AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಬಂಧಿತ ಉಸಿರಾಟದ ಸಮಸ್ಯೆಯಿಂದ ಅಸುನೀಗಿದ ಬೆಂಗಳೂರಿನ ಕೊರೊನಾ ವಾರಿಯರ್

ಕೊರೊನಾ ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರೂ ಬಿಬಿಎಂಪಿಯಿಂದ ಸರಿಯಾದ ಗ್ಲೌಸ್,ಮಾಸ್ಕ್ ಕೊಡುತ್ತಿಲ್ಲ. ಮೃತ ಸೋಂಕಿತ ಮಹಿಳೆಗೆ 8 ವರ್ಷದ ಮಗು ಇದ್ದಾಳೆ. ಮಗಳಿಗೆ ಯಾರು ದಿಕ್ಕು ಎಂದು ಸಂಬಂಧಿಕರ ಕಣ್ಣೀರು ಹಾಕುತ್ತಿದ್ದಾರೆ.

ಕೊರೊನಾ ಸಂಬಂಧಿತ ಉಸಿರಾಟದ ಸಮಸ್ಯೆಯಿಂದ ಅಸುನೀಗಿದ ಬೆಂಗಳೂರಿನ ಕೊರೊನಾ ವಾರಿಯರ್
ಸಾಂದರ್ಭಿಕ ಚಿತ್ರ
guruganesh bhat
|

Updated on: Apr 24, 2021 | 4:38 PM

Share

ಬೆಂಗಳೂರು: ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ನಿರತವಾಗಿದ್ದ ಮಹಿಳಾ ವಾರಿಯರ್ ಓರ್ವರು ಕೊರೊನಾದಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಪತ್ತೆಹಚ್ಚುವ ಪರೀಕ್ಷೆಯಲ್ಲಿ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸುತ್ತಿದ್ದ ಮಹಿಳಾ ಸಿಬ್ಬಂದಿ ನಿನ್ನೆ ಉಸಿರಾಟದ ತೊಂದರೆಯಿಂದ ಅಸುನೀಗಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಕಾರಣ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಸಾವಿನಿಂದ ಸಂಬಂಧಿಕರು ಕಂಗಾಲಾಗಿದ್ದಾರೆ.

ಕೊರೊನಾ ಪಾಸಿಟಿವ್ ಬಂದ ನಂತರ ಐಸಿಯು ಬೆಡ್‌ ಸಹ ನೀಡಿರಲಿಲ್ಲ. ಕೊರೊನಾ ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರೂ ಬಿಬಿಎಂಪಿಯಿಂದ ಸರಿಯಾದ ಗ್ಲೌಸ್,ಮಾಸ್ಕ್ ಕೊಡುತ್ತಿಲ್ಲ. ಮೃತ ಸೋಂಕಿತ ಮಹಿಳೆಗೆ 8 ವರ್ಷದ ಮಗು ಇದ್ದಾಳೆ. ಮಗಳಿಗೆ ಯಾರು ದಿಕ್ಕು ಎಂದು ಸಂಬಂಧಿಕರ ಕಣ್ಣೀರು ಹಾಕುತ್ತಿದ್ದಾರೆ.

ಮೊದಲ ಅಲೆಯಲ್ಲಿ ಇಷ್ಟೊಂದು ತೀವ್ರತೆ ಇರಲಿಲ್ಲ; ಆರೋಗ್ಯ ಸಚಿವ ಡಾ.ಸುಧಾಕರ್ ಕೊರೊನಾ ಸೋಂಕು ನಮ್ಮ ಜೊತೆಯಲ್ಲಿ ಚೆಸ್ ರೀತಿಯಲ್ಲಿ ಆಡುತ್ತಿದೆ ಅಂತಾ ಏಮ್ಸ್ ನಿರ್ದೇಶಕರು ಹೇಳಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಮೊದಲ ಅಲೆಯಲ್ಲಿ ಇಷ್ಟೊಂದು ತೀವ್ರತೆ ಇರಲಿಲ್ಲ. ಈಗ ಇದ್ದಷ್ಟು ಆಕ್ಸಿಜನ್ ಬೇಡಿಕೆ ಆಗ ಇರಲಿಲ್ಲ. ಈಗಾಗಲೇ ನಾವು 500 ಟನ್ ಆಕ್ಸಿಜನ್ ಬಳಸಿದ್ದೇವೆ. ಮೇ ತಿಂಗಳಲ್ಲಿ 1,414 ಟನ್ ಆಕ್ಸಿಜನ್ ಬೇಕಾಗುತ್ತದೆ. 1,414 ಟನ್ ಆಕ್ಸಿಜನ್ ಪೂರೈಕೆಗೆ ಮನವಿ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ವೇಳೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ ಎಂದು ತಿಳಿಸಿದ ಸಚಿವ ಸುಧಾಕರ್ ಬೆಂಗಳೂರಿನಲ್ಲಿ ಎರಡು ಸಾವಿರ ಐಸಿಯು, ವೆಂಟಿಲೇಟರ್ ಬೇಕು. ಹೆಚ್ಚುವರಿಯಾಗಿ 2 ಸಾವಿರ ಐಸಿಯು, ವೆಂಟಿಲೇಟರ್​ಗಳು ಬೇಕು ಎಂದಿದ್ದಾರೆ.

ನಂತರ ಮಾತನಾಡಿದ ಅವರು ರೂಪಾಂತರಿ ಕೊರೊನಾ ವೈರಸ್ ವೈದ್ಯಕೀಯ ವಿಭಾಗಕ್ಕೆ ದಾರಿ ತಪ್ಪಿಸುತ್ತಿದೆ. ಬೇರೆ ದೇಶದ ರೂಪಾಂತರಿ ವೈರಸ್ ಇಲ್ಲಿ ಪತ್ತೆಯಾಗಿಲ್ಲ. ಇದರ ಗುಣಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಎರಡನೇ ಅಲೆ ಸೋಂಕಿತರ ಪ್ರಮಾಣ ಹೆಚ್ಚಿದ್ದರೂ, ಸಾವಿನ ಪ್ರಮಾಣ ಕಡಿಮೆ ಇದೆ. ಸರ್ಕಾರ ಬಿಗಿಯಾದ ಮಾರ್ಗಸೂಚಿ ಮಾಡಿದೆ. ಅನಗತ್ಯ ಮನೆಯಿಂದ ಹೊರಗಡೆ ಬರುವುದು, ಗುಂಪು ಸೇರುವುದನ್ನು ತಪ್ಪಿಸಬೇಕು. ಲಸಿಕೆಗಳನ್ನು ಮೊದಲು ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Corona warrior dead due to corona virus lack of ICU and bed)

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ