವೆಂದು BBMP ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಅಂಬಿಕಾಪತಿ ಪರ್ಸೆಂಟೇಜ್ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ತನಿಖೆ ಮಾಡಿದರೆ ಸೂಕ್ತ ದಾಖಲೆ ನೀಡಲು ನಾನು ಸಿದ್ಧ. ಪೊಲೀಸ್ ಆಯುಕ್ತರಿಗೆ ಎಲ್ಲಾ ದಾಖಲೆಗಳನ್ನು ನೀಡುತ್ತೇನೆ. KS ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆಗೂ ಮುನ್ನ 6 ಗುತ್ತಿಗೆದಾರರ ಆತ್ಮಹತ್ಯೆಯಾಗಿದೆ. BBMP ಸಿವಿಲ್ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟಿವಿ9ಗೆ ಅಂಬಿಕಾಪತಿ ತಿಳಿಸಿದ್ದಾರೆ.

ಬಿಬಿಎಂಪಿಯಲ್ಲಿ 50 ಪರ್ಸೆಂಟೇಜ್ ಕಮಿಷನ್ ದಂಧೆ ಇದೆ ಬಿಬಿಎಂಪಿಯಲ್ಲಿ 50 ಪರ್ಸೆಂಟೇಜ್ ಕಮಿಷನ್ ದಂಧೆ ಇದೆ. 50 ಪರ್ಸೆಂಟೇಜ್ ಕಮಿಷನ್ ಕೊಟ್ಟು, ಕ್ವಾಲಿಟಿ ವರ್ಕ್ ಮಾಡಲು ಆಗಲ್ಲ. ಬೆಂಗಳೂರಿನಲ್ಲಿ ಕಳಪೆ ಕಾಮಗಾರಿಗೆ 50 ಪರ್ಸೆಂಟೇಜ್ ಕಾರಣ. ಸಾರ್ವಜನಿಕರು ಕಳಪೆ ಕಾಮಗಾರಿಗೆ ಬಗ್ಗೆ ಟೀಕೆ ಮಾಡುತ್ತಾರೆ. ಆದರೆ ಕಮಿಷನ್ ದಂಧೆಯ ಬಗ್ಗೆ ಯಾರೂ ಕೇಳೋದಿಲ್ಲ. ಪೊಲೀಸರು ತನಿಖೆ ನಡೆಸೋದಾದರೆ 50 ಪರ್ಸೆಂಟೇಜ್ ಬಗ್ಗೆ ಮಾಹಿತಿ ನೀಡುವುದಕ್ಕೆ ನಾನು ಸಿದ್ಧ ಎಂದರು.

ಇದನ್ನೂ ಓದಿ: ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಸಾವು ಪ್ರಕರಣ: ಈಶ್ವರಪ್ಪ ಆರೋಪಿ ನಂ 1, ಎಫ್​ಐಆರ್ ದಾಖಲು

ಗೌತಮ ಬುದ್ಧ ಧ್ಯಾನಕ್ಕೆ ಹೋಗುವ ಮೊದಲು ಕುಡಿದಿದ್ದು ಪಾಯಸ, ಅದನ್ನು ಕೊಟ್ಟಿದ್ದು ಒಬ್ಬ ಹೆಣ್ಣು ಮಗಳು! ಏನು ಅದರ ವೃತ್ತಾಂತ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ