AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus 4th Wave: ಕರ್ನಾಟಕದಲ್ಲಿ ಕೊರೊನಾ BA.2.12 ರೂಪಾಂತರಿ ಪತ್ತೆ; ಮತ್ತಷ್ಟು ಹೆಚ್ಚಾಯ್ತು ಕೊರೊನಾ 4ನೇ ಅಲೆ ಆತಂಕ

ಈಗಾಗಲೇ ಕೊರೊನಾ 4ನೇ ಅಲೆ ಆತಂಕ ಹೆಚ್ಚಾಗಿದ್ದು ಇದರ ನಡುವೆ ರಾಜ್ಯದಲ್ಲಿ BA.2.12 ರೂಪಾಂತರಿ ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ ನಡೆಸುತ್ತಿರುವ ಜೀನೋಮ್ ಸೀಕ್ವೆನ್ಸಿಂಗ್ ನಲ್ಲಿ ಒಮಿಕ್ರಾನ್ ಉಪತಳಿಗಳಾದ BA.2.12 ಹಾಗೂ bA.2.10 ಲಕ್ಷಣಗಳನ್ನೆ ಹೆಚ್ಚು ಹೋಲುತ್ತಿದ್ದು, ಈ ತಳಿಗಳಿಂದಲೇ ದೆಹಲಿ, ಮುಂಬೈನಲ್ಲಿ ಕೇಸ್ ಗಳು ಹೆಚ್ಚಾಗಿವೆ.

Coronavirus 4th Wave: ಕರ್ನಾಟಕದಲ್ಲಿ ಕೊರೊನಾ BA.2.12 ರೂಪಾಂತರಿ ಪತ್ತೆ; ಮತ್ತಷ್ಟು ಹೆಚ್ಚಾಯ್ತು ಕೊರೊನಾ 4ನೇ ಅಲೆ ಆತಂಕ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: May 01, 2022 | 2:39 PM

ಬೆಂಗಳೂರು: ಒಮಿಕ್ರಾನ್ ರೂಪಾಂತರ ತಳಿಗಳು ರಾಜ್ಯದಲ್ಲಿ ನಾಲ್ಕನೇ ಅಲೆಗೆ ಕಾರಣವಾಗಲಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಏಕೆಂದರೆ ಈಗಾಗಲೇ ಕೊರೊನಾ 4ನೇ ಅಲೆ ಆತಂಕ ಹೆಚ್ಚಾಗಿದ್ದು ಇದರ ನಡುವೆ ರಾಜ್ಯದಲ್ಲಿ BA.2.12 ರೂಪಾಂತರಿ ಪತ್ತೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ಈ ಬಗ್ಗೆ ವರದಿ ಬರುವ ಸಾಧ್ಯತೆ ಇದೆ. ತಳಿಗಳು ಪತ್ತೆಯಾಗಿರುವ ಬಗ್ಗೆ INSACOG ಲ್ಯಾಬ್ ನಿಂದ ಕೇಂದ್ರಕ್ಕೆ ರವಾನೆಯಾಗಿದೆ.

ಸದ್ಯ ರಾಜ್ಯದಲ್ಲಿ ನಡೆಸುತ್ತಿರುವ ಜೀನೋಮ್ ಸೀಕ್ವೆನ್ಸಿಂಗ್ ನಲ್ಲಿ ಒಮಿಕ್ರಾನ್ ಉಪತಳಿಗಳಾದ BA.2.12 ಹಾಗೂ bA.2.10 ಲಕ್ಷಣಗಳನ್ನೆ ಹೆಚ್ಚು ಹೋಲುತ್ತಿದ್ದು, ಈ ತಳಿಗಳಿಂದಲೇ ದೆಹಲಿ, ಮುಂಬೈನಲ್ಲಿ ಕೇಸ್ ಗಳು ಹೆಚ್ಚಾಗಿವೆ. ಹೀಗಾಗಿ ಈ ತಳಿಗಳ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಪಡೆದುಕೊಳ್ಳುತ್ತಿದೆ. ಟೆಸ್ಟ್, ಟ್ರಾಕ್, ಟ್ರೀಟ್ ಫಾರ್ಮೂಲದಂತೆ ಕ್ರಮ ವಹಿಸಲು ಸಜ್ಜಾಗುತ್ತಿದೆ. ಇನ್ನು ರಾಜ್ಯಕ್ಕೂ ರೂಪಾಂತರಿ ತಳಿಯ ಆತಂಕ ಶುರುವಾಗಿದ್ದು, ಉಪತಳಿಯಿಂದಲೇ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ. ದೆಹಲಿಯಿಂದ ಡೆತ್ ರೇಟ್ ಹಾಗೂ ಅನುಸರಿಸಬೇಕಾದ ಮಾಹಿತಿಗಳ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ‌ ಕಲೆಹಾಕುತ್ತಿದೆ.

ಇನ್ನು ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾಹಿತಿ ನೀಡಿದ್ದು, ಈಗಾಗಲೇ ಸೀಕ್ವೆನ್ಸಿಂಗ್ ಟೆಸ್ಟಿಂಗ್ಗಳನ್ನ ಹೆಚ್ಚಿನ ಪ್ರಮಾಣದಲ್ಲಿ ಮಾಡಲಾಗುತ್ತಿದೆ. ಲ್ಯಾಬ್ಗಳಲ್ಲಿ ರೂಪಾಂತರಿ ತಳಿಗಳು ಪತ್ತೆಯಾಗಿರುವುದು ಕಂಡುಬಂದಿದೆ. ಆದ್ರೆ ಪತ್ತೆಯಾಗಿರುವ ತಳಿಗಳು BA.2.10 , BA.2.12 , XE ನಾ ಎನ್ನುವ ಬಗ್ಗೆ ಇನ್ನು ಸರ್ಚಿಂಗ್ ಮಾಡಲಾಗುತ್ತಿದೆ. ಒಂದು ವೇಳೆ ತಳಿಗಳು ಬಂದಿರುವುದು ಖಚಿತವಾದ್ರೆ ಸಂಭಂದಿತ ವ್ಯಕ್ತಿಗಳ ಪ್ರಥಮಿಕ ಹಾಗೂ ದ್ವಿತೀಯ ಸಂಪರ್ಕವನ್ನು ಪರಿಶೀಲನೆ ಮಾಡಲಾಗುತ್ತೆ. ಕೇಸ್ಗಳ ಆಧಾರದ ಮೇಲೆ ಸ್ಥಿತಿಗಳನ್ನ ವಿಚಾರಿಸಲಾಗುತ್ತದೆ. ಈ ಹಿಂದೆ ಮೂರ‌ನೇ ಅಲೆ ಒಮಿಕ್ರಾನ್ ನಿಂದಾಲೇ ಬಂದಿತ್ತು. ಈಗಾ ಮಾಡಿರುವ ಜೀನೋಮಿಕ್ ಸ್ವೀಕ್ವೆನ್ಸಿಂಗ್ ಟೆಸ್ಟಿಂಗ್ ನಲ್ಲಿ ಸಿಂಟಮ್ಸ್ ಗಳೆಲ್ಲವು BA2 ರೂಪಂತರ ತಳಿಗಳ ಗಣವನ್ನೆ ಹೊಂದಿವೆ. ಹೀಗಾಗಿ ಕೇಸ್ಗಳು ಹೆಚ್ಚಾದ್ರು ಎಲ್ಲ ರೀತಿಯ ಕ್ರಮಕ್ಕೆ ಮುಂದಾಗುತ್ತಿದ್ದೇವೆ. ಇದರಿಂದ ಡೆತ್ ಪ್ರಮಾಣವು ಹೆಚ್ಚಾಗಿರುವ ಬಗ್ಗೆ ತಿಳಿದುಬಂದಿದೆ. ಈಗಾಗಲೇ BA2 ಬಂದಿರುವ ಎಲ್ಲಾ ರಾಜ್ಯಗಳ ಮಾಹಿತಿ ಪಡೆದುಕೊಂಡಿದ್ದೇವೆ ಎಂದರು.

ನಾವು ಟೆಸ್ಟ್, ಟ್ರಾಕ್, ಟ್ರೀಟ್ ಫಾರ್ಮೂಲದಂತೆ ಹೆಚ್ಚಿನ ಫೋಕಸ್ ಮಾಡುತ್ತಿದ್ದೇವೆ. ಕ್ಲಸ್ಟರ್ ಮಟ್ಟದಲ್ಲಿ ಕೇಸ್ಗಳು ಹೆಚ್ಚಾಗುವುದಕ್ಕೆ ನಾವು ಬಿಡುವುದಿಲ್ಲ. ಎರಡನೇ ಅಲೆಯಲ್ಲಿ ಕೇಸ್ಗಳನ್ನ ಏನೆಲ್ಲ ಕ್ರಮ ತೆಗೆದುಕೊಂಡಿದ್ವಿ. ಆ ಕ್ರಮಗಳನ್ನೆ ತೆಗೆದುಕೊಳ್ತಿವಿ. ಸದ್ಯಕ್ಕೆ ಟೆಸ್ಟಿಂಗ್ ಟೀಮ್‌, ಅನಾಲಿಸಿಸ್ ಟೀಮ್, ಸಿಬ್ಬಂದಿಗಳನ್ನ ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುತ್ತೇವೆ. ನಮ್ಮಲ್ಲಿ ಹೆಚ್ಚಿನ ಕೇಸ್ಗಳು ಇಲ್ಲ. ಆದ್ರೆ ಕೇಸ್ಗಳ ಪ್ರಮಾಣ ಹೆಚ್ಚಾದ್ರು ಅವುಗಳ ತಡೆಯುವ ಎಲ್ಲ ಕ್ರಮ ತೆಗೆದುಕೊಂಡಿದ್ದೇವೆ. ಈಗಾಗಲೇ ಪಾಸಿಟಿವಿಟಿ ರೇಟ್ಗೆ ತಕ್ಕಂತೆ ಆ್ಯಕ್ಷನ್ ಪ್ಲಾನ್ ಹಾಕಿಕೊಂಡಿದ್ದೀವಿ. ಒಂದು ವೇಳೆ ಪಾಸಿಟಿವಿಟಿ ರೇಟ್ 5 % ಮೀರಿದ್ರೆ ಸಿಬ್ಬಂದಿಗಳನ್ನ ಹೆಚ್ಚಳ ಮಾಡಿಕೊಳ್ಳುತ್ತೇವೆ. ಸದ್ಯ 1.6% ರಷ್ಟೇ ಪಾಸಿಟಿವಿಟಿ ರೇಟ್ ಇರುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಕೊರೊನಾ ಬಗೆಗಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ