AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೂಲ್ ವೆದರ್: ಪುಟಾಣಿಗಳಲ್ಲಿ ಶುರುವಾಯ್ತು ಸಾಂಕ್ರಾಮಿಕ ರೋಗಗಳ ಆತಂಕ

ಬೆಂಗಳೂರಿನಲ್ಲಿ ಒಂದು ವಾರ ಮಳೆ, ಮತ್ತೊಂದು ವಾರ ಚಳಿ ವಾತವರಣ ಜನರನ್ನು ಹೈರಾಣಾಗಿಸಿದೆ. ಕಳೆದ ಒಂದು ವಾರದಿಂದ ಚಳಿಯ ವಾತಾವರಣ ಕಂಡು ಬರುತ್ತಿದೆ. ಅಗಾಗ ಬಿಸಲು ಕೂಡ ಬರುತ್ತಿದ್ದು, ಬದಲಾಗುತ್ತಿರುವ ಹವಾಮಾನದಿಂದ ಜನರು ಹೈರಾಣಾಗುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳ ಜೊತೆ ವೈರಾಣು ಜ್ವರ ಪ್ರಕರಣ ಹೆಚ್ಚಾಗಿದ್ದು, ಅದರಲ್ಲೂ ಪುಟಾಣಿ ಮಕ್ಕಳು ಪರದಾಡುವಂತಾಗಿದೆ.

ಬೆಂಗಳೂರಿನಲ್ಲಿ ಕೂಲ್ ವೆದರ್: ಪುಟಾಣಿಗಳಲ್ಲಿ ಶುರುವಾಯ್ತು ಸಾಂಕ್ರಾಮಿಕ ರೋಗಗಳ ಆತಂಕ
ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ
Vinay Kashappanavar
| Edited By: |

Updated on: Aug 23, 2025 | 6:44 PM

Share

ಬೆಂಗಳೂರು, ಆಗಸ್ಟ್ 23: ಬೆಂಗಳೂರಿನಲ್ಲಿ ಮಳೆ ಜೊತೆ ಥಂಡಿಯ ವಾತಾವರಣ ಕಂಡುಬರುತ್ತಿದೆ. ಕಳೆದೊಂದು ವಾರದಿಂದ ಬಿಟ್ಟು ಬಿಟ್ಟು ಮಳೆ ಹಾಗೂ ಚಳಿಯ ವಾತವರಣ ಇದ್ದು, ಮಕ್ಕಳಲ್ಲಿ ವೈರಾಣು ಜ್ವರದ ಕೇಸ್ ಉಲ್ಬಣವಾಗಿವೆ. ನೆಗಡಿ ಕೆಮ್ಮು, ಶೀತದ ಸಮಸ್ಯೆ ಕಂಡುಬರುತ್ತಿದ್ದು ಮಕ್ಕಳನ್ನು ಹೈರಾಣು ಮಾಡುತ್ತಿದೆ. ಕಳೆದ ಹದಿನೈದು ದಿನಗಳಲ್ಲಿ ಶೇ 15 ರಿಂದ 20 ರಷ್ಟು ಜ್ವರ ಪ್ರಕರಣಗಳು ಹೆಚ್ಚಾಗಿವೆ. ಮಕ್ಕಳಲ್ಲಿ ಜ್ವರ, ಕೆಮ್ಮು, ಗಂಟಲು ನೋವು, ಕೆಮ್ಮು, ಶೀತ, ನೆಗಡಿ ವಾಂತಿ ಪ್ರಕರಣಗಳು ಹೆಚ್ಚಾಗಿದೆ. ಬದಲಾದ ವಾತವರಣ ಹಿನ್ನಲೆ ಡೆಂಘಿ ಟೈಫಾಯ್ಡ್​, ವೈರಲ್ ಜ್ವರ ಕೂಡಾ ಕಾಣಿಸಿಕೊಳ್ಳುತ್ತಿದೆ.

ವೈರಾಣು ಜ್ವರ ಹಾಗೂ ಅಪ್ಪರ್ ರೆಸ್ಪರೇಟರಿ, ನ್ಯೂಮೋನಿಯಾ ಪ್ರಕರಣಗಳು ಪುಟಾಣಿ ಮಕ್ಕಳ ಜೀವ ಹಿಂಡುತಿವೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ವೈರಾಣು ಜ್ವರ ಶೇ 20 ರಷ್ಟು ಏರಿಕೆ ಕಂಡಿದೆ. ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಪ್ರತಿನಿತ್ಯ 550 ರಿಂದ 600 ಹೊರ ರೋಗಿಗಳು ಚಿಕಿತ್ಸಗೆ ಬರುತ್ತಿದ್ದಾರೆ. ಈ ಪೈಕಿ ಶೇ 30 ರಷ್ಟು ಮಕ್ಕಳಲ್ಲಿ ವೈರಾಣು ಜ್ವರ ಕಂಡು ಬರುತ್ತಿದೆ. ಜತೆಗೆ ಕೆಸಿ ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ವಾಣಿವಿಲಾಸ್ ಆಸ್ಪತ್ರೆ ಸೇರಿದ್ದಂತೆ ಬಹುತೇಕ ಆಸ್ಪತ್ರೆಗಳಲ್ಲಿ ದಾಖಲಾಗುವ ಅರ್ದದಷ್ಟು ಹೊರ ರೋಗಿಗಳ ವಿಭಾಗದಲ್ಲಿ ವೈರಾಣು ಜ್ವರ ಕಂಡು ಬರ್ತಿದೆ.

ಮನೆಗಳಲ್ಲಿ ಮಕ್ಕಳಿಂದ ಮನೆ ಮಂದಿಗೆಲ್ಲ ಈ ವೈರಾಣು ಸೋಂಕು ಹರಡುತಿದ್ದು, ಎಚ್ಚರಿಕೆ ವಹಿಸುವಂತೆ ವೈದ್ಯರು ಸೂಚಸಿದ್ದಾರೆ. ಅದರಲ್ಲೂ ಚಿಣ್ಣರಲ್ಲಿ ಕಂಡು ಬರುತ್ತಿರುವ ಸೋಂಕಿನ ಬಗ್ಗೆ ಹೆಚ್ಚು ನಿಗಾವಹಿಸುವಂತೆ ಪೋಷಕರಿಗೆ ಸಲಹೆ ನೀಡಿದ್ದಾರೆ.

ಮಕ್ಕಳಲ್ಲಿ ವೈರಾಣು ಜ್ವರ, ಕೆಮ್ಮು, ನೆಗಡಿ, ಅತಿಸಾರ ವಾಂತಿ, ಬೇಧಿ ಪ್ರಕರಣಹಳು ಹೆಚ್ಚಾಗಲು ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಮಾನ ಕಾರಣ ಎಂದು ವೈದ್ಯರು ಹೇಳಿದ್ದಾರೆ. ವೈರಾಣು ಜ್ವರದ ಜೊತೆ ಡೆಂಘಿ ಕೇಸ್ ಕೂಡಾ ವರದಿಯಾಗುತ್ತಿವೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ, ಕೆಸಿ ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಸಿವಿ ರಾಮನ್ ನಗರ ಆಸ್ಪತ್ರೆ, ವಾಣಿವಿಲಾಸ್ ಆಸ್ಪತ್ರೆ ಸೇರಿದ್ದಂತೆ ಬಹುತೇಕ ಆಸ್ಪತ್ರೆಗಳಲ್ಲಿ ದಾಖಲಾಗುವ ಅರ್ದದಷ್ಟು ಹೊರ ರೋಗಿಗಳ ವಿಭಾಗದಲ್ಲಿಯೂ ವೈರಾಣು ಜ್ವರ ಕಂಡು ಬರ್ತಿದೆ. ಹೀಗಾಗಿ ಆರೋಗ್ಯದ ಬಗ್ಗೆ ಜನರು ಕೊಂಚ ಎಚ್ಚರ ವಹಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ವಾತಾವರಣದಿಂದ ಮಕ್ಕಳಲ್ಲಿ ಕಂಡು ಬರುತ್ತಿರುವ ಆರೋಗ್ಯ ಸಮಸ್ಯೆಗಳು ಯಾವುವು?

  • ವೈರಾಣು ಜ್ವರ
  • ನೆಗಡಿ
  • ತೀವ್ರ ಜ್ವರ
  • ಉಸಿರಾಟದ ಸಮಸ್ಯೆ
  • ನೆಗಡಿ ಕೆಮ್ಮು
  • ತೀವ್ರವಾದ ಸುಸ್ತು
  • ಮೈಕೈ ನೋವು
  • ತಲೆ ಸಿಡಿತ, ಚಳಿ ಜ್ವರ
  • ಕೆಲವರಲ್ಲಿ ಶೀತ ಜ್ವರ ಕಂಡು ಬರುತ್ತದೆ

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್ ಕುಡಿಯುತ್ತಿದ್ದೀರಾ? ಹಾಗಿದ್ದರೆ ಈ ಮಾಹಿತಿ ನಿಮಗಾಗಿ

ಒಟ್ಟಿನಲ್ಲಿ ಮಳೆ, ಚಳಿಯಾದ ವಾತವರಣ ಹಿನ್ನಲೆ ಜನರು ಸ್ವಚ್ಛತೆ ಕಾಪಾಡುವುದು ಮತ್ತು ಬಿಸಿ ನೀರು ಕುಡಿಯುವುದು, ಆರೋಗ್ಯಕರ ಆಹಾರ ಸೇವನೆ ಮಾಡಬೇಕಾದ ಅಗತ್ಯ ಇದೆ ಎಂಬ ಸಲಹೆಯನ್ನು ವೈದ್ಯರು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Kashappanavar
Vinay Kashappanavar
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?