AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗ್ತಿದೆ, ದಿನಕ್ಕೆ 20-22 ಶವ ಬರ್ತಿದೆ ಎಂದ ಚಿತಾಗಾರ ಸಿಬ್ಬಂದಿ

ಕೊರೊನಾ ಎರಡನೇ ಅಲೆ ರಣಭೀಕರ ರೂಪ ತಾಳಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಜೋರು ಮಾಡಿದೆ. ಇದರ ಪರಿಣಾಮ ಸಾವಿನ ಸಂಖ್ಯೆ ದಿಪ್ಪಟ್ಟಾಗಿದೆ. ಈ ಮೊದಲು 4ರಿಂದ 5 ಶವಗಳು ಬರ್ತಿತ್ತು. ಆದ್ರೆ ಕಳೆದ ಒಂದು ವಾರದಿಂದ ದಿನಕ್ಕೆ 20-22 ಶವಗಳು ಬರ್ತಿವೆ ಎಂದು ಟಿವಿ9ಗೆ ಸುಮನಹಳ್ಳಿ ಚಿತಾಗಾರದ ಸಿಬ್ಬಂದಿ ರವಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗ್ತಿದೆ, ದಿನಕ್ಕೆ 20-22 ಶವ ಬರ್ತಿದೆ ಎಂದ ಚಿತಾಗಾರ ಸಿಬ್ಬಂದಿ
ಸಂಗ್ರಹ ಚಿತ್ರ
ಆಯೇಷಾ ಬಾನು
| Edited By: |

Updated on: Apr 16, 2021 | 9:36 AM

Share

ಬೆಂಗಳೂರು: ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯ ಜೊತೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಪ್ರತಿದಿನ 4-5 ಕೊರೊನಾ ಸೋಂಕಿತರ ಶವ ಬರ್ತಿತ್ತು. ಆದ್ರೆ ಕಳೆದ ಒಂದು ವಾರದಿಂದ ಶವಗಳ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ 20-22 ಕೊವಿಡ್‌ನಿಂದ ಮೃತಪಟ್ಟವರ ಶವಗಳು ಬರ್ತಿವೆ ಎಂಬ ಭಯಾನಕ ಸುದ್ದಿ ಹೊರ ಬಿದ್ದಿದೆ.

ಕೊರೊನಾ ಎರಡನೇ ಅಲೆ ರಣಭೀಕರ ರೂಪ ತಾಳಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಜೋರು ಮಾಡಿದೆ. ಇದರ ಪರಿಣಾಮ ಸಾವಿನ ಸಂಖ್ಯೆ ದುಪ್ಪಟ್ಟಾಗಿದೆ. ಅದರಲ್ಲೂ ರಾಜ್ಯದ ಒಟ್ಟು ಕೊರೊನಾ ಕೇಸ್​ನಲ್ಲಿ, ಸಾವಿನಲ್ಲಿ ಬೆಂಗಳೂರಿನದ್ದೇ ಸಿಂಹಪಾಲು. ಈ ಮೊದಲು 4ರಿಂದ 5 ಶವಗಳು ಬರ್ತಿತ್ತು. ಆದ್ರೆ ಕಳೆದ ಒಂದು ವಾರದಿಂದ ದಿನಕ್ಕೆ 20-22 ಶವಗಳು ಬರ್ತಿವೆ ಎಂದು ಟಿವಿ9ಗೆ ಸುಮನಹಳ್ಳಿ ಚಿತಾಗಾರದ ಸಿಬ್ಬಂದಿ ರವಿ ತಿಳಿಸಿದ್ದಾರೆ. ಚಿತಾಗಾರದ ಮುಂದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಲ್ಲಬೇಕಾದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡನೇ ಅಲೆಯ ಕೊರೊನಾ ಜೀವ ಹಿಂಡುತ್ತಿದೆ.

ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಯಲಹಂಕದ ಮೇಡಿ ಅಗ್ರಹಾರದಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಸುಮನಹಳ್ಳಿ ಚಿತಾಗಾರದಲ್ಲೂ ಅಂತ್ಯಕ್ರಿಯೆಗೆ ಕಾಯುವ ಸ್ಥಿತಿ ಎದುರಾಗಿದೆ. ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಚಿತಾಗಾರದ ಸಿಬ್ಬಂದಿ ರವಿ ಬೆಂಗಳೂರಿನಲ್ಲಿ 10 ದಿನದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇದರ ಜೊತೆಗೆ ಚಿತಾಗಾರಗಳಲ್ಲಿ ನಮಗೆ ಯಾವುದೇ ಸುರಕ್ಷತೆ ಇಲ್ಲ ಎಂದು ಅಳಲು ತೋಡಿಕೊಂಡಿದ್ದರು.

ಇನ್ನು ಬೆಳಗ್ಗೆ 4 ಗಂಟೆಗೆ ಸುಮನಹಳ್ಳಿ ಚಿತಾಗಾರಕ್ಕೆ ಕೊವಿಡ್ ಸೋಂಕಿತನ ಶವವನ್ನು ಆ್ಯಂಬುಲೆನ್ಸ್ ಸಿಬ್ಬಂದಿ ತಂದಿದ್ದರು. ಮೃತ ವ್ಯಕ್ತಿಯ ಸಂಬಂಧಿಕರು ಯಾರೂ ಬಾರದ ಕಾರಣ ಅಂತ್ಯಕ್ರಿಯೆ ಆಗದೆ ಮೃತದೇಹ ಇರಿಸಲಾಗಿದೆ. ಕುಟುಂಬಸ್ಥರು ಬರುವುದನ್ನು ಕಾದು ‌ಬೆಳಗ್ಗೆ 9 ಗಂಟೆಯ ಬಳಿಕ ಮೃತದೇಹದ ಅಂತ್ಯಕ್ರಿಯೆ ನಡೆಸಲು ಚಿಂತಿಸಲಾಗಿದೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತಪಟ್ಟವರನ್ನು ಚಿತಾಗಾರಕ್ಕೆ ಸಾಗಿಸಲು ಯಾವುದೇ ಶುಲ್ಕ ಇಲ್ಲ: ಬಿಬಿಎಂಪಿ ಸ್ಪಷ್ಟನೆ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ