AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಜೆಎನ್.1 ವೈರಸ್​​ ಆರ್ಭಟ; 199 ಜನರಲ್ಲಿ JN.1 ದೃಢ

ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಜೆಎನ್.1 ವೈರಸ್​​ ಆರ್ಭಟ ಹೆಚ್ಚಾಗಿದೆ. ರಾಜ್ಯದಲ್ಲಿ ಈವರೆಗೆ 199 ಜನರಿಗೆ ಕೊರೊನಾ ಉಪತಳಿ JN.1 ದೃಢಪಟ್ಟಿದೆ. ಈವರೆಗೆ ಜಿನೋಮ್‌ ಸೀಕ್ವೆನ್ಸ್‌ ಟೆಸ್ಟ್‌ಗೆ 601 ಸ್ಯಾಂಪಲ್ಸ್‌ ರವಾನಿಸಲಾಗಿದೆ. ರಾಜ್ಯದ 28 ಜನರಿಗೆ ಎಕ್ಸ್‌ಬಿಬಿ ಉಪತಳಿ ಸೋಂಕಿ ಇದೆ.

ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಜೆಎನ್.1 ವೈರಸ್​​ ಆರ್ಭಟ; 199 ಜನರಲ್ಲಿ JN.1 ದೃಢ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on:Jan 02, 2024 | 10:09 AM

Share

ಬೆಂಗಳೂರು, ಜ.02: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ (Coronavirus) ರೂಪಾಂತರ ತಳಿ ಜೆಎನ್.1 (JN.1) ವೈರಸ್​​ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಈವರೆಗೆ 199 ಜನರಲ್ಲಿ ಜೆಎನ್.1 ದೃಢ ಪಟ್ಟಿದೆ. ಜಿನೋಮಿಕ್ ಸ್ವೀಕೆನ್ಸ್ ವರದಿಯಲ್ಲಿ 199 ಮಂದಿಗೆ ಜೆಎನ್.1 ಸೋಂಕು ತಗುಲಿರೋದು ದೃಢಪಟ್ಟಿದೆ. ಇದುವರೆಗೆ ಜಿನೋಮ್‌ ಸೀಕ್ವೆನ್ಸ್‌ ಟೆಸ್ಟ್‌ಗೆ 601 ಸ್ಯಾಂಪಲ್ಸ್‌ಗಳ‌ ರವಾನಿಸಲಾಗಿತ್ತು. ಡಿಸೆಂಬರ್ 25ರಂದು ಹೊರ ಬಿದ್ದ ಮೊದಲ ರಿಪೋರ್ಟ್ ನಲ್ಲಿ 60 ಸ್ಯಾಂಪಲ್ ಗಳ ಪೈಕಿ 34 ಮಂದಿಗೆ ಜೆಎನ್ 1 ತಗುಲಿರೋದು ದೃಢಪಟ್ಟಿತ್ತು. ನಿನ್ನೆ ಮತ್ತೆ 202 ಮಾದರಿಗಳ ವರದಿಯಲ್ಲಿ 165 ಮಂದಿಯಲ್ಲಿ ಜೆಎನ್1 ದೃಢಪಟ್ಟಿದೆ. ಇಲ್ಲಿಯವರೆಗೆ 199 ಜನರಿಗೆ ಜೆ.ಎನ್ 1 ವೈರಸ್ ಸೋಂಕು ತಗುಲಿದೆ. 28 ಜನರಿಗೆ ಎಕ್ಸ್‌ಬಿಬಿ ಉಪ ತಳಿ ಸೋಂಕು ಇದ್ದು, 35 ಮಂದಿಯಲ್ಲಿ ಇತರೆ ರೂಪಾಂತರಿ ಸೋಂಕು ಪತ್ತೆಯಾಗಿದೆ.

ಕಳೆದು ಮೂರು ವರ್ಷಗಳಿಂದ ಕೊರೊನಾ ವಿಶ್ವವನ್ನ ಬಿಟ್ಟು ಅಲುಗಾಡುತ್ತಿಲ್ಲ. ಕೊವಿಡ್ ವೈರಸ್ ಇಂದು‌ ಕಡಿಮೆ ಆಗುತ್ತೆ, ನಾಳೆ ಕಡಿಮೆ ಆಗುತ್ತೆ ಅಂತಾ ಜನರು ಕಾದು ಕುಳಿತಿದ್ದಾರೆ. ಆದ್ರೆ ಒಂದು ಮುಗಿದರೆ ಮತ್ತೊಂದು ಅನ್ನೋ ಹಾಗೇ ಪ್ರತಿ 6 ತಿಂಗಳಿಗೊಮ್ಮೆ ಹೊಸ ಹೊಸ ರೂಪದಲ್ಲಿ ಕೊರೊನಾ ಮತ್ತೆ ಬಂದು ಜನರ ಜೀವ ಹಿಂಡುತಿದೆ. ಈ ವರ್ಷ ಆರಂಭದಲ್ಲಿಯೇ JN.1 ಹೊಸ ರೂಪದಲ್ಲಿ ತಲೆ ಎತ್ತಿರುವ ವೈರಸ್ ಅಟ್ಟಹಾಸಕ್ಕೆ ಪ್ಲಾನ್ ಮಾಡಿದೆ ಆದ್ರೆ ಆರಂಭದಲ್ಲಿ ನಿಯಂತ್ರಣಕ್ಕೆ ಸರ್ಕಾರ ನಾನಾ ತಂತ್ರಗಳ ಪ್ರಯೋಗಿಸಲು ಮುಂದಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿಂದು 296 ಜನರಿಗೆ ಕೊರೊನಾ ಸೋಂಕು ದೃಢ: ಮೈಸೂರಿನಲ್ಲಿ ಓರ್ವ ವ್ಯಕ್ತಿ ಸಾವು

ಕೋವಿಡ್‌ನ ರೂಪಾಂತರಿ ಪತ್ತೆಗೆ ಗಂಟಲ ದ್ರವದ ಮಾದರಿಗಳನ್ನಷ್ಟೇ ಜಿನೋಮ್‌ ಸೀಕ್ವೆನ್ಸಿಂಗ್‌ ಡಿಎನ್‌ಎ ಜೋಡಣೆಯ ಕ್ರಮದ ಮೂಲಕ ಪತ್ತೆ ಪರೀಕ್ಷೆ ನಡೆಸಲಾಗುತ್ತಿತ್ತು. ಆದ್ರೆ ಈಗ ಒಳಚರಂಡಿಯ ಕೊಳಚೆ ನೀರನ್ನೂ ಪರೀಕ್ಷೆಗೊಳಪಡಿಸಿ, ರೂಪಾಂತರಿ ತಳಿಗಳ ಪತ್ತೆ ಕಾರ್ಯವನ್ನ ಸರ್ಕಾರ ಕೈಗೊಂಡಿದೆ.. ರಾಜ್ಯದಲ್ಲಿ ಜೆ ಎನ್ 1 ರೂಪಾಂತರಿ ಹಿನ್ನಲೆ ನಗರದಲ್ಲಿ ಈ ತಳಿ ಹರಡುವುದರ ಪ್ರಮಾಣ ಹಾಗೂ ತಡೆಯುವ ಸಲುವಾಗಿ ಸರ್ಕಾರ ಹಾಗೂ ಬಿಬಿಎಂಪಿ ನಾನಾ ತಂತ್ರಗಳನ್ನು ಮೊರೆ ಹೋಗಿದೆ. ಈ ಭಾಗವಾಗಿ ಹಲವು ಮನೆಗಳಿಂದ ಒಳಚರಂಡಿ ಕೊಳವೆ ಮಾರ್ಗದ ಮೂಲಕ ಹರಿದು ಬಂದು ಒಂದೆಡೆ ಸೇರುವ ಕೊಳಚೆ ನೀರಿನ ಮಾದರಿಯನ್ನು ಸಂಗ್ರಹ ಮಾಡಿ, ಪರೀಕ್ಷೆಗೆ ರವಾನಿಸಲಾಗುತ್ತಿದೆ. ಈ ವರದಿ ಬಳಿಕ ಬೆಂಗಳೂರಿನಲ್ಲಿ ಹೊಸ ತಳಿ ಹರಡಿರುವ ಪ್ರಮಾಣ ಸ್ಪಷ್ಟವಾಗಲಿದೆ

ವಿಕಾಸಸೌಧದಲ್ಲಿ ಅಧಿಕಾರಿಗಳ ಸಭೆ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆ ಸಚಿವ ಶರಣಪ್ರಕಾಶ್​ ಪಾಟೀಲ್ ವಿಕಾಸಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮುಂಜಾಗೃತ ಕ್ರಮವಾಗಿ ಏನೆಲ್ಲಾ ಎಚ್ಚರಿಕೆ ವಹಿಸಬೇಕು. ತಮ್ಮ ವ್ಯಾಪ್ತಿಗೆ ಬರುವ ಮೆಡಿಕಲ್ ಕಾಲೇಜುಗಳಲ್ಲಿ ಹೇಗೆ ಸಿದ್ಧತೆಯಾಗಿದೆ, ಬೆಡ್ ವ್ಯವಸ್ಥೆ, ಮೆಡಿಸನ್ ಸಿದ್ಧತೆ ಕುರಿತು ಸಭೆ ನಡೆಸಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:04 am, Tue, 2 January 24

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?