ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಆತಂಕ! ಎರಡು ಶಾಲೆಯ 31 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ವಿದ್ಯಾರ್ಥಿಗಳಿಗೆ ಜೂನ್ 9ರಂದು ಸೋಂಕು ದೃಢಪಟ್ಟಿದೆ. ಮಕ್ಕಳಿಗೆ ಕೊರೊನಾ ತಗುಲಿರುವ ಕಾರಣ 2 ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಆತಂಕ! ಎರಡು ಶಾಲೆಯ 31 ವಿದ್ಯಾರ್ಥಿಗಳಿಗೆ ಕೊರೊನಾ ದೃಢ
ಶಾಲೆಗಳಲ್ಲಿ ಸ್ಯಾನಿಟೈಸ್ ಹಿಂಪಡಿಸುತ್ತಿದ್ದಾರೆ
Follow us
| Updated By: sandhya thejappa

Updated on:Jun 14, 2022 | 11:36 AM

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಾಲ್ಕನೇ ಅಲೆ ಆತಂಕ ಶುರುವಾಗಿದೆ. ದಾಸರಹಳ್ಳಿ ವಲಯದ 2 ಶಾಲೆಗಳಲ್ಲಿ (Schools) ಸುಮಾರು 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ. ಪೀಣ್ಯ 2ನೇ ಹಂತದಲ್ಲಿರುವ ಖಾಸಗಿ ಶಾಲೆಯಲ್ಲಿ 6ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಮತ್ತು ರಾಜಗೋಪಾಲನಗರದ ಖಾಸಗಿ ಶಾಲೆಯ 4 ಮತ್ತು 5ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.

ವಿದ್ಯಾರ್ಥಿಗಳಿಗೆ ಜೂನ್ 9ರಂದು ಸೋಂಕು ದೃಢಪಟ್ಟಿದೆ. ಮಕ್ಕಳಿಗೆ ಕೊರೊನಾ ತಗುಲಿರುವ ಕಾರಣ 2 ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಮಕ್ಕಳಿಗೆ ಕೊರೊನಾ ತಗುಲಿದ ಹಿನ್ನೆಲೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಮಕ್ಕಳಲ್ಲಿ ಕೊವಿಡ್ ಬಂದ ತಕ್ಷಣ ಏನು ಆಗುವುದಿಲ್ಲ. ಕಳೆದ 2-3 ತಿಂಗಳಿಂದ ಶಾಲೆಗಳಲ್ಲಿ ಗಮನಿಸುತ್ತಿದ್ದೇವೆ. 15 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಆಗಿದ್ಯಾ ಪರಿಶೀಲನೆ ಆಗಿದೆಯಾ ಅನ್ನೋದನ್ನು ಪರಿಶೀಲನೆ ಮಾಡುತ್ತೇವೆ. ಸೋಂಕು ಕಾಣಿಸಿಕೊಂಡ ಮಕ್ಕಳ ಕ್ಲಾಸ್ ಸಸ್ಪೆಂಡ್ ಮಾಡುತ್ತೇವೆ. ಯಾರೂ ಆತಂಕಕ್ಕೆ ಒಳಗಾಗಬಾರದು. ಇದೆಲ್ಲವೂ ಒಮಿಕ್ರಾನ್ ಪ್ರಭೇದವೇ ಆಗಿದೆ. ನಮ್ಮಲ್ಲಿ BA4 ತರಹದ ತಳಿ ಪತ್ತೆಯಾಗಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ
Image
Family Conflict: ಮಕ್ಕಳ ಮುಂದೆ ಜಗಳವಾಡುವುದು ಕಡಿಮೆ ಮಾಡಿ ಮಾನಸಿಕ ಆರೋಗ್ಯ ಕಾಪಾಡಿ
Image
Fussy Eater: ಊಟ ಮಾಡುವಾಗ ಮಕ್ಕಳು ಹಠ ಮಾಡುತ್ತಾರೆ ಏಕೆ?
Image
White Hair: ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಇಲ್ಲಿವೆ ಮನೆಮದ್ದುಗಳು
Image
Skincare Tips: ನಿಮ್ಮದು ಆಯಿಲಿ ಚರ್ಮವೇ, ಈ ಮನೆಮದ್ದುಗಳನ್ನು ಟ್ರೈ ಮಾಡಿ

ಇದನ್ನೂ ಓದಿ: ಕಬಿನಿ ದಮ್ಮನಕಟ್ಟೆ ವನ್ಯಜೀವಿಧಾಮದಲ್ಲಿ ಸಫಾರಿಗೆ ಹೋದ ಹುಲುಮಾನವರಿಗೆ ಹುಲಿ ಕುಟುಂಬದ ದರ್ಶನ!

ಸದ್ಯಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಶಾಲಾ ಸಿಬ್ಬಂದಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ. ಸದ್ಯ ಶಾಲೆಗಳನ್ನ ಕಂಟೈನ್ಮೆಂಟ್ ಅಂತಾ ಘೋಷಣೆ ಮಾಡಲಾಗಿದೆ. ಪಾಸಿಟಿವ್ ಆಗಿರುವ ಮಕ್ಕಳು ಎಲ್ಲರೂ ಕೂಡ ಆರಾಮಾಗಿ ಇದ್ದಾರೆ, ಆತಂಕ ಪಡುವಂತಹದಿಲ್ಲ ಎಂದು ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಹೇಳಿದರು.

ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ: ನಿನ್ನೆ (ಜೂನ್ 13) ರಾಜ್ಯದಲ್ಲಿ 415 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಬೆಂಗಳೂರಿನಲ್ಲಿಯೇ 400 ಪ್ರಕರಣಗಳು ವರದಿಯಾಗಿವೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ ಐದು, ಕಲಬುರಗಿ ಮೂರು ಹಾಗೂ ಬಳ್ಳಾರಿಯ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಬೆಳಗಾವಿ, ಧಾರವಾಡ, ಕೋಲಾರ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆಯು 39,56,749ಕ್ಕೆ ಮುಟ್ಟಿದೆ. ಪ್ರಸ್ತುತ ರಾಜ್ಯದಲ್ಲಿ 3,688 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ. ಈವರೆಗೆ ಒಟ್ಟು 40,066 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದರೆ, 39,12,953 ಜನರು ಚೇತರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Tue, 14 June 22

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ