AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರ ಪ್ರತಿಭಟನೆ, ವಿಷ ಸೇವಿಸಲು ಯತ್ನ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರು ಶಾಂತಿನಗರದ ಟಿಟಿಎಂಸಿ 2ನೇ ಮಹಡಿಯಲ್ಲಿರುವ ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸಂಗಪ್ಪ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬಾಕಿ ಉಳಿಸಿಕೊಂಡಿರುವ 150 ಕೋಟಿ ಹಣವನ್ನು ಕೂಡಲೇ ಬಿಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಪ್ರತಿಭಟನಾ ನಿರತ ಗುತ್ತಿಗೆದಾರರೊಬ್ಬರು ವಿಷ ಸೇವಿಸಲು ಯತ್ನಿಸಿದರು.

ಬೆಂಗಳೂರು: ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರ ಪ್ರತಿಭಟನೆ, ವಿಷ ಸೇವಿಸಲು ಯತ್ನ
ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸಂಗಪ್ಪ ಕಚೇರಿ ಮುಂದೆ ಗುತ್ತಿಗೆದಾರರ ಪ್ರತಿಭಟನೆ
Vinayak Hanamant Gurav
| Updated By: Rakesh Nayak Manchi|

Updated on: Nov 04, 2023 | 2:02 PM

Share

ಬೆಂಗಳೂರು, ನ.4: ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರು ಶಾಂತಿನಗರದ ಟಿಟಿಎಂಸಿ 2ನೇ ಮಹಡಿಯಲ್ಲಿರುವ ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸಂಗಪ್ಪ ಕಚೇರಿ ಮುಂದೆ ಪ್ರತಿಭಟನೆ (Protest) ನಡೆಸಿದರು. ಬಾಕಿ ಉಳಿಸಿಕೊಂಡಿರುವ 150 ಕೋಟಿ ಹಣವನ್ನು ಕೂಡಲೇ ಬಿಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಪ್ರತಿಭಟನಾ ನಿರತ ಗುತ್ತಿಗೆದಾರರೊಬ್ಬರು ವಿಷ ಸೇವಿಸಲು ಯತ್ನಿಸಿದರು.

ಕಿಯೋನಿಕ್ಸ್ ಸಂಸ್ಥೆಯು ಎಂಟು ತಿಂಗಳಿಂದ ಗುತ್ತಿಗೆದಾರರ ಹಣವನ್ನು ಬಾಕಿ (150 ಕೋಟಿ ರೂ.) ಇರಿಸಿದೆ. ಇದರಿಂದಾಗಿ ಕಿಯೋನಿಕ್ಸ್ ನಿರ್ದೇಶಕರ ವಿರುದ್ಧ ಸಿಡಿದೆದ್ದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಗುತ್ತಿಗೆದಾರರು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಬಾಕಿ ಹಣ ಬಿಡುಗಡೆ ಮಾಡಬೇಕು ಮತ್ತು ಟೆಂಡರ್​ ಮುಂದುವರಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ: ಬಾಗಲಕೋಟೆ: ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ

ಅಧಿಕಾರಿಗಳ ಜೊತೆ ಸಚಿವ ಪ್ರಿಯಾಂಕ್ ಖರ್ಗೆ ಸಭೆ

ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ವಿಳಂಬ ಹಿನ್ನೆಲೆ ಸಚಿವ ಪ್ರಿಯಾಂಕಾ ಖರ್ಗೆ ಅವರು ಅಧಿಕಾರಿಗಳ ಜೊತೆ ವಿಕಾಸಸೌಧದಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಕಿಯೋನಿಕ್ಸ್ ಎಂಡಿ ಸಂಗಪ್ಪ ಭಾಗಿಯಾಗಿದ್ದಾರೆ. ಪ್ರತಿಭಟನಾಕಾರರಿಗೆ ಸಭೆ ಮುಗಿಸಿ ಬರುವುದಾಗಿ ಭರವಸೆ ನೀಡಿದ್ದಾರೆ. ಆದರೆ, ಗುತ್ತಿಗೆದಾರರು ಗೋ ಬ್ಯಾಕ್ ಸಂಗಪ್ಪ, ಗೋ ಬ್ಯಾಕ್ ಸಂಗಪ್ಪ ಎಂದು ಧಿಕ್ಕಾರ ಕೂಗಿ ಪ್ರತಿಭಟನೆ ‌ನಡೆಸುತ್ತಿದ್ದಾರೆ.

ವಿಷ ಸೇವಿಸಲು ಯತ್ನ ಗುತ್ತಿಗೆದಾರ

ಬಾಕಿ ಬಿಲ್ ಬಿಡುಗಡೆಗೆ ಒತ್ತಾಯಿಸಿ ಗುತ್ತಿಗೆದಾರರು ವಿಷತ ಬಾಟಲ್ ಸಹಿತ ಸಂಗಪ್ಪ ಕಚೇರಿ ಮುಂದೆ ಆಗಮಿಸಿದ್ದಾರೆ. ನಮ್ಮ ಬೇಡಿಕೆ ಈಡೇರದೇ ಹೋದರೆ ಎಂಡಿ ಸಂಗಪ್ಪನ ಮುಂದೆ ವಿಷ ಕುಡಿಯುವುದಾಗಿ ಎಚ್ಚರಿಕೆ ನೀಡಿದ ಸೈಯದ್, ವಿಷ ಕುಡಿಯಲು ಯತ್ನಿಸಿದರು ಕೂಡಲೇ ಎಚ್ಚೆತ್ತ ಇತರೆ ಗುತ್ತಿಗೆದಾರರು ತಡೆದರು. ಸಂಗಪ್ಪ ಬರುವವರೆಗೆ ಯಾವುದೇ ನಿರ್ಣಯ ಕೈಗೊಳ್ಳುವುದು ಬೇಡ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ