AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron: ಕರ್ನಾಟಕದಲ್ಲಿ ಒಮಿಕ್ರಾನ್ ಉಪತಳಿ ಪತ್ತೆ; 4ನೇ ಅಲೆಯ ಆತಂಕ

Coronavirus: ಕರ್ನಾಟಕದಲ್ಲಿ ಒಮಿಕ್ರಾನ್ ರೂಪಾಂತರಿಯ ಉಪತಳಿ ಎನಿಸಿರುವ BA.3, BA.4, BA.5 ವೈರಾಣುಗಳು ಪತ್ತೆಯಾಗಿವೆ

Omicron: ಕರ್ನಾಟಕದಲ್ಲಿ ಒಮಿಕ್ರಾನ್ ಉಪತಳಿ ಪತ್ತೆ; 4ನೇ ಅಲೆಯ ಆತಂಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 23, 2022 | 11:00 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳ (Coronavirus) ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಒಮಿಕ್ರಾನ್ (Omicron)​ ರೂಪಾಂತರಿಯ ಉಪತಳಿ ಎನಿಸಿರುವ BA.3, BA.4, BA.5 ವೈರಾಣುಗಳು ಪತ್ತೆಯಾಗಿವೆ. ಜೂನ್​ 2ರಿಂದ 9ರ ನಡುವೆ ಸಂಗ್ರಹಿಸಿದ್ದ 44 ಮಾದರಿಗಳ ಪೈಕಿ 38ರಲ್ಲಿ BA.5 ಉಪತಳಿ ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ BA.2 ಉಪತಳಿ ಹೆಚ್ಚಾಗಿ ವ್ಯಾಪಿಸುತ್ತಿದ್ದು, ಶೇ 82ರಷ್ಟು ಸೋಂಕು ಇದೇ ಉಪತಳಿಯಿಂದ ಹರಡುತ್ತಿದೆ. ಹೊಸದಾಗಿ ಪತ್ತೆಯಾಗಿರುವ ತಳಿಗಳ ಬಗ್ಗೆ ಆರೋಗ್ಯ ಇಲಾಖೆ ನಿಗಾವಹಿಸಿದೆ. ಈ ಹೊಸತಳಿಗಳಿಂದ ಕೊರೊನಾ 4ನೇ ಅಲೆ ವ್ಯಾಪಿಸಬಹುದು ಎಂಬ ಆತಂಕ ಕಾಣಿಸಿಕೊಂಡಿದೆ.

ಮೇ ಮತ್ತು ಜೂನ್ ತಿಂಗಳಲ್ಲಿ ಪತ್ತೆಯಾದ ಕೊರೊನಾ ರೂಪಾಂತರಗಳ ವಿವರ ಹೀಗಿದೆ… ಡೆಲ್ಟಾ- 3, ಇತರೆ- 14, ಬಿಎ1.1.529- 189, ಬಿಎ1- 1, ಬಿಎ2- 1964, ಬಿಎ3- 2, ಬಿಎ4- 4, ಬಿಎ5- 38, ಒಟ್ಟು ಪರೀಕ್ಷೆಗೆ ಒಳಪಡಿಸಿದ ಸ್ಯಾಂಪಲ್​ಗಳು- 2215.

ದೇಶದಲ್ಲಿ ಕೊರೊನಾ ಮತ್ತಷ್ಟು ಉಲ್ಬಣ

ದೇಶದಲ್ಲಿ ಕೊರೊನಾ (Coronavirus) ಪ್ರಕರಣಗಳ ಸಂಖ್ಯೆ ದಿನೇ ದಿನೆ ಉಲ್ಬಣಗೊಳ್ಳುತ್ತಿದ್ದು, ನಾಲ್ಕನೇ ಅಲೆಯ ಆತಂಕ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ 13,313 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 38 ಮಂದಿ ಮೃತಪಟ್ಟಿರುವ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 83,990 ಇದ್ದು ಪಾಸಿಟಿವಿಟಿ ದರ ಶೇ.2.03ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 14,91,941 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,96,62,11,973 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,941ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 10,972 ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,27,36,027ಕ್ಕೆ ಏರಿಕೆಯಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:00 am, Thu, 23 June 22

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!