AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಂಭೀರ ಗಾಯ, ಓರ್ವನ ಸ್ಥಿತಿ ಚಿಂತಾಜನಕ

ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಬಿಹಾರ ಮೂಲದ ಗೌತಮ್​, ಮಂಡಿಲ್, ಮಹಿಳೆ ಸೋನಿ ಎಂಬುವರಿಗೆ ಗಾಯವಾಗಿದೆ.

ಬೆಂಗಳೂರಿನಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಂಭೀರ ಗಾಯ, ಓರ್ವನ ಸ್ಥಿತಿ ಚಿಂತಾಜನಕ
ಸಿಲಿಂಡರ್ ಸ್ಪೋಟ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 03, 2022 | 10:43 AM

Share

ಬೆಂಗಳೂರು: ಅಡುಗೆ ಗ್ಯಾಸ್ ಸಿಲಿಂಡರ್ (gas cylinder)​ ಲೀಕ್ ಆಗಿ ಸ್ಪೋಟಗೊಂಡು ಇಬ್ಬರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವಂತಹ ಘಟನೆ ಕೆಎಸ್ ಲೇಔಟ್ ಠಾಣಾ ವ್ಯಾಪ್ತಿಯ ಯಲಚೇನಹಳ್ಳಿ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಬಿಹಾರ ಮೂಲದ ಗೌತಮ್​, ಮಂಡಿಲ್, ಮಹಿಳೆ ಸೋನಿ ಎಂಬುವರಿಗೆ ಗಾಯವಾಗಿದೆ. ಇಬ್ಬರು ಸೆಕ್ಯೂರಿಟಿ ಕೆಲಸ ಮಾಡ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೆಎಸ್ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದರು.

ಸುಲಿಗೆ ಮಾಡುತ್ತಿದ್ದ ಇಬ್ಬರ ಬಂಧನ

ವಿಜಯನಗರ: ಬೈಕ್​ ಅಡ್ಡಗಟ್ಟು ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜಗಳೂರು ತಾಲೂಕಿನ ಬಿಳಿಚೋಡು ಪೊಲೀಸರು ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್​(32), ಮನೋಜ್​(40) ಬಂಧಿತ ಆರೋಪಿಗಳು. ಬಂಧಿತ ಇಬ್ಬರು ಆರೋಪಿಗಳಿಂದ 50 ಗ್ರಾಂ ಚಿನ್ನಾಭರಣ ಪೊಲೀಸರ ವಶಕ್ಕೆ ಪಡೆಯಲಾಗಿದೆ. ಕೂಡ್ಲಗಿ ತಾಲೂಕಿನ ರಮೇಶ್-ಸುಷ್ಮಾ ದಂಪತಿ ಬೈಕ್​​ನಲ್ಲಿ‌ ಹೋಗುತ್ತಿದ್ದಾಗ ಆರೋಪಿಗಳು ಚಿನ್ನ ದೋಚಿದ್ದರು.

ಇದನ್ನೂ ಓದಿ: ಅನುಮಾನಸ್ಪದ ಸಾವು ಪ್ರಕರಣ: ಆಕೆ ಬೇರೊಬ್ಬನೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಯುವಕನಿಂದ ಕೊಲೆ

ಈಜಲು ಹೋಗಿ ‌ಹೊಂಡದಲ್ಲಿ ಮುಳುಗಿ ಯುವಕ ಸಾವು

ದಾವಣಗೆರೆ: ಈಜಲು ಹೋಗಿ ‌ಹೊಂಡದಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವಂತಹ ಘಟನೆ ನಗರದ ರಾಜಾ ಮದಕರಿ‌ನಾಯಕ ವೃತ್ತದಲ್ಲಿ ನಡೆದಿದೆ. ಶಂಕರ (17) ಸಾವನ್ನಪ್ಪಿದ ಯುವಕ. ದಾವಣಗೆರೆ ಎಪಿಎಂಸಿಯಲ್ಲಿ‌ಹಮಾಲಿ ಆಗಿರುವ ಅಂಜಿನಪ್ಪ ಎಂಬುವರ ಪುತ್ರ. ಬಸವನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಮೊಬೈಲ್, ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರ ಬಂಧನ

ಕಲಬುರಗಿ: ನಗರದಲ್ಲಿ ಮೊಬೈಲ್, ಬೈಕ್​ಗಳನ್ನು​ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಹಾತ್ಮ ಬಸವೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಸತ್ಯವೇಲು, ಕಲಬುರಗಿಯ ಖಾಜಾ ಕಾಲೋನಿ ನಿವಾಸಿ ಮೊಹಮ್ಮದ್ ಅಸ್ಪಾಕ್ ಬಂಧಿತರು. ಆರೋಪಿಗಳಿಂದ 17 ಮೊಬೈಲ್​ಗಳು, 8 ಬೈಕ್​ಗಳು ಜಪ್ತಿ ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:37 am, Sat, 3 September 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ