Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ ತಿಂಗಳಲ್ಲಿ ಕೊರೊನಾ 4ನೇ ಅಲೆ ಸಾಧ್ಯತೆ; ಮತ್ತೆ ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟಿಂಗ್ ನಡೆಸಲು ನಿರ್ಧರಿಸಿದ ಆರೋಗ್ಯ ಇಲಾಖೆ

ಪ್ರತಿ ನಿತ್ಯ RT-PCR ನಡೆಸಿದ 50 ಮಾದರಿಗಳನ್ನು ಜಿನೋಮಿಕ್ ಸೀಕ್ವೆನ್ಸಿಂಗ್ಗೆ ಕಳಿಸಲು ಸೂಚಿಸಲಾಗಿದೆ. ಕೊರೊನಾ ಹೊಸ ಪ್ರಭೇದ XE ಮುಂಬೈ ಹಾಗೂ ಗುಜರಾತ್ನಲ್ಲಿ ಪತ್ತೆಯಾದ ಹಿನ್ನೆಲೆ ಈ ಕ್ರಮಕ್ಕೆ ನಿರ್ಧರಿಸಲಾಗಿದೆ.

ಜೂನ್ ತಿಂಗಳಲ್ಲಿ ಕೊರೊನಾ 4ನೇ ಅಲೆ ಸಾಧ್ಯತೆ; ಮತ್ತೆ ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟಿಂಗ್ ನಡೆಸಲು ನಿರ್ಧರಿಸಿದ ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Apr 12, 2022 | 1:04 PM

ಬೆಂಗಳೂರು: ಜೂನ್ ತಿಂಗಳಲ್ಲಿ ಕೊರೊನಾ 4ನೇ ಅಲೆ(Corona 4th Wave) ಸಾಧ್ಯತೆ ಹಿನ್ನೆಲೆ ಮತ್ತೆ ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟಿಂಗ್ ನಡೆಸಲು ನಿರ್ಧಾರ ಮಾಡಲಾಗಿದ್ದು ಈ ಕುರಿತು ಆರೋಗ್ಯ ಇಲಾಖೆ(Health Department) ಸುತ್ತೋಲೆ‌ ಹೊರಡಿಸಿ‌ದೆ. ಬಿಬಿಎಂಪಿ(BBMP) ಹಾಗೂ ರಾಜ್ಯದ ಎಲ್ಲಾ ಜಿಲ್ಲಾಡಳಿತಕ್ಕೆ ಆದೇಶ ಅನ್ವಯವಾಗಲಿದೆ. ಪ್ರತಿ ನಿತ್ಯ RT-PCR ನಡೆಸಿದ 50 ಮಾದರಿಗಳನ್ನು ಜಿನೋಮಿಕ್ ಸೀಕ್ವೆನ್ಸಿಂಗ್ಗೆ ಕಳಿಸಲು ಸೂಚಿಸಲಾಗಿದೆ. ಕೊರೊನಾ ಹೊಸ ಪ್ರಭೇದ XE ಮುಂಬೈ ಹಾಗೂ ಗುಜರಾತ್ನಲ್ಲಿ ಪತ್ತೆಯಾದ ಹಿನ್ನೆಲೆ ಈ ಕ್ರಮಕ್ಕೆ ನಿರ್ಧರಿಸಲಾಗಿದೆ. ಚೀನಾ ಹಾಗೂ ಹಾಂಗ್ಕಾಂಗ್, ವಿಯಟ್ನಾಂ, ಇಟಲಿ, ಆಸ್ಟ್ರೇಲಿಯಾ ಸೇರಿ 8 ದೇಶದಿಂದ ಬರುವವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಆದೇಶಿಸಿದೆ.

ಜೂನ್​, ಜುಲೈ ತಿಂಗಳಲ್ಲಿ ಕೊರೊನಾ 4ನೇ ಅಲೆ ಬರಬಹುದು. 4ನೇ ಅಲೆ ಕುರಿತು ಕಾನ್ಪುರ ಐಐಟಿ ವರದಿಯಲ್ಲಿ ಹೇಳಿದೆ. ನಿನ್ನೆ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಪಡೆಯಲಾಗಿದೆ. ರಾಜ್ಯ ಸರ್ಕಾರ ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಆತಂಕ ಪಡುವ ರೀತಿ‌ಯ ಸಂದರ್ಭ ಇಲ್ಲ. 8 ದೇಶಗಳಿಂದ ಬರುವ ಪ್ರಯಾಣಿಕರ ತಪಾಸಣೆ ಮಾಡ್ತೇವೆ. ಮಾಸ್ಕ್ ಫ್ರೀ ಮಾಡುವ ಆಲೋಚನೆ ಸರ್ಕಾರದಲ್ಲಿ ಇಲ್ಲ. ತಜ್ಞರ ಸಮಿತಿ ಮಾಸ್ಕ್ ಬಳಸುವಂತೆ ಮನವಿ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೊರೊನಾ ಬಂದ ಮೊದಲ ವರ್ಷದಲ್ಲಿ ಈ ವೈರಾಣು ಬಗ್ಗೆ ಯಾರಿಗೂ ಕಲ್ಪನೆ ಇರಲಿಲ್ಲ. ‘ಕೋವಿಡ್ ಪ್ರಾಣಿಯಿಂದ ಜನರಿಗೆ ಹಬ್ಬುವ ವೈರಾಣು’ ಭಾರತ ಕೋವಿಡ್ ಎದುರಿಸಿದ ರೀತಿ ಮೆಚ್ಚುಗೆಗೆ ಪಾತ್ರವಾಗಿದೆ. ಭಾರತ ಸಮರ್ಥವಾಗಿ ಎದುರಿಸಲ್ಲ ಅಂತ ವಿದೇಶಿಗರು ಹೇಳಿದ್ರು. ಪ್ರಧಾನಿ ಎಲ್ಲಾ ರಾಜ್ಯಗಳ ಜತೆ ನಿಕಟ ಸಂಪರ್ಕ ಹೊಂದಿದ್ದರು. ಲಸಿಕಾಕರಣದಿಂದ ಸಮರ್ಥವಾಗಿ ಕೋವಿಡ್ ಎದುರಿಸಿದ್ದೇವೆ. ಭಾರತದಲ್ಲಿ ಸಾಂಕ್ರಾಮಿಕ ರೋಗಗಳು ಇದೇ ಮೊದಲೇನಲ್ಲ. ಸ್ಪ್ಯಾನಿಷ್ ಫ್ಲೂ, ಪ್ಲೇಗ್ ರೋಗಗಳು ಮಾರಣಾಂತಿಕವಾಗಿದ್ದವು. ಸ್ಪ್ಯಾನಿಷ್ ಫ್ಲೂಗಿಂತ ಹಸಿವಿನಿಂದ ಹೆಚ್ಚು ಜನ ಸತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ನೆರೆ ರಾಜ್ಯದಲ್ಲಿ ಹೊಸ ತಳಿ XE ಪತ್ತೆ ಬೆನ್ನಲ್ಲೆ ಕರ್ನಾಟಕದಲ್ಲಿಯೂ ಹೈ ಅಲರ್ಟ್ ಕೊವಿಡ್‌ ನಾಲ್ಕನೇ ಅಲೆಯನ್ನ ತಡೆಯಲು ಜನರು ಕೈ , ಎಂದಿನಂತೆ ಮಾಸ್ಕ್‌ಗಳನ್ನು ಕಡ್ಡಾಯವಾಗಿಜೋಡಿಸಬೇಕಿದ್ದು ಹಾಕಿಕೊಳ್ಳಬೇಕು ಎಂದು ಕೊವಿಡ್‌ ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ಬಳಿಕ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿಕೆ ನೀಡಿದ್ದಾರೆ. ಯಾರಿಂದಲೂ ಉದಾಸೀನ ವರ್ತನೆ ಬೇಡ. ಬೂಸ್ಟರ್ ಡೋಸ್ ಹಾಕಿಸಿಕೊಳ್ಳಲು ನಿರ್ಲಕ್ಷ್ಯಬೇಡ. ಬಾಕಿ ಇರುವವರು 2, 3ನೇ ಡೋಸ್ ಕೂಡಲೇ ಹಾಕಿಸಿಕೊಳ್ಳಿ. ದಕ್ಷಿಣ ಕೊರಿಯಾ, ಹಾಂಕಾಂಗ್, ಬ್ರಿಟನ್‌, ಜರ್ಮನಿ ಮತ್ತು ಚೀನಾ ಸೇರಿ 8 ದೇಶಗಳಿಂದ ಬರುವವರಿಗೆ ಶೀಘ್ರವೇ ಮಾರ್ಗಸೂಚಿ ಹೊರಡಿಸುತ್ತೇವೆ. ಎಂಟು ದೇಶಗಳಲ್ಲಿ ರೂಪಾಂತರಿ XE ಸೋಂಕು ಹೆಚ್ಚಾಗುತ್ತಿದೆ. ದೇಶದಲ್ಲೂ ರೂಪಾಂತರಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೊವಿಡ್‌ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಮಾಡಲಾಯಿತು. ವಿದೇಶದಿಂದ ಬಂದವರಿಗೆ ಟೆಸ್ಟಿಂಗ್ ನಡೆಸಲು ತೀರ್ಮಾನ ಮಾಡಲಾಗಿದೆ. ಮಕ್ಕಳ ಮೇಲೆ ಹೆಚ್ಚು ನಿಗಾ ಇಡುವಂತೆ ತಿಳಿಸಿದ್ದು, 5 ಸಾವಿರ ಮಕ್ಕಳಿಗೆ ಟೆಸ್ಟಿಂಗ್ ಮಾಡಲು ಸಲಹೆ ನೀಡಿದ್ದಾರೆ ಎಂದು ಹೇಳಿದರು.

ಕೊವಿಡ್ ವ್ಯಾಕ್ಸಿನ್ ಬಗ್ಗೆ ಜನರು ನಿರ್ಲಕ್ಷ್ಯ ವಹಿಸಬೇಡಿ. ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ. 12-14 ವರ್ಷದ ಶೇ.65.6ರಷ್ಟು ಮಕ್ಕಳು ಮೊದಲ ಡೋಸ್ ಪಡೆದಿದ್ದಾರೆ. 15-17 ವರ್ಷದ ಶೇ.79ರಷ್ಟು ಮಕ್ಕಳಿಗೆ ಮೊದಲ ಡೋಸ್ ನೀಡಲಾಗಿದ್ದು, ಸೆಕೆಂಡ್ ಡೋಸ್ ವ್ಯಾಕ್ಸಿನ್ ಶೇ.64.5ರಷ್ಟು ಜನ ಪಡೆದಿದ್ದಾರೆ. 15 ವರ್ಷದವರಿಗೆ ಮೊದಲ ಡೋಸ್ ಶೇ.100.4ರಷ್ಟು ಆಗಿದೆ. 2ನೇ ಡೋಸ್ ಶೇ.95.4ರಷ್ಟು ಜನರು ಪಡೆದುಕೊಂಡಿದ್ದಾರೆ. 18 ವರ್ಷ ಮೇಲ್ಪಟ್ಟ ಶೇ.101.8ರಷ್ಟು ಜನರಿಗೆ ಫಸ್ಟ್ ಡೋಸ್ ನೀಡಲಾಗಿದೆ. ಶೇ.97.4ರಷ್ಟು ಜನರು 2ನೇ ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ ಎಂದು ಹೇಳಿದರು.

ಐದು ರಾಜ್ಯಗಳಲ್ಲಿ ಕೊರೋನಾ ಹೆಚ್ಚಳದ ಹಿನ್ನೆಲೆ ಕರ್ನಾಟಕದ ನೆರೆ ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗಿದೆ. ನೆರೆ ರಾಜ್ಯದಲ್ಲಿ ಹೊಸ ತಳಿ XE ಪತ್ತೆ ಬೆನ್ನಲ್ಲೆ ಕರ್ನಾಟಕದಲ್ಲಿಯೂ ಹೈ ಅಲರ್ಟ್. ಜೊತೆಗೆ ನಿನ್ನೆ ಪ್ರಧಾನಿಯಿಂದ ಕೊರೋನಾ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಂದೇಶ ನೀಡಿದ ಬೆನ್ನಲ್ಲೆ, ಕರ್ನಾಟಕದಲ್ಲಿಯೂ ಕೊರೋನಾ ಸ್ಥಿತಿಗತಿಯ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯ ಜೊತೆಗೆ ಸಭೆ ಮಾಡಲಾಗಿದೆ. ನಾಲ್ಕನೆ ಅಲೆಯ ಬಗ್ಗೆಯೂ ಮಾಹಿತಿ ಸಚಿವರು‌ ಪಡೆದುಕೊಂಡಿದ್ದಾರೆ. ಕರ್ನಾಟಕದಲ್ಲಿ‌ ಕಳೆದ ಒಂದು ವಾರದಲ್ಲಿ ಕೊರೋನಾ ಕೇಸ್ಗಳ ಸಂಖ್ಯೆ ನಿಧಾನ ಗತಿಯಲ್ಲಿ ಏರಿಕೆಯಾಗಿದೆ. 5 – ಏಪ್ರಿಲ್- 29, 6- ಏಪ್ರಿಲ್- 33, 7- ಏಪ್ರಿಲ್ -63, 8- ಏಪ್ರಿಲ್-_77, 9- ಏಪ್ರಿಲ್ -46, 10- ಏಪ್ರಿಲ್- 56 ಕೇಸ್ಗಳು ಹೆಚ್ಚಾಗಿವೆ.

ಇದನ್ನೂ ಓದಿ: ಕಠಿಣ ಕಾನೂನು ಪಾಲನೆಗೆ ಮುಂದಾದ ಮುಜರಾಯಿ ಇಲಾಖೆ: ದೇಗುಲ ಮಳಿಗೆಗಳಲ್ಲಿ ಮುಸ್ಲಿಮರಿಗಿಲ್ಲ ಅವಕಾಶ

Published On - 11:40 am, Tue, 12 April 22

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್