AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರಿಗೆ ಕೊರೊನಾ ಪಾಸಿಟಿವ್! ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೇಗೌಡರು, ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಂದರೆ ಕೊರೊನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು.

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರಿಗೆ ಕೊರೊನಾ ಪಾಸಿಟಿವ್! ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ
TV9 Web
| Updated By: sandhya thejappa|

Updated on:Jan 22, 2022 | 11:49 AM

Share

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರಿಗೆ (HD Devegowda) ಕೊರೊನಾ (Coronavirus) ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೇಗೌಡರು, ನಿನ್ನೆ (ಜ.21) ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಂದರೆ ಕೊರೊನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ಸದ್ಯ ಮಣಿಪಾಲ್ (Manipal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜನವರಿ 15ಕ್ಕೆ ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿಗೆ ಕೊರೊನಾ ಸೋಂಕು ತಗುಲಿತ್ತು. ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆದಿದ್ದರು.

ದೇವೇಗೌಡರಿಗೆ ಕೊವಿಡ್ ಪಾಸಿಟಿವ್ ಬಂದಿರುವ ವಿಚಾರಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ‌ ಪ್ರಧಾನಿ ದೇವೇಗೌಡರ ಜತೆ ಮಾತನಾಡುತ್ತೇನೆ. ಅವರ ಕುಟುಂಬ, ಮಣಿಪಾಲ್ ವೈದ್ಯರ ಜತೆಗೂ ಮಾತನಾಡುತ್ತೇನೆ. ಈ ವಯಸ್ಸಲ್ಲೂ ಅವರು ಆರೋಗ್ಯವಾಗಿದ್ದಾರೆ. ಆದರೆ ಕೊವಿಡ್ ಯಾರಿಗೂ ಬಿಟ್ಟಿಲ್ಲ ಅಂತ ತಿಳಿಸಿದರು.

ಶೀಘ್ರ ಗುಣಮುಖರಾಗಲೆಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾರೈಸಿದ್ದಾರೆ. ಟ್ವೀಟ್​ ಮೂಲಕ ಹಾರೈಸಿದ್ದಾರೆ. ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿರುವುದು ವಿಷಾದಕರ ಸಂಗತಿ. ದೇವೇಗೌಡರು ಕೊರೊನಾ ವಿರುದ್ಧ ಗೆದ್ದು ಬರಲಿ ಅಂತ ವಿಧಾನ ಪರಿಷತ್​ ಸದಸ್ಯ ಶರವಣ ಟ್ವೀಟ್​ ಮಾಡಿದ್ದಾರೆ

ಗುಣಮುಖರಾದ ಸಿಎಂ                                                                                                                                                                            ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಕೊರೊನಾ ದೃಢಪಟ್ಟಿತ್ತು. ಆದರೆ ಜನವರಿ 17ರಂದು ನಡೆಸಿದ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ಇದೆ. ಬೊಮ್ಮಾಯಿ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ರಕ್ತದೊತ್ತಡ, ಶುಗರ್, ರಕ್ತ ಹೆಪ್ಪುಕಟ್ಟುವುದಕ್ಕೆ ಸಂಬಂಧಿಸಿದಂತೆ ಹಲವು ತಪಾಸಣೆಗಳನ್ನು ನಡೆಸಲಾಗಿತ್ತು. ಡಿ-ಡೈಮರ್ ಟೆಸ್ಟ್​ ಹಾಗೂ ಶ್ವಾಸಕೋಶ ಎಕ್ಸ್​ರೇ ತೆಗೆಸಲಾಗಿದೆ. ಇಸಿಜಿ ಹಾಗೂ ಇಕೋ ಟೆಸ್ಟ್​ ಮಾಡಿ ಹೃದಯದ ಆರೋಗ್ಯ ತಪಾಸಣೆ ಮಾಡಿದ್ದರು.

ಇದನ್ನೂ ಓದಿ

PM Modi: ಇಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ; ಸರ್ಕಾರಗಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಪರಿಶೀಲನೆ

ಅಮೆಜಾನ್ ಕಂಪನಿ ಹೆಸರಲ್ಲಿ ವಂಚನೆ! ಬೆಂಗಳೂರಿನಲ್ಲಿ ಗೋಡೌನ್ ಮಾಡಿ ಬಾಡಿಗೆ ಕೊಡುತ್ತೇನೆ ಎಂದು ವಂಚಿಸಿದ್ದ ಅರೋಪಿ ಅರೆಸ್ಟ್

Published On - 10:14 am, Sat, 22 January 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!