Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಕೊರೊನಾ ಹೆಚ್ಚಳ; ಬೆಂಗಳೂರಿನಿಂದ ಅಯ್ಯಪ್ಪ ದರ್ಶನಕ್ಕೆ ತೆರಳಿರುವ ಭಕ್ತರಿಗೆ ಶಾಕ್ ಕೊಡುತ್ತಾ ಬಿಬಿಎಂಪಿ?

ಕೇರಳದಲ್ಲಿ ಕೊರೊನಾ(Corona) ಹೆಚ್ಚಳವಾಗಿದೆ. ಈ ಮಧ್ಯೆ ಬೆಂಗಳೂರಿ(Bengaluru)ನಿಂದ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತರು ಕೇರಳಕ್ಕೆ ಹೋಗಿದ್ದು, ಪಾಲಿಕೆಗೆ ಟೆನ್ಷನ್ ಆಗಿ ಪರಿಣಮಿಸಿದೆ. ಈ ಹಿನ್ನಲೆ ದರ್ಶನದ ಬಳಿಕ ವಾಪಾಸ್​ ಬಂದವರಿಗೆ ಸ್ಕ್ರೀನಿಂಗ್ ಮಾಡಿಸುವ ಬಗ್ಗೆ ಪಾಲಿಕೆಯಲ್ಲಿ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಯುತ್ತಿದೆ.

ಕೇರಳದಲ್ಲಿ ಕೊರೊನಾ ಹೆಚ್ಚಳ; ಬೆಂಗಳೂರಿನಿಂದ ಅಯ್ಯಪ್ಪ ದರ್ಶನಕ್ಕೆ ತೆರಳಿರುವ ಭಕ್ತರಿಗೆ ಶಾಕ್ ಕೊಡುತ್ತಾ ಬಿಬಿಎಂಪಿ?
ಬಿಬಿಎಂಪಿ, ಅಯ್ಯಪ್ಪ ಭಕ್ತರು
Follow us
Vinayak Hanamant Gurav
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 19, 2023 | 2:47 PM

ಬೆಂಗಳೂರು, ಡಿ.19: ಕೇರಳದಲ್ಲಿ ಕೊರೊನಾ(Corona) ಹೆಚ್ಚಳವಾಗಿದೆ. ಈ ಮಧ್ಯೆ ಬೆಂಗಳೂರಿ(Bengaluru)ನಿಂದ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತರು ಕೇರಳಕ್ಕೆ ಹೋಗಿದ್ದು, ಪಾಲಿಕೆಗೆ ಟೆನ್ಷನ್ ಆಗಿ ಪರಿಣಮಿಸಿದೆ. ಈ ಕುರಿತು ಮಾತನಾಡಿದ ಬಿಬಿಎಂಪಿ(BBMP)ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರೆಡ್ಡಿ ಶಂಕರ್ ಬಾಬು ‘ಅಯ್ಯಪ್ಪ ದರ್ಶನದ ಬಳಿಕ ವಾಪಾಸ್ ಆಗುವ ಭಕ್ತಾದಿಗಳಿಗೆ ಸ್ಕ್ರೀನಿಂಗ್ ಮಾಡಿಸುವ ಬಗ್ಗೆ ಪಾಲಿಕೆಯಲ್ಲಿ ಅಧಿಕಾರಿಗಳ ಚರ್ಚೆ ನಡೆಯುತ್ತಿದೆ. ಆದರೆ, ನಾಳಿ(ಡಿ.20)ನ ಕೇಂದ್ರ ಆರೋಗ್ಯ ಇಲಾಖೆಯ ಸಭೆ ಬಳಿಕ ಬರುವ ಮಾರ್ಗಸೂಚಿಗೆ ಬಿಬಿಎಂಪಿ ಕಾಯುತ್ತಿದೆ ಎಂದರು.

ಕೇಂದ್ರ ಸರ್ಕಾರದ ನಿರ್ಧಾರವೂ ಬಂದ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸದ್ಯಕ್ಕೆ ಬೆಂಗಳೂರಲ್ಲಿ ಕೋವಿಡ್ ಪ್ಯಾ‌ನಿಕ್ ಪರಿಸ್ಥಿತಿ ಇಲ್ಲ. ಜನ ಹೆದರುವುದು ಬೇಡ, ಕೇಸ್ ಕಡಿಮೆ ಇದೆ. ಆದರೂ ಮುನ್ನೆಚ್ಚರಿಕೆ ಅಗತ್ಯವಿದ್ದು, ರಾಜ್ಯ ಸರ್ಕಾರ ಮತ್ತು ಕೇಂದ್ರದ ಗೈಡ್ ಲೈನ್ಸ್ ಪ್ರಕಾರ ಕ್ರಮಗಳನ್ನ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್​ ನಡೆಸಲು ಆರೋಗ್ಯ ಇಲಾಖೆ ಸೂಚನೆ ನೀಡಿದ್ದು, ಇದರ ಜೊತೆಗೆ ಕೊವೀಡ್ ತುರ್ತು ಪರಿಸ್ಥಿತಿ ನಿಭಾಯಿಸಲು ಇಲಾಖೆಯು ವ್ಯವಸ್ಥೆ ಮಾಡಿಕೊಂಡಿದೆ. ಅದರಂತೆ ಆರೋಗ್ಯ ಸೌಲಭ್ಯಗಳ ಲಭ್ಯತೆ, ಹಾಸಿಗೆಗಳ ಸಾಮರ್ಥ್ಯ, ವೈದ್ಯರು, ದಾದಿಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮಾನವ ಸಂಪನ್ಮೂಲಗಳ ಲಭ್ಯತೆ. ತಾಂತ್ರಿಕ ಮತ್ತು ಅಕ್ಸಿಜನ್ ಬೆಂಬಲ ಸೌಲಭ್ಯಗಳೊಂದಿಗೆ ಆಂಬ್ಯುಲೆನ್ಸ್ ಸೇವೆ. ಪರೀಕ್ಷಾ ಸಾಮರ್ಥ್ಯ ಮತ್ತು ವೈದ್ಯಕೀಯ ಆಮ್ಲಜನಕದ ಲಭ್ಯತೆಯ ಪರಿಶೀಲನೆ, ಆರೋಗ್ಯ ಇಲಾಖೆ ರಾಜ್ಯಾದ್ಯಂತ ಸ್ಥಾಪಿಸಲಾಗಿರುವ ಆಕ್ಸಿಜನ್‌ ಪ್ಲಾಂಟ್‌, ಆಕ್ಸಿಜನ್‌ ಜನರೇಟರ್‌ ಪರೀಶೀಲನೆಯ ಜೊತೆಗೆ ಕೋವಿಡ್‌ ಉಪಕರಣಗಳು, ಸಿಬ್ಬಂದಿ ಹಾಗೂ ವ್ಯವಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Tue, 19 December 23

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ