AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಣಿಸಿಕೊಂಡ ಕ್ಲಸ್ಟರ್​ಗಳಲ್ಲಿ ಕೊವಿಡ್19 ಪರೀಕ್ಷೆ ಕಡ್ಡಾಯ; ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬ್ರೇಕ್

ಕೇರಳದಿಂದ ಬರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಿಸಬೇಕು. 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್ ಮಾಡಬೇಕು. ಕೇರಳ ಗಡಿ ಭಾಗದ ಜಿಲ್ಲೆಗಳಲ್ಲಿ ಬರುವವರಿಗೆ ಸ್ಕ್ರೀನಿಂಗ್ ಮಾಡಬೇಕು ಎಂದು ಹೇಳಲಾಗಿದೆ.

ಕೊರೊನಾ ಕಾಣಿಸಿಕೊಂಡ ಕ್ಲಸ್ಟರ್​ಗಳಲ್ಲಿ ಕೊವಿಡ್19 ಪರೀಕ್ಷೆ ಕಡ್ಡಾಯ; ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬ್ರೇಕ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 28, 2021 | 2:38 PM

Share

ಬೆಂಗಳೂರು: ಕೊರೊನಾ ಕಾಣಿಸಿಕೊಂಡ ಕ್ಲಸ್ಟರ್​ಗಳಲ್ಲಿ ಕಡ್ಡಾಯ ಕೊವಿಡ್19 ಪರೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ. ಧಾರವಾಡ, ಬೆಂಗಳೂರು, ಮೈಸೂರು ಕ್ಲಸ್ಟರ್ ಮೇಲೆ ನಿಗಾ ವಹಿಸಬೇಕು ಎಂದು ಸೂಚಿಸಿ, ಧಾರವಾಡ, ಬೆಂಗಳೂರು, ಮೈಸೂರು ಭಾಗಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಮೂರು ಭಾಗದ ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ ನೀಡಲಾಗಿದೆ.

ಕೇರಳ, ಮಹರಾಷ್ಟ್ರದಿಂದ ಬಂದವರಿಗೆ ಟೆಸ್ಟ್​ ಮಾಡಿಸಬೇಕು. 3 ಕ್ಲಸ್ಟರ್​ ಶಿಕ್ಷಣ ಸಂಸ್ಥೆಗಳಿಗೆ ಬಂದ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಿಸಬೇಕು. ಕೇರಳ, ಮಾಹಾರಾಷ್ಟ್ರದಿಂದ ಬರುವವರಿಗೆ ಕೊವಿಡ್19 ನೆಗೆಟಿವ್ ವರದಿ ಕಡ್ಡಾಯ ಆಗಿರಲಿದೆ. ವಿದ್ಯಾರ್ಥಿಗಳಿಗೆ 72 ಗಂಟೆಯೊಳಗಿನ ನೆಗೆಟಿವ್ ವರದಿ ಕಡ್ಡಾಯ ಆಗಿದೆ. ಕೇರಳದಿಂದ ಬರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಿಸಬೇಕು. 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್ ಮಾಡಬೇಕು. ಕೇರಳ ಗಡಿ ಭಾಗದ ಜಿಲ್ಲೆಗಳಲ್ಲಿ ಬರುವವರಿಗೆ ಸ್ಕ್ರೀನಿಂಗ್ ಮಾಡಬೇಕು ಎಂದು ಹೇಳಲಾಗಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಸಲಹೆ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳಿಗೆ ಈ ಕುರಿತು ರಾಜ್ಯ ಸರ್ಕಾರ ಸೂಚನೆ ನೀಡಿದೆ. 2 ತಿಂಗಳು ಕಾರ್ಯಕ್ರಮಗಳನ್ನ ಮುಂದೂಡಲು ಸೂಚನೆ ಕೊಡಲಾಗಿದೆ. ಕಾರ್ಯಾಗಾರ, ಸೆಮಿನಾರ್​ಗಳನ್ನ ಸಾಧ್ಯವಾದ್ರೆ ಮುಂದೂಡಿ. ಮುಂದೂಡಲಾಗದಿದ್ರೆ ಕಡಿಮೆ ವಿದ್ಯಾರ್ಥಿಗಳೊಂದಿಗೆ ನಡೆಸಿ ಎಂದು ಹೇಳಲಾಗಿದೆ.

ಉಳಿದ ವಿದ್ಯಾರ್ಥಿಗಳಿಗೆ ವರ್ಚುವಲ್​ನಲ್ಲಿ ಅವಕಾಶ ಕಲ್ಪಿಸಿ. ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಬೇಕು. ಆರೋಗ್ಯ ವಲಯದಲ್ಲಿರುವವರು ವರ್ಚುವಲ್ ಸಭೆ ನಡೆಸಬೇಕು. ವಿದ್ಯಾರ್ಥಿಗಳು ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಿ ಎಂದು ಹೇಳಿ ಶಿಕ್ಷಣ ಸಂಸ್ಥೆಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಸಲಹೆಯನ್ನ ನೀಡಿದೆ.

ಇದನ್ನೂ ಓದಿ: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಕ್ಷಣಗಣನೆ; ಜಾತ್ರೆ ನಡೆಯುವ ಸ್ಥಳದಲ್ಲಿಯೇ ಕೊರೊನಾ ಟೆಸ್ಟಿಂಗ್, ವ್ಯಾಕ್ಸಿನೇಷನ್​ಗೆ ಸಿದ್ಧತೆ

ಇದನ್ನೂ ಓದಿ: ಕೊವ್ಯಾಕ್ಸಿನ್, ಕೊವಿಶೀಲ್ಡ್ ಲಸಿಕೆ ಪಡೆದವರಿಗೂ ಕೊರೊನಾ! ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ ಬಯಲು

Published On - 2:37 pm, Sun, 28 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ