Corona 3rd Wave: ಬೆಂಗಳೂರಿನಲ್ಲಿ ಕೊರೊನಾ 3ನೇ ಅಲೆ ಶುರು, 10 ದಿನಗಳಲ್ಲಿ 505 ಮಕ್ಕಳಲ್ಲಿ ಸೋಂಕು ಪತ್ತೆ

ಆಗಸ್ಟ್ 1 ರಿಂದ 10ರ ತನಕ ಹತ್ತು ದಿನಗಳ ಅವಧಿಯಲ್ಲಿ 246 ಹೆಣ್ಣು ಮಕ್ಕಳು, 259 ಗಂಡು ಮಕ್ಕಳಲ್ಲಿ ಸೋಂಕು ಧೃಡಪಟ್ಟಿದೆ. ಒಟ್ಟಾರೆ 505 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.

Follow us
| Updated By: ಆಯೇಷಾ ಬಾನು

Updated on: Aug 12, 2021 | 9:43 AM

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಮೂರನೇ ಅಲೆ ಭೀತಿ ಶುರುವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚು ಸೋಂಕು ಪತ್ತೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಹೆಚ್ಚಾಗಿ ಮಕ್ಕಳಲ್ಲಿಯೇ ಹೆಚ್ಚು ಸೋಂಕು ಪತ್ತೆಯಾಗಿದೆ. ಕೊರೊನಾ ಮೂರನೇ ಅಲೆ ಭೀತಿ ನಡುವೆ ಈ ರೀತಿ ನಗರದ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದ್ದ ಮೂರನೇ ಅಲೆ ಈಗಾಗಲೇ ರಾಜ್ಯಕ್ಕೆ ಕಾಲಿಟ್ಟಿದೆ ಎಂಬ ಆತಂಕ ಹೆಚ್ಚಿದೆ.

ಆಗಸ್ಟ್ 1 ರಿಂದ 10ರ ತನಕ ಹತ್ತು ದಿನಗಳ ಅವಧಿಯಲ್ಲಿ 246 ಹೆಣ್ಣು ಮಕ್ಕಳು, 259 ಗಂಡು ಮಕ್ಕಳಲ್ಲಿ ಸೋಂಕು ಧೃಡಪಟ್ಟಿದೆ. ಒಟ್ಟಾರೆ 505 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.

ದಿನವಾರು ಮಕ್ಕಳಲ್ಲಿ ಸೋಂಕು‌ ಪತ್ತೆ ವಿವರ ದಿನಾಂಕ : ಹೆಣ್ಣುಮಕ್ಕಳು : ಗಂಡುಮಕ್ಕಳು: ಒಟ್ಟು ಸೋಂಕು ಆಗಸ್ಟ್ 01 – 22+ 35 = 57 ಆಗಸ್ಟ್ 02 – 13 + 17 = 30 ಆಗಸ್ಟ್ 03 – 26+ 30 = 56 ಆಗಸ್ಟ್ 04 – 37+ 24 = 61 ಆಗಸ್ಟ್ 05 – 25+ 34 = 59 ಆಗಸ್ಟ್ 06 – 34 + 33 = 67 ಆಗಸ್ಟ್ 07 – 30 + 20 = 50 ಆಗಸ್ಟ್ 08 – 20 + 18 = 38 ಆಗಸ್ಟ್ 09 – 19 + 23 = 42 ಆಗಸ್ಟ್ 10 – 20 + 25 = 45

3ನೇ ಅಲೆ ಆತಂಕದ ಮಧ್ಯೆ ಮಕ್ಕಳಿಗೆ ಸೋಂಕು ಪತ್ತೆಯಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಕಾಲೇಜು ವಿದ್ಯಾರ್ಥಿಗಳಲ್ಲೂ ಕೊರೊನಾ ಲಕ್ಷಣಗಳು ಪತ್ತೆಯಾಗಿವೆ. ಇಂಥ ಸಮಯದಲ್ಲಿ ಶಾಲೆ ಆರಂಭ ಬೇಡವೆಂದು ತಜ್ಞರು ಸಲಹೆ ನೀಡಿದ್ದಾರೆ. ಆದಷ್ಟು ಬೇಗ ಸರ್ಕಾರ ಈ ಬಗ್ಗೆ ಗಮನ ಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ: Corona 3rd Wave: ಬೆಂಗಳೂರಿನಲ್ಲಿ ಶುರುವಾಯ್ತು ಕೊರೊನಾ 3ನೇ ಅಲೆ ಭೀತಿ, ದಿನಕ್ಕೆ 50-60 ಪಾಸಿಟಿವ್ ಮಕ್ಕಳು ಪತ್ತೆ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!